ದೀಪಾವಳಿ ಹಬ್ಬ | ಪಟಾಕಿ ಮಾರಾಟಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

Date:

ಅತ್ತಿಬೆಲೆ ಪಟಾಕಿ ದುರಂತ ಸಂಭವಿಸಿದ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸಿ, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಹಿನ್ನೆಲೆ, ಈ ವರ್ಷದ ಬೆಳಕಿನ ಹಬ್ಬಕ್ಕೆ ಪಟಾಕಿ ನಿಯಂತ್ರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ದೀಪಾವಳಿ ಹಬ್ಬದ ಹಿನ್ನೆಲೆ, ರಾಜಧಾನಿಯಲ್ಲಿ ಎಲ್ಲೆಂದರಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯುವ ಹಾಗಿಲ್ಲ. ಪಾಲಿಕೆ ಮಳಿಗೆ ತೆರೆಯಲು ಎಲ್ಲಿ ಅನುಮತಿ ನೀಡಿರುತ್ತದೆಯೋ ಅಲ್ಲಿ ಮಾತ್ರ ಪಟಾಕಿ ಮಳಿಗೆ ತೆರೆಯಲು ಸೂಚನೆ ನೀಡಲಾಗಿದೆ. ಜತೆಗೆ, ಜನವಸತಿ ಪ್ರದೇಶಗಳಲ್ಲಿ ಪಟಾಕಿ ಸಿಡಿಸಲು ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕೂಡ ಜಾಗೃತಿ ಕ್ರಮಗಳನ್ನು ಜಾರಿಗೊಳಿಸಿದೆ.

ಧಾರ್ಮಿಕ ಮೈದಾನಗಳು, ಶಾಲಾ ಕಾಲೇಜಿನ ಮೈದಾನಗಳು, ಕೇಂದ್ರ-ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಡುವ ಕಾರ್ಖಾನೆ, ರಕ್ಷಣಾ ಇಲಾಖೆ ಮೈದಾನಗಳು ಸೇರಿದಂತೆ ಖಾಸಗಿ ಮೈದಾನಗಳಲ್ಲೂ ಪಟಾಕಿ ಮಾರಾಟವನ್ನು ನಿರ್ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಬಿಎಂಪಿ ಗುರುತು ಮಾಡಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ವಲಯದಲ್ಲಿ 2 ಅಥವಾ 3 ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಒಂದು ಮೈದಾನದಲ್ಲಿ 10 ಮಳಿಗೆಗಳನ್ನು ತೆರೆಯಬೇಕು. ಜತೆಗೆ ಪ್ರತಿ ಮಳಿಗೆಯ ನಡುವೆ ಮೂರರಿಂದ 4 ಅಡಿ ಅಂತರವಿದ್ದು, ಬೆಂಕಿ ನಂದಿಸುವ ಉಪಕರಣ ಕೂಡ ಕಡ್ಡಾಯವಾಗಿ ಇರಬೇಕು. ಪಟಾಕಿ ಮಾರುವವರು ಮಳಿಗೆಯ ಪರವಾನಗಿ ಪ್ರದರ್ಶಿಸಬೇಕು. ಯಾರಾದರೂ ಅವಧಿ ಮುಗಿದ ಪಟಾಕಿ ಮಾರಾಟ ಮಾಡಿದರೆ ದಂಡ ವಿಧಿಸುವಂತೆ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ, ಅದು ತಪ್ಪು ಕಲ್ಪನೆ : ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ದಕ್ಷಿಣ ವಲಯದ 9 ಮೈದಾನದಲ್ಲಿ 87 ಮಳಿಗೆ, ಮಹದೇವಪುರ ವಲಯದ 13 ಮೈದಾನ 50 ಮಳಿಗೆ, ಬೊಮ್ಮನಹಳ್ಳಿ ವಲಯದ 3 ಮೈದಾನ 6 ಮಳಿಗೆ, ಪಶ್ಚಿಮ ವಲಯದ 4 ಮೈದಾನ 63 ಮಳಿಗೆ, ಪೂರ್ವ ವಲಯದ 23 ಮೈದಾನ 101 ಮಳಿಗೆ, ದಾಸರಹಳ್ಳಿ ವಲಯದ 2 ಮೈದಾನ 18 ಮಳಿಗೆ ಜತೆಗೆ ಆರ್ ಆರ್ ನಗರ ವಲಯದಲ್ಲಿ 5 ಮೈದಾನವನ್ನು ಗುರುತಿಸಿ 62 ತಾತ್ಕಾಲಿಕ ಮಳಿಗೆಗೆ ಅವಕಾಶ ನೀಡಲಾಗಿದೆ.

ಪಾಲಿಕೆಯಿಂದ ಮುನ್ನೆಚ್ಚರಿಕೆಯಾಗಿ 70 ಮೈದಾನದಲ್ಲಿ 426 ಪಟಾಕಿ ಮಳಿಗೆಗೆ ಒಪ್ಪಿಗೆ ದೊರೆತಿದೆ. ಆಯಾ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರಿಂದ ಸುರಕ್ಷತೆ ಪರಿಶೀಲನೆ ನಡೆಸಿ ಮಳಿಗೆ ಸ್ಥಾಪನೆಗೆ ಅವಕಾಶ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...