ಸಂತಾನ ನಿಯಂತ್ರಣಕ್ಕಾಗಿ ನಾಯಿಗಳನ್ನು ಯಲಹಂಕಕ್ಕೆ ಸ್ಥಳಾಂತರಿಸಬೇಡಿ; ಪ್ರಾಣಿ ಕಾರ್ಯಕರ್ತರ ಒತ್ತಾಯ

Date:

  • ಎಬಿಸಿ ಕೇಂದ್ರಗಳನ್ನು ಸ್ಥಾಪಿಸಲು ₹5 ಕೋಟಿ ಮಂಜೂರು ಮಾಡಿದ ಪಾಲಿಕೆ
  • ಎಬಿಸಿ ವಿಧಾನವನ್ನು ನಿಲ್ಲಿಸಿದರೆ ನಾಯಿಗಳ ಸಂಖ್ಯೆ ಹೆಚ್ಚಾಗಲಿದೆ; ಜಂಟಿ ನಿರ್ದೇಶಕ

ಬೆಂಗಳೂರಿನಲ್ಲಿ ಬೀದಿನಾಯಿಗಳಿಗೆ ಜನನ ನಿಯಂತ್ರಣ ಶಸ್ತ್ರಚಿಕಿತ್ಸೆ (ಎಬಿಸಿ) ಕಾರ್ಯಕ್ರಮವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸುತ್ತಿದೆ. ಈ ನಡುವೆ ಕಳೆದ ಕೆಲವು ವಾರಗಳ ಹಿಂದೆ ಮಹದೇವಪುರ ವಲಯದಲ್ಲಿ ಶಸ್ತ್ರಚಿಕಿತ್ಸಾ ಕೇಂದ್ರವನ್ನು ಮುಚ್ಚಲಾಗಿದ್ದು, ನಾಯಿಗಳನ್ನು ಯಲಹಂಕದಲ್ಲಿರುವ ಕೇಂದ್ರಕ್ಕೆ ಕರೆದೊಯ್ಯಲು ಸೂಚಿಸಲಾಗಿದೆ. ನಾಯಿಗಳನ್ನು ಅಲ್ಲಿಯವರೆಗೆ ಕರೆದೊಯ್ಯುವುದು ಕಷ್ಟಕರವಾಗಿದ್ದು, ಮಹದೇವಪುರ ವಲಯದಲ್ಲಿ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಪ್ರಾಣಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

“ಬೀದಿನಾಯಿಗಳಿಗೆ ಜನನ ನಿಯಂತ್ರಣ ಶಸ್ತ್ರಕ್ರಿಯೆಗಳನ್ನು ನಡೆಸಲು ಮಹದೇವಪುರದಲ್ಲಿ ಪಾಲಿಕೆ ಮೂರು ವರ್ಷಗಳಿಂದ ಮಾಸಿಕ ₹60,000 ಬಾಡಿಗೆ ನೀಡಿ ಜಾಗವನ್ನು ತೆಗೆದುಕೊಂಡಿತ್ತು. ಕೆಲ ತಿಂಗಳ ಹಿಂದೆ ಬಾಡಿಗೆ ಒಪ್ಪಂದದ ಅವಧಿ ಮುಗಿದಿದ್ದು, ನಿವೇಶನ ತೆರವು ಮಾಡುವಂತೆ ಮಾಲೀಕರು ಮೂರು ತಿಂಗಳ ಕಾಲಾವಕಾಶ ನೀಡಿದ್ದರು” ಎಂದು ಮೂಲಗಳಿಂದ ತಿಳಿದುಬಂದಿದೆ.

“ಪಾಲಿಕೆಯು ಎಬಿಸಿ ಕೇಂದ್ರವನ್ನು ಸ್ಥಾಪಿಸಲು ಹೊಸ ಸ್ಥಳವನ್ನು ಹುಡುಕಲು ಪ್ರಾರಂಭಿಸಿತು. ಆದರೆ, ಮಹದೇವಪುರದಲ್ಲಿ ಸ್ಥಳಗಳನ್ನು ಹುಡುಕಲು ವಿಫಲವಾಯಿತು. ಬಳಿಕ, ಯಲಹಂಕದ ಎಬಿಸಿ ಕೇಂದ್ರದಲ್ಲಿ ಬೀದಿ ನಾಯಿಗಳಿಗೆ ಜನನ ನಿಯಂತ್ರಣ ಶಸ್ತ್ರ ಚಿಕಿತ್ಸೆ ನಡೆಸಲು ನಿರ್ಧರಿಸಿತು” ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಕ್ರೌಲ್ಟಿ ಟು ಅನಿಮಲ್ಸ್ ಆಂಡ್ ಅನಿಮಲ್ ವೆಲ್‌ಫೇರ್ ಸ್ವಯಂಸೇವಕರು ಇತ್ತೀಚೆಗೆ ಯಲಹಂಕದ ಎಬಿಸಿ ಕೇಂದ್ರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು.

“ಮಹದೇವಪುರ ವಲಯದಲ್ಲಿ ಕೇಂದ್ರ ಗುರುತಿಸುವವರೆಗೆ ಎಬಿಸಿ ಕಾರ್ಯಕ್ರಮ ನಿಲ್ಲಿಸಬೇಕು. ಯಲಹಂಕದಲ್ಲಿ ನಾಯಿಗಳನ್ನು ಹಿಡಿದಿಡಲು ಸಾಕಷ್ಟು ಸ್ಥಳಾವಕಾಶವಿಲ್ಲ. ಸ್ವಚ್ಛವಾಗಿರುವ ನಾಯಿಗಳ ಜತೆಗೆ ಅಶುಚಿಯಿಂದ ಕೂಡಿದ ನಾಯಿಗಳನ್ನು ಹಾಕಲಾಗುತ್ತಿದೆ. ನಾಯಿಗಳನ್ನು ವ್ಯಾನ್‌ಗಳಲ್ಲಿ ತುಂಬುವಾಗ ಸರಿಯಾಗಿ ನಿರ್ವಹಿಸುವುದಿಲ್ಲ” ಎಂದು ಪ್ರಾಣಿ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

“ಮಹದೇವಪುರ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿ ಎಬಿಸಿ ಕೇಂದ್ರಗಳನ್ನು ಸ್ಥಾಪಿಸಲು ಪಾಲಿಕೆ ₹5 ಕೋಟಿ ಮಂಜೂರು ಮಾಡಿದೆ. ಆದರೆ, ಸೂಕ್ತ ಸ್ಥಳದ ಕೊರತೆಯಿಂದ ಯೋಜನೆ ಬಾಕಿ ಉಳಿದಿದೆ” ಎಂದು ಬಿಬಿಎಂಪಿ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಕೆಪಿ ರವಿಕುಮಾರ್ ತಿಳಿಸಿದರು.

”ಮಹದೇವಪುರ ವಲಯದಲ್ಲಿ ಕೆಲವು ತಿಂಗಳ ಹಿಂದೆ ಬಾಡಿಗೆ ಅವಧಿ ಮುಗಿದಿದ್ದರಿಂದ ಎಬಿಸಿ ಕೇಂದ್ರ ಸ್ಥಾಪಿಸಲು ಪರ್ಯಾಯ ಜಾಗ ಹುಡುಕಲು ಪ್ರಯತ್ನಿಸಿದೆವು. ಆದರೆ, ಎಲ್ಲಿಯೂ ಸ್ಥಳ ದೊರಕಲಿಲ್ಲ. ಹೀಗಾಗಿ, ಯಲಹಂಕದಲ್ಲಿ ಜನನ ನಿಯಂತ್ರಣ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿದ್ದೇವೆ” ಎಂದು ಕುಮಾರ್ ಹೇಳಿದರು.

“ಈ ಹಿಂದೆ ಎಬಿಸಿ ಕೇಂದ್ರ ಇದ್ದಾಗ ಬಿಬಿಎಂಪಿಯು ಮಹದೇವಪುರ ವಲಯದಲ್ಲಿ ನಿತ್ಯ 15-20 ನಾಯಿಗಳಿಗೆ ಜನನ ನಿಯಂತ್ರಣ ಶಸ್ತ್ರ ಚಿಕಿತ್ಸೆ ಮಾಡುತ್ತಿತ್ತು. ಈಗ, ಮಹದೇವಪುರದಿಂದ ತುಂಬಾ ದೂರದಲ್ಲಿರುವ ಯಲಹಂಕದ ಎಬಿಸಿ ಕೇಂದ್ರದಲ್ಲಿ ಶಸ್ತ್ರಚಿಕಿತ್ಸೆ ನಡೆಸುವುದರಿಂದ ಶಸ್ತ್ರಚಿಕಿತ್ಸೆ ನೀಡುವ ಸಂಖ್ಯೆಯನ್ನು 10ಕ್ಕೆ ಇಳಿಸಿದ್ದೇವೆ” ಎಂದು ಅವರು ಹೇಳಿದರು.

“ನಾಯಿಗಳನ್ನು ಮಹದೇವಪುರದಿಂದ ಯಲಹಂಕಕ್ಕೆ ಸ್ಥಳಾಂತರಿಸಲು ಸುಮಾರು ಎರಡು ಗಂಟೆ ಬೇಕಾಗುತ್ತದೆ. ಶಸ್ತ್ರಚಿಕಿತ್ಸೆ ನಡೆಸುವ ಮುನ್ನ ಒಂದು ದಿನ ಅವುಗಳನ್ನು ಎಬಿಸಿ ಕೇಂದ್ರದಲ್ಲಿ ಇರಿಸುತ್ತೇವೆ. ಮೂರು ದಿನಗಳ ಕಾಲ ಚಿಕಿತ್ಸೆ ನೀಡುತ್ತೇವೆ. ನಂತರ ಅವುಗಳನ್ನು ಕರೆದುಕೊಂಡ ಹೋದ ಸ್ಥಳಕ್ಕೆ ಹಿಂತಿರುಗಿ ಬಿಡುತ್ತೇವೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಮದ್ರಾಸ್ ಐ’ ಪ್ರಕರಣಗಳ ಹೆಚ್ಚಳ; ಲಕ್ಷಣಗಳು ಇಂತಿವೆ

“ಶಸ್ತ್ರಚಿಕಿತ್ಸೆಗಳನ್ನು ನಿಲ್ಲಿಸುವುದು ಅಸಾಧ್ಯ. ಏಕೆಂದರೆ, ಸ್ಥಳವನ್ನು ಹುಡುಕಲು ಮತ್ತು ಎಬಿಸಿ ಕೇಂದ್ರವನ್ನು ಸ್ಥಾಪಿಸಲು ಕನಿಷ್ಠ ಒಂದೂವರೆ ವರ್ಷಗಳು ಬೇಕಾಗಬಹುದು. ಇಷ್ಟು ದಿನ ಈ ವಿಧಾನವನ್ನು ನಿಲ್ಲಿಸಿದರೆ ನಾಯಿಗಳ ಸಂಖ್ಯೆ ಹೆಚ್ಚಾಗಲಿದೆ. ಮಹದೇವಪುರದಲ್ಲಿ ಎಬಿಸಿ ಕೇಂದ್ರ ಸ್ಥಾಪಿಸಲು ಬಿಬಿಎಂಪಿ ಜಾಗ ನೀಡುವವರೆಗೆ ಈ ವ್ಯವಸ್ಥೆ ಮುಂದುವರಿಯಲಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...