ನಿಮ್ಮ ಮೊಬೈಲ್ ಸಂಖ್ಯೆಗಳನ್ನು ಸವಾರರೊಂದಿಗೆ ಹಂಚಿಕೊಳ್ಳಬೇಡಿ ಎಂದ ರ‍್ಯಾಪಿಡೋ

Date:

  • ಎಲೆಕ್ಟ್ರಾನಿಕ್ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು; ಆರೋಪಿಯ ಬಂಧನ
  • ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆಗೆ ಬಂದಿದ್ದ ಯುವತಿ

ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳಲ್ಲಿ ಸಂಚರಿಸುತ್ತಿರುವ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ ಜತೆಗೆ ಲೈಂಗಿಕ ಕಿರುಕುಳ ನೀಡುವ ಘಟನೆಗಳು ವರದಿಯಾಗುತ್ತಿವೆ. ಈ ಹಿನ್ನೆಲೆ, ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ರ‍್ಯಾಪಿಡೋ ಗ್ರಾಹಕರಿಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಬೈಕ್‌ ಸವಾರರೊಂದಿಗೆ ಹಂಚಿಕೊಳ್ಳದಂತೆ ಮನವಿ ಮಾಡಿದೆ.

ಇತ್ತೀಚೆಗೆ ರ‍್ಯಾಪಿಡೋ ಬೈಕ್ ಟ್ಯಾಕ್ಸಿಯಲ್ಲಿ ಸಂಚರಿಸುತ್ತಿವಾಗ ಸವಾರ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದಡಿ ಸವಾರ ಗುರು ವೆಂಕಟಪ್ಪನ ವಿರುದ್ಧ ಅತಿರಾ ಪುರುಷೋತ್ತಮನ್ ಎಂಬುವರು ಟ್ವೀಟ್‌ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ದೂರು ದಾಖಲಿಸಿದ ಬೆನ್ನಲ್ಲೇ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಅತಿರಾ ಪುರುಷೋತ್ತಮನ್ ಅವರಿಗೆ ರ‍್ಯಾಪಿಡೋ ಕಂಪನಿ ಪ್ರತಿನಿಧಿಗಳು ಕ್ಷಮೆಯಾಚಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ ಆರೋಪಿ ಸವಾರನನ್ನು ಸಂಸ್ಥೆಯ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ರ‍್ಯಾಪಿಡೋ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಹಕರು ರೈಡ್‌ಗಾಗಿ ರ‍್ಯಾಪಿಡೋ ಬುಕ್ ಮಾಡಿದ ನಂತರ ಪ್ರಮುಖವಾಗಿ ಆ್ಯಪ್‌ನಲ್ಲಿ ದಾಖಲಾದ ವಿವರಗಳು ಹಾಗೂ ವಾಹನದ ಸಂಖ್ಯೆಯ ವಿವರಗಳು ಹೊಂದಿಕೆಯಾಗದಿದ್ದರೆ, ಸವಾರಿ ಮಾಡಬೇಡಿ ಎಂದು ಗ್ರಾಹಕರಿಗೆ ಸಲಹೆ ನೀಡಿದೆ.

“ಗ್ರಾಹಕರು ತಮ್ಮ ಪ್ರಯಾಣವನ್ನು ಪ್ರಾರಂಭಿಸುವ ಮೊದಲು ಕ್ಯಾಪ್ಟನ್ ಮತ್ತು ವಾಹನದ ವಿವರಗಳು ನಿಖರವಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹಾಗೂ ಎಲ್ಲರಿಗೂ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ” ಎಂದಿದೆ.

“ಎಲ್ಲ ಮಾತುಕತೆಗಳು ಸುರಕ್ಷಿತ ಮೂರನೇ ವ್ಯಕ್ತಿಯ ಕರೆ (ಮಾಸ್ಕಿಂಗ್ ಸೇವೆ) ಮೂಲಕ ಎರಡೂ ಕಡೆ ಗೌಪ್ಯತೆ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ. ಹೀಗಾಗಿ, ಗ್ರಾಹಕರು ತಮ್ಮ ಮೊಬೈಲ್ ಸಂಖ್ಯೆಗಳನ್ನು ಹಂಚಿಕೊಳ್ಳಬೇಕಾಗಿಲ್ಲ. ಸವಾರ ಮತ್ತು ಬೈಕ್ ನಡುವೆ ಹೊಂದಾಣಿಕೆಯಾಗದಿದ್ದರೆ ಅಂತಹ ಪ್ರಯಾಣವನ್ನು ಮುಂದುವರಿಸಬೇಡಿ” ಎಂದು ಕಂಪನಿಯು ಗ್ರಾಹಕರಿಗೆ ಹೇಳಿದೆ.

“ನಮ್ಮ ಉದ್ಯಮದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರ ಬಗ್ಗೆಯೂ ಕಟ್ಟುನಿಟ್ಟಾಗಿ ಅವರ ಹಿನ್ನೆಲೆಯನ್ನು ಪರಿಶೀಲನೆ ಮಾಡುತ್ತೇವೆ. ಇದರಿಂದ ಅವರ ಬಗ್ಗೆ ತಿಳಿದುಕೊಳ್ಳಲು ಸಹಾಯಕಾರಿಯಾಗುತ್ತದೆ. ತಪಾಸಣೆ ನಡೆಸುವುದರಿಂದ ಅವರಿಂದ ಯಾವುದೇ ತೊಂದರೆಯಿಲ್ಲ ಎಂಬುದನ್ನು ತಿಳಿಯಲು ಸಹಾಯಕಾರಿಯಾಗಿದೆ. ನಂಬಲರ್ಹ ವ್ಯಕ್ತಿಗಳು ಮಾತ್ರ ರ‍್ಯಾಪಿಡೋ ಸವಾರರು ಆಗುತ್ತಾರೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಆಗಸ್ಟ್‌ 1 ರಿಂದ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆಯಲ್ಲಿ ಶೇ. 10ರಷ್ಟು ಹೆಚ್ಚಳ

ಏನಿದು ಘಟನೆ?

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಶುಕ್ರವಾರ ಮಧ್ಯಾಹ್ನ ನಗರದ ಟೌನ್‍ಹಾಲ್ ಬಳಿ ನಡೆದಿದ್ದ ಪ್ರತಿಭಟನೆಗೆ ಸಂತ್ರಸ್ತೆ ಯುವತಿ ಬಂದಿದ್ದರು. ಮರಳಿ ಎಲೆಕ್ಟ್ರಾನಿಕ್ ಸಿಟಿಯ ತಮ್ಮ ಮನೆಗೆ ತೆರಳಲು ಯುವತಿ ಟೌನ್‌ಹಾಲ್‌ನಿಂದ ರೈಡ್‌ಗಾಗಿ ರ‍್ಯಾಪಿಡೋ ಬುಕ್ ಮಾಡುತ್ತಿದ್ದರು.

ಈ ವೇಳೆ, ಪದೇಪದೆ ಆಟೋ ರೈಡ್‌ ಬುಕ್ ಆಗದೆ ಕ್ಯಾನ್ಸಲ್ ಆದ ಕಾರಣ ವಿಧಿಯಿಲ್ಲದೆ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದರು. ರೈಡ್‌ ಬುಕ್ ಮಾಡುವಾಗ ಆ್ಯಪ್‍ನಲ್ಲಿ ತೋರಿಸಿದ ನಂಬರಿನ ಬೈಕ್ ರಿಪೇರಿಯಲ್ಲಿದೆ. ಹಾಗಾಗಿ, ಈ ಬೈಕ್ ತಂದಿದ್ದೇನೆ ಎಂದು ಸವಾರ ಸಮಜಾಯಿಷಿ ನೀಡಿ ಮಹಿಳೆಯನ್ನು ರೈಡ್‌ಗಾಗಿ ಕರೆದುಕೊಂಡು ಹೋದನು.

ಬಳಿಕ ರ‍್ಯಾಪಿಡೋ ಸವಾರ ಮಾರ್ಗ ಮಧ್ಯೆ ನಿರ್ಜನ ಪ್ರದೇಶದಲ್ಲಿ ಒಂದೇ ಕೈಯಲ್ಲಿ ಬೈಕ್ ಚಾಲನೆ ಮಾಡುತ್ತ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಸವಾರನ ವಿಚಿತ್ರ ಮನೋಭಾವ ನೋಡಿ ಯುವತಿ ತಮ್ಮ ಮನೆಗೆ 200 ಮೀಟರ್ ದೂರದಲ್ಲಿರುವಾಗಲೇ ರೈಡ್ ಮುಗಿಸಿ ಹಣ ಪಾವತಿಸಿ ಮನೆಗೆ ತೆರಳಿದ್ದರು. ಇಷ್ಟಕ್ಕೆ ಸುಮ್ಮನೆ ಆಗದ ಆರೋಪಿ ಸವಾರ ಡ್ರಾಪ್ ಮಾಡಿದ ನಂತರ ಯುವತಿಗೆ ಪದೇಪದೆ ಕರೆ ಮಾಡಿ, ಅಸಭ್ಯವಾಗಿ ಸಂದೇಶಗಳನ್ನು ಕಳುಹಿಸಿದ್ದಾನೆ.

ಸವಾರನ ಕಿರುಕುಳದಿಂದ ಬೇಸತ್ತ ಯುವತಿಯು ಆತ ಮೆಸೇಜ್ ಮಾಡಿರುವ ಸ್ಕ್ರೀನ್ ಶಾಟ್ ಸಮೇತ ಟ್ವೀಟ್ ಮಾಡಿ, ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

“ಲಿಂಗವನ್ನು ಲೆಕ್ಕಿಸದೆ ಪ್ರತಿಯೊಬ್ಬ ನಾಗರಿಕರು ಸುರಕ್ಷತೆ ಮತ್ತು ಭದ್ರತೆಗೆ ಅರ್ಹರು. ಮಹಿಳೆಯರು ಹಿಂಸೆಯ ಭಯದಲ್ಲಿ ಬದುಕದೆ ಮುಕ್ತವಾಗಿ ಓಡಾಡುವಂತಾಗಬೇಕು. ಮಹಿಳೆಯರು ಆಟೋ ಅಥವಾ ಕಾರಿನ ಬದಲು ಬೈಕ್ ಟ್ಯಾಕ್ಸಿಯನ್ನು ಏಕೆ ಆರಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸುವ ಬದಲು, ಎಲ್ಲ ವ್ಯಕ್ತಿಗಳು ತಮ್ಮ ಸುರಕ್ಷತೆ, ಭದ್ರತೆ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸಬಹುದಾದ ಸುರಕ್ಷಿತ ಸ್ಥಳಗಳನ್ನು ರಚಿಸುವ ತುರ್ತು ಅಗತ್ಯವನ್ನು ನಿರ್ಮಾಣ ಮಾಡಬೇಕು. ಸುರಕ್ಷತೆ ಮತ್ತು ಸಮಾನತೆಯು ಸಾರ್ವತ್ರಿಕ ಹಕ್ಕುಗಳಾಗಿರಬೇಕು. ಒಂದು ಲಿಂಗಕ್ಕೆ ಮಾತ್ರ ಮೀಸಲಾದ ಸವಲತ್ತುಗಳಲ್ಲ” ಎಂದು ಅತಿರಾ ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಇಂತಹ ಘಟನೆಗಳನ್ನು ಅತ್ಯಂತ ಆದ್ಯತೆಯಿಂದ ಪರಿಗಣಿಸಲಾಗಿದೆ. ಕಿರುಕುಳ ನೀಡಿದವರನ್ನು ಕೂಡಲೇ ಬಂಧಿಸಲಾಗಿದೆ. ಇದು ನನಗೆ ಭರವಸೆ ನೀಡುತ್ತದೆ. ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಿದ್ದಕ್ಕಾಗಿ ಧನ್ಯವಾದಗಳು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...