ಬೆಂಗಳೂರು | ಚೀನಾ ಮೂಲದ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ

Date:

  • ಹಣ ವರ್ಗಾವಣೆ ದಾಖಲೆಗಳ ಮಾಹಿತಿ ನೀಡದ ಶಿಕ್ಷಣ ಸಂಸ್ಥೆ
  • ಫೆಮಾ ಸೆಕ್ಷನ್ 37ಎ ಅಡಿಯಲ್ಲಿ ಹಣ ಜಪ್ತಿ; ಇ.ಡಿ ಹೇಳಿಕೆ

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಬೆಂಗಳೂರಿನ ‘ಪಿಜೆನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​’ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. 8.26 ಕೋಟಿ ರೂಪಾಯಿ ಹಣ ವಶಕ್ಕೆ ಪಡೆದಿದೆ.

‘ಪಿಜೆನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಒಡಾಕ್ಲಾಸ್ ಆ್ಯಪ್ ಮೂಲಕ ಆನ್‌ಲೈನ್ ಶಿಕ್ಷಣ ಒದಗಿಸುತ್ತಿದೆ. ಇದು ಚೀನಾ ಮೂಲದ ಲಿಯು ಕ್ಯಾನ್ ಹಾಗೂ ಭಾರತದ ವೇದಾಂತ್ ಹಮಿರ್ವಾಸಿಯಾ ಅವರನ್ನು ತನ್ನ ನಿರ್ದೇಶಕರನ್ನಾಗಿ ಹೊಂದಿದ್ದು, ಭಾರತದಲ್ಲಿ ಬೆಂಗಳೂರಿನಿಂದ ಕಾರ್ಯ ನಿರ್ವಹಿಸುತ್ತಿತ್ತು.

ಈ ಸಂಸ್ಥೆಯನ್ನು ಕ್ಯಾಮನ್ ದ್ವೀಪಗಳಿಂದಲೇ ಶೇಕಡಾ ನೂರರಷ್ಟು ಚೀನಾ ಮೂಲದ ವ್ಯಕ್ತಿಗಳು ನಿರ್ವಹಿಸುತ್ತಿದ್ದಾರೆ. ಜಾಹೀರಾತು ವೆಚ್ಚದ ಹೆಸರಿನಲ್ಲಿ ಕಂಪನಿಯ ಖಾತೆಯಿಂದ ₹82.72 ಕೋಟಿ ಹಣ ಚೀನಾ ಮತ್ತು ಹಾಂಕಾಂಗ್ ಮೂಲದ ಖಾತೆಗಳಿಗೆ ವರ್ಗಾವಣೆಯಾಗಿರುವುದು ತನಿಖೆ ವೇಳೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

ಈ ಬಗ್ಗೆ ಜಾರಿ ನಿರ್ದೇಶನಾಲಯ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, “ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ಸೆಕ್ಷನ್ 37ಎ ಅಡಿಯಲ್ಲಿ ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ. ಇಡಿ ಅಧಿಕಾರಿಗಳು ಕಳೆದ ಏಪ್ರಿಲ್​ನಲ್ಲಿ ಈ ಸಂಸ್ಥೆ ಮೇಲೆ ದಾಳಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಸಂಸ್ಥೆಯ ಎಲ್ಲ ವ್ಯವಹಾರಗಳು, ಹಣಕಾಸು ನಿರ್ಧಾರಗಳನ್ನು ಒಳಗೊಂಡಂತೆ ಪ್ರತಿಯೊಂದು ತೀರ್ಮಾನ ಚೀನಾದಲ್ಲಿರುವವರು ನಿರ್ಧರಿಸುತ್ತಿದ್ದಾರೆ. ಚೀನಾದ ನಿರ್ದೇಶಕ ಲಿಯು ಕ್ಯಾನ್ ಸೂಚನೆಯ ಮೇರೆಗೆ ಸಂಸ್ಥೆ ಜಾಹೀರಾತು ಮತ್ತು ಮಾರುಕಟ್ಟೆ ವೆಚ್ಚದ ಹೆಸರಿನಲ್ಲಿ ₹82.72 ಕೋಟಿ ಎರಡು ರಾಷ್ಟ್ರಗಳಿಗೆ ವರ್ಗಾವಣೆಗೊಂಡಿರುವುದನ್ನು ಪತ್ತೆ ಹಚ್ಚಲಾಗಿತ್ತು” ಎಂದು ಹೇಳಿದೆ.

ಅಲ್ಲದೇ, ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನ್ನ ಕಡೆಯಿಂದ ಯಾವುದೇ ಸೇವಾ ಸ್ವೀಕೃತಿಯ ದಾಖಲೆಗಳು ಮತ್ತು ಹೇಳಿದ ವೆಚ್ಚಗಳಿಗೆ ಯಾವುದೇ ಜಾಹೀರಾತಿನ ಪುರಾವೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿತ್ತು. ಜೊತೆಗೆ ಲಿಯು ಕ್ಯಾನ್‌ನ ಸೂಚನೆಯಂತೆ ಹಣ ಪಾವತಿಸಲಾಗಿತ್ತು ಕಂಪನಿಯ ನಿರ್ದೇಶಕ ಮತ್ತು ಖಾತೆ ವ್ಯವಸ್ಥಾಪಕರು ತನಿಖೆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದರು. ಗೂಗಲ್ ಮತ್ತು ಫೇಸ್‌ಬುಕ್ ಮೂಲಕ ಜಾಹೀರಾತುಗಳನ್ನು ಪ್ರಕಟಿಸಲಾಗಿದೆ ಎಂದು ಚೀನಾದ ನಿರ್ದೇಶಕರು ಹೇಳಿದ್ದರು ಎಂಬುವುದಾಗಿ ಸಂಸ್ಥೆಯ ಭಾರತೀಯ ನಿರ್ದೇಶಕ ವೇದಾಂತ ಹಮಿರ್ವಾಸಿಯಾ ಹೇಳಿಕೆ ನೀಡಿದ್ದರು ಎಂದು ವಿವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...