ಕೆಎಸ್‌ಆರ್‌ಟಿಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಚಾಲಕನ ದಿಟ್ಟ ಹೋರಾಟ: ದಬ್ಬಾಳಿಕೆ ವಿರುದ್ಧ ಗೆದ್ದು ಬೀಗಿದ ಜಯದೇವ್‌

Date:

ಸಾರಿಗೆ ಸಂಸ್ಥೆಯೊಳಗಿನ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ದಬ್ಬಾಳಿಕೆಯ ವಿರುದ್ಧ ಧ್ವನಿ ಎತ್ತಿದ ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಜಯದೇವ್ ಎಂ ಅವರು ದೀರ್ಘ ಕಾನೂನು ಹೋರಾಟದ ನಂತರ ಜಯಗಳಿಸಿದ್ದಾರೆ. ಸಂಸ್ಥೆಯ ಉನ್ನತ ಅಧಿಕಾರಿಗಳ ಪಿತೂರಿಯ ನಡುವೆಯೂ ಸತ್ಯಕ್ಕೆ ಜಯ ಸಿಕ್ಕಿರುವುದು ಈಗ ಸಾರಿಗೆ ವಲಯದಲ್ಲಿ ಸಂಚಲನ ಮೂಡಿಸಿದೆ.

​ಬೆಂಗಳೂರಿನ ಸ್ಯಾಟಲೈಟ್ ಡಿಪೋ-6ರಲ್ಲಿ ಕೆಲಸ ಮಾಡುತ್ತಿದ್ದ ನೌಕರರು ರಜೆ ಪಡೆಯಲು ಅಥವಾ ಪ್ರತಿದಿನದ ಕರ್ತವ್ಯ ಹಂಚಿಕೆಗಾಗಿ ಅಧಿಕಾರಿಗಳಿಗೆ ಲಂಚ ನೀಡಬೇಕಾದ ಅನಿವಾರ್ಯತೆ ಇತ್ತು. ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಅಧಿಕಾರಿಗಳು ತಲಾ 5,000 ದಿಂದ 10,000 ರೂಪಾಯಿಗಳವರೆಗೆ ಹಣ ಪಡೆಯುತ್ತಿದ್ದರು. ಈ ಅಕ್ರಮವನ್ನು ಪತ್ತೆಹಚ್ಚಿದ ಜಯದೇವ್ ಎಂ ಅವರು, ಸಾಕ್ಷಿ ಸಮೇತ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ದೂರು ನೀಡಿದ್ದರು.

​ದೂರು ನೀಡಿದ ಹಿನ್ನೆಲೆಯಲ್ಲಿ ಜಯದೇವ್ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ ಅಧಿಕಾರಿಗಳು, ಅವರ ಹೆಸರಿನಲ್ಲೇ ನಕಲಿ ಪತ್ರ ಸೃಷ್ಟಿಸಿದರು. “ನನ್ನ ಕುಟುಂಬ ಮಂಗಳೂರಿನಲ್ಲಿದೆ, ಅಲ್ಲಿಗೆ ವರ್ಗಾವಣೆ ಮಾಡಿ” ಎಂದು ಜಯದೇವ್ ಅವರ ಸಹಿಯನ್ನು ಫೋರ್ಜರಿ ಮಾಡಿ ಅಧಿಕಾರಿಗಳೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ನಕಲಿ ದಾಖಲೆಯನ್ನು ನಂಬಿ ಸಚಿವರು ನೀಡಿದ ಶಿಫಾರಸನ್ನು ಬಳಸಿ, ಅಧಿಕಾರಿಗಳು ಜಯದೇವ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಿದ್ದರು.

​ವರ್ಗಾವಣೆಯ ಹಿಂದಿನ ಕುತಂತ್ರವನ್ನು ಅರಿತ ಜಯದೇವ್, ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಫೋರ್ಜರಿ ಪ್ರಕರಣದ ಸತ್ಯಾಂಶವನ್ನು ವಿವರಿಸಿದರು. ಪ್ರಕರಣದ ಗಂಭೀರತೆ ಅರಿತ ಸಚಿವರು, ತಕ್ಷಣವೇ ತಮ್ಮ ಶಿಫಾರಸು ಪತ್ರವನ್ನು ಹಿಂಪಡೆದು, ವರ್ಗಾವಣೆ ರದ್ದುಪಡಿಸಿ ಯಥಾಸ್ಥಿತಿ ಕಾಪಾಡುವಂತೆ ಕೆಎಸ್‌ಆರ್‌ಟಿಸಿ ಎಂಡಿ ಅನ್ಬುಕುಮಾರ್ ಅವರಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು

​ಆದರೆ, ಸಚಿವರ ಸೂಚನೆ ಮತ್ತು ಫೋನ್ ಕರೆಯ ಹೊರತಾಗಿಯೂ ಎಂಡಿ ಅವರು ವರ್ಗಾವಣೆ ರದ್ದತಿಗೆ ವಿಳಂಬ ಮಾಡುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಇದರ ಹಿಂದೆ ಮುಖ್ಯ ಸಂಚಾರ ವ್ಯವಸ್ಥಾಪಕ ಜೆ. ಅಂತಣಿ ಜಾರ್ಜ್ ಅವರ ಪಿತೂರಿ ಇದೆ ಎಂದು ಜಯದೇವ್ ಆರೋಪಿಸಿದ್ದಾರೆ. ಸದ್ಯ ಈ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳಾದ ಜೆ. ಅಂತಣಿ ಜಾರ್ಜ್, ಎಟಿಎಸ್ ನೇತ್ರಾವತಿ ಎನ್ ಮತ್ತು ಸಚಿನ್ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ​ಪ್ರಸ್ತುತ ಜಯದೇವ್ ಎಂ ಅವರು ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...