ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು; ದರೋಡೆಕೋರನ ಬಂಧನ

Date:

  • ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ
  • ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಯಾಲೇಸ್ ಬಳಿ ಈ ಘಟನೆ ನಡೆದಿದೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ಶೇಷಾದ್ರಿಪುರಂ ಪೊಲೀಸರು ದರೋಡೆಕೋರನ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದಾರೆ.

ಕಳೆದ ಒಂದುವರೆ ವರ್ಷದಿಂದ ನಗರದಲ್ಲಿ ಪೊಲೀಸರ ಬಂದೂಕು ಸದ್ದು ಮಾಡಿರಲಿಲ್ಲ. ಹಾಗಾಗಿ, ನಗರದೆಲ್ಲೆಡೆ ಸರಗಳ್ಳನ, ವಾಹನ ಕಳ್ಳತನ, ಮಾರಕಾಸ್ತ್ರಗಳಿಂದ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಪೊಲೀಸರು ದರೋಡೆಕೋರ ಯಾಸರ್ (26) ಕಾಲಿಗೆ ಗುಂಡೇಟು ಹೊಡೆದು ಆತನನ್ನು ಆಸ್ಪತ್ರೆ ಬೆಡ್‌ ಮೇಲೆ ಮಲಗಿಸಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಯಾಲೇಸ್ ಬಳಿ ಈ ಘಟನೆ ನಡೆದಿದ್ದು, ಶೇಷಾದ್ರಿಪುರಂ ಪೊಲೀಸರಿಗೆ ಬೇಕಿದ್ದ ದರೋಡೆಕೋರ ಯಾಸರ್ ಇದೀಗ ಸೆರೆಯಲ್ಲಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರೋಡೆಕೋರ ಯಾಸರ್ ಅಲಿಯಾಸ್ ಘೋರ್ ಸುಲ್ತಾನ್ ಪಾಳ್ಯದ ಭುವನೇಶ್ವರ್ ನಗರದ ನಿವಾಸಿಯಾಗಿದ್ದಾನೆ. ಈತನು ಅಪ್ರಾಪ್ತನಾಗಿದ್ದನಿಂದಲೇ ಸುಲಿಗೆ, ರಾಬರಿಯಲ್ಲಿ ನಿಪುಣನಾಗಿದ್ದನು. ಡ್ರಗ್ಸ್‌ ತೆಗೆದುಕೊಂಡ ಬಳಿಕ ಜನರಿಂದ ದರೋಡೆ ಮಾಡುತ್ತಿದ್ದ. ಒಂದು ವೇಳೆ ಹಣ ಕೊಡಲಿಲ್ಲ ಎಂದರೆ, ಆತ ಚಾಕು ತೋರಿಸಿ ಹೆದರಿಸುತ್ತಿದ್ದನು.

ಈ ಹಿಂದೆ ಈತನನ್ನು ಸೆರೆ ಹಿಡಿಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಪೊಲೀಸರಿಂದ ಹೇಗಾದರೂ ಮಾಡಿ ತಪ್ಪಿಸಿಕೊಳ್ಳುತ್ತಿದ್ದನು. ಈತನ ಮೇಲೆ ಮೊಬೈಲ್ ಕಳ್ಳತನ, ಚೈನ್‌ ಸ್ನ್ಯಾಚಿಂಗ್, ರಾಬರಿ, ಸುಲಿಗೆಯಂತಹ ಏಳಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಈತನು ರಾಬರಿ ಮಾಡುವ ಪ್ರಕರಣಗಳು ಹೆಚ್ಚಾದಾಗ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದರು. ಶೇಷಾದ್ರಿಪುರಂ ಪೊಲೀಸರು ಆರೋಪಿ ಸೆರೆಹಿಡಿಯಲು ಮುಂದಾಗಿದ್ದರು. ಆತನ ಸಹಚರನ ಮಾಹಿತಿ ಮೇರೆಗೆ ಪೊಲೀಸರು ಯಾಸರ್ ಅರಮನೆ ಮೈದಾನದಲ್ಲಿ ಅಡಗಿದ್ದಾನೆ ಎಂಬ ವಿಚಾರ ತಿಳಿದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೆರಿಫೆರಲ್ ರಿಂಗ್ ರೋಡ್ | 2014ರ ಕಾಯ್ದೆ ಪ್ರಕಾರ ಪರಿಹಾರ ನೀಡಿ, ಇಲ್ಲ ಯೋಜನೆ ಕೈಬಿಡಿ ಎಂದ ರೈತರು

ಮಂಗಳವಾರ ಬೆಳಗ್ಗೆ ನಗರದ ಪ್ಯಾಲೇಸ್ ರೋಡ್ ಬಳಿ ಪೊಲೀಸರು ದರೋಡೆಕೋರನನ್ನು ಸೆರೆ ಹಿಡಿಯಲು ತೆರಳಿದ್ದರು. ಈ ವೇಳೆ, ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ದರೋಡೆಕೋರ ಪೊಲೀಸರ ಮೇಲೆಯೇ ಮಾರಕಾಸ್ತ್ರ ಹಿಡಿದು ಅಟ್ಯಾಕ್ ಮಾಡಲು ಪ್ರಯತ್ನಿಸಿದ್ದ, ಪೊಲೀಸರ ಆತ್ಮರಕ್ಷಣೆಗೆ ಶೇಷಾದ್ರಿಪುರಂ ಇನ್ಸ್‌ಪೆಕ್ಟರ್ ದರೋಡೆಕೋರನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಈತನಿಗೆ ಚಿಕಿತ್ಸೆ ನೀಡಿ, ಬಳಿಕ ವಿಚಾರಣೆ ನಡೆಸಲಾಗುವುದು ಎಂದು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಶೇಷಾದ್ರಿಪುರಂ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...