ಈಜಿಪುರ ಮೇಲ್ಸೇತುವೆ ನಿರ್ಮಾಣ ನಿಧಾನಗತಿ ಅಣಕಿಸಿ ಟ್ವೀಟ್: ಕಂಬಗಳ ಮೇಲೆ ಕಾಣಿಸಿಕೊಂಡ ವಿದ್ಯುತ್ ದೀಪ!

Date:

  • ಈಜಿಪುರ ಮೇಲ್ಸೇತುವೆ ನಿರ್ಮಾಣವಾಗದ ಕಾರಣ ದೀಪದ ಕಂಬಗಳಾಗಿ ಬಳಕೆ; ಟ್ವೀಟ್‌
  • ಕಾಮಗಾರಿ ಮತ್ತೆ ಆರಂಭವಾಗುತ್ತಿರುವ ಬಗ್ಗೆ ಸೂಚಿಸುತ್ತಿರುವ ವಿದ್ಯುತ್ ದೀಪಗಳು

ರಾಜ್ಯ ರಾಜಧಾನಿ ಬೆಂಗಳೂರಿನ ಈಜಿಪುರ ಮೇಲ್ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದು ಐದು ವರ್ಷಗಳು ಕಳೆದಿವೆ. ಇದೀಗ ಹೊಸ ಗುತ್ತಿಗೆದಾರರು ಸಿಕ್ಕಿದ್ದು, ಕಾಮಗಾರಿ ಆರಂಭವಾಗಬೇಕಿದೆ. ಈ ಮಧ್ಯೆ ಮೇಲ್ಸೇತುವೆ ನಿರ್ಮಾಣ ಹಂತದ ಕಂಬಗಳ ಮೇಲೆ ವಿದ್ಯುತ್ ದೀಪ ಹಾಕಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿದೆ.

ಅನರ್ವ ಗುಪ್ತಾ ಎಂಬುವವರು, “ಈಜಿಪುರ ಮೇಲ್ಸೇತುವೆ ನಿರ್ಮಾಣವಾಗದ ಕಾರಣ ಈಗ ಕಂಬಗಳನ್ನೇ ದೀಪದ ಕಂಬಗಳಾಗಿ ಬಳಸಲಾಗುತ್ತಿದೆ” ಎಂದು ಟ್ವೀಟ್‌ ಮಾಡಿ ಫೋಟೋ ಹಂಚಿಕೊಂಡಿದ್ದಾರೆ.

ಈ ಟ್ವೀಟ್‌ಗೆ ಹಲವು ಜನ ಪ್ರತಿಕ್ರಿಯೆ ನೀಡುತ್ತಿದ್ದು, “ಬೆಂಗಳೂರಿನಲ್ಲಿ ಸಂಚಾರಿ ದೀಪಗಳನ್ನು ಹೊಂದಿರುವ ಫ್ಲೈಓವರ್ ಇದೆ. ಶೀಘ್ರದಲ್ಲೇ ಹೆಬ್ಬಾಳ ಮೇಲ್ಸೇತುವೆಯಲ್ಲಿ ಟ್ರಾಫಿಕ್ ದೀಪಗಳು ಬರಬಹುದು. ಈಗ ಫ್ಲೈಓವರ್ ಪಿಲ್ಲರ್ ಮೇಲೆ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ನೇರವಾದ ರಸ್ತೆಗಳಲ್ಲಿ, ನಮ್ಮಲ್ಲಿ ರಸ್ತೆ ವಿಭಜಕಗಳು ನೇರವಾಗಿರುವುದಿಲ್ಲ. ಬೆಂಗಳೂರು ನಿಜವಾಗಿಯೂ ಶೀಘ್ರದಲ್ಲೇ ಸ್ಮಾರ್ಟ್ ಸಿಟಿಯಾಗಲಿದೆ” ಎಂದು ಎಮ್‌ ಎನ್‌ ರಾವ್ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅದ್ಭುತ ನೋಟ! ಕೇವಲ ನೂರು ವರ್ಷಗಳ ನಂತರ ಈ ಸ್ಥಳವನ್ನು ಕೋರಮಂಗಲದ 12 ಪ್ರಚಾರಕರು ಎಂದು ಕರೆಯುತ್ತಾರೆ! ಮೇಲಿನಿಂದ ವೀಕ್ಷಿಸಿ, ಕಂಬಗಳ ಮೇಲೆ ಕುಳಿತು ಉತ್ತಮವಾದ 7 ಸ್ಟಾರ್ ರೆಸ್ಟೋರೆಂಟ್ ಊಟ ಮಾಡಬಹುದು” ಎಂದು ಬಸು ಹೇಳಿದ್ದಾರೆ.

ಇನ್ನೂ ಕೆಲವರು, “ದೀಪಗಳು ಮೇಲ್ಸೇತುವೆ ಕಾಮಗಾರಿ ಮತ್ತೆ ಆರಂಭವಾಗುತ್ತದೆ ಎಂಬುದನ್ನು ಸೂಚಿಸುತ್ತಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಈಜಿಪುರ ಮೇಲ್ಸೆತುವೆ

ಈ ಮೇಲ್ಸೇತುವೆ ಕೋರಮಂಗಲದ 100 ಅಡಿ ಮುಖ್ಯ ರಸ್ತೆಯಲ್ಲಿ ಹಾದು ಹೋಗುತ್ತದೆ. ಈಜಿಪುರ ಮುಖ್ಯ ರಸ್ತೆ ಜಂಕ್ಷನ್, ಹೊರ ವರ್ತುಲ ರಸ್ತೆಯಿಂದ ಕೇಂದ್ರೀಯ ಸದನ ಜಂಕ್ಷನ್‌ಗೆ ಸಂಪರ್ಕ ಕಲ್ಪಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೀದಿನಾಯಿಗಳ ಗಣತಿಗೆ ಮೊದಲ ಬಾರಿಗೆ ಡ್ರೋನ್ ಬಳಕೆ

ಈ ಮೇಲ್ಸೇತುವೆ 2.5 ಕಿ.ಮೀ ಉದ್ದವಿದೆ. ಮೊದಲ ಬಾರಿಗೆ ಈ ಮೇಲ್ಸೇತುವೆ ನಿರ್ಮಾಣ ಮಾಡಲು ಕೋಲ್ಕತ್ತಾ ಮೂಲದ ನಿರ್ಮಾಣ ಸಂಸ್ಥೆ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ ಟೆಂಡರ್​ ಪಡೆದುಕೊಂಡಿತ್ತು. 2017ರಲ್ಲಿ ಈ ಮೇಲ್ಸೇತುವೆ ಕಾಮಗಾರಿ ಆರಂಭವಾಯಿತು. 2019ರ ಒಳಗೆ ಈ ಯೋಜನೆ ಪೂರ್ಣವಾಗುವ ನಿರೀಕ್ಷೆ ಇತ್ತು. ಈ ಸಂಸ್ಥೆ ಒಟ್ಟು 81 ಪಿಲ್ಲರ್‌ಗಳನ್ನು ನಿರ್ಮಿಸಬೇಕಿತ್ತು. ಆದರೆ, ಈ ಸಂಸ್ಥೆ 67 ಪಿಲ್ಲರ್‌ಗಳನ್ನಷ್ಟೇ ನಿರ್ಮಾಣ ಮಾಡಿದೆ. ಬಿಬಿಎಂಪಿ ಹಲವು ಬಾರಿ ಡೆಡ್‌ಲೈನ್ ನೀಡಿ, ಅವಧಿ ವಿಸ್ತರಣೆ ಮಾಡಿದರೂ ಕಾಮಗಾರಿ ವಿಳಂಬವಾದ ಕಾರಣ ಟೆಂಡರ್‌ ರದ್ದಾಗಿತ್ತು.

ಈಜಿಪುರ ಫ್ಲೈ ಓವರ್ ನಿರ್ಮಾಣ ಯೋಜನೆಗೆ ಬಿಬಿಎಂಪಿ ಒಟ್ಟು ₹252 ಕೋಟಿ ವ್ಯಯಿಸಬೇಕಿದೆ. ನಾಲ್ಕನೇ ಬಾರಿ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಕೇವಲ ಒಂದೇ ಒಂದು ಕಂಪನಿ ಭಾಗವಹಿಸಿದ ಕಾರಣ ಅವರಿಗೇ ಈ ಕಾಮಗಾರಿ ನಡೆಸುವ ಅವಕಾಶ ದೊರೆತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...