ಚುನಾವಣೆ 2023 | ಅನುಮತಿ ಪಡೆಯದೆ ಜಾಹೀರಾತು ನೀಡಿದರೆ ಅಭ್ಯರ್ಥಿ ವಿರುದ್ಧ ಅಗತ್ಯ ಕ್ರಮ: ಆಯುಕ್ತ

Date:

  • ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಬೇಕಾದರೆ ಪರಿಶೀಲನಾ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು
  • ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 2.36 ಲಕ್ಷ ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರೇಡಿಯೋ, ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಬೇಕಾದರೆ ಮಾಧ್ಯಮ ಪ್ರಮಾಣೀಕರಣ ಮತ್ತು ಪರಿಶೀಲನಾ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಜಾಹೀರಾತು ನೀಡಿದರೆ ಸಂಬಂಧಪಟ್ಟ ಅಭ್ಯರ್ಥಿಯ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್ ತಿಳಿಸಿದರು.

ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆ, ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಚುನಾವಣಾ ಮಾಹಿತಿ ಕಾರ್ಯಾಗಾರ ನಡೆಯಿತು.

ಈ ವೇಳೆ ಮಾತನಾಡಿದ ಅವರು, “ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಮೇಲೆ ನಿಗಾಹಿಸುವ ಸಲುವಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ದೃಶ್ಯ ಮಾಧ್ಯಮ, ರೇಡಿಯೋ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಜಾಹೀರಾತುಗಳ ಮೇಲೆ ನಿಗಾವಹಿಸಲು 3 ಪಾಳಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ. ದಿನದ 24 ಗಂಟೆಯೂ ಅವರು ನಿಗಾವಹಿಸಲಿದ್ದಾರೆ. ಪೂರ್ವಾನುಮತಿ ಪಡೆಯದ ಅಥವಾ ಪಾವತಿಸಿದ ಸುದ್ದಿಗಳು ಪ್ರಸಾರವಾದಲ್ಲಿ ಕೂಡಲೆ ಅದನ್ನು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗೆ ರವಾನಿಸಿ ಅದನ್ನು ಪರಿಶೀಲಿಸಿ ಶೀಘ್ರ ವರದಿ ನೀಡಲು ಸೂಚನೆ ನೀಡಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಸ್ಟಲ್ ಬ್ಯಾಲೆಟ್‌ನಲ್ಲಿ ಮತ ಚಲಾಯಿಸಿ

ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 2.36 ಲಕ್ಷ ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ. ಹಾಗಾಗಿ, ಅವರಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತ ಚಲಾಯಿಸಲು ಅವಕಾಶವಿದೆ. ನಾಮನಿರ್ದೇಶನಕ್ಕೂ ಮುಂಚಿತವಾಗಿ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು 80 ವರ್ಷ ಮೇಲ್ಪಟ್ಟವರ ಮನೆಗೆ ತೆರಳಿ ಪೋಸ್ಟಲ್ ಬ್ಯಾಲೆಟ್ ಹಾಕುವ ಬಗ್ಗೆ 12ಡಿ ಫಾರ್ಮ್ ಮೂಲಕ ಮಾಹಿತಿ ಪಡೆದುಕೊಳ್ಳುತ್ತಾರೆ” ಎಂದರು.

“ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಲು ಇಚ್ಛಿಸುವವರು ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬಹುದು. ಪೋಸ್ಟಲ್ ಬ್ಯಾಲೆಟ್ ವೇಳೆ ಮತಪೆಟ್ಟಿಗೆಯ ಜತೆಗೆ ಇಬ್ಬರು ಅಧಿಕಾರಿಗಳು ಹಾಗೂ ವೀಡಿಯೋ ಗ್ರಾಫರ್ ತೆರಳಿ ಮತ ಹಾಕಿಸಿಕೊಂಡು ಬರಲಿದ್ದಾರೆ” ಎಂದು ಹೇಳಿದರು.

“ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ನಾನಾ ಪಕ್ಷಗಳಿಂದ ಆಯ್ಕೆಯಾದಂತಹ ಅಭ್ಯರ್ಥಿಗಳು ₹40 ಲಕ್ಷ ವ್ಯಯಿಸಲು ಮಾತ್ರ ಅವಕಾಶವಿರುತ್ತದೆ. ಯಾವುದಕ್ಕೆ ಎಷ್ಟು ಹಣ ವ್ಯಯಿಸಲಾಗಿದೆ ಎಂಬ ಬಗ್ಗೆ ಅಭ್ಯರ್ಥಿಗಳು ಅಧಿಕಾರಿಗಳಿಗೆ ನಿಖರ ಮಾಹಿತಿಯನ್ನು ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲೆಕ್ಕಕ್ಕಾಗಿ ಮರಗಳ ಸುತ್ತ ಬೈಂಡಿಂಗ್ ವೈರ್‌ ಬಿಗಿದ ಬಿಎಂಆರ್‌ಸಿಎಲ್

ಆನ್ ಲೈನ್ ಮೂಲಕ ನಾಮಪತ್ರ ಸಲ್ಲಿಸಲು ಅವಕಾಶ

“ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಆಯ್ಕೆಯಾದ ಅಭ್ಯರ್ಥಿಗಳು https://encore.eci.gov.in ಎನ್‌ಕೋರ್ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ದಿನಾಂಕ, ಸಮಯವನ್ನು ನಿಗದಿಪಡಿಸಿಕೊಂಡು, ಆ ದಿನ ತೆರಳಿ ನಾಮಪತ್ರ ಸಲ್ಲಿಸಬಹುದು” ಎಂದು ಹೇಳಿದರು.

ಬ್ಯಾಂಕ್ ಖಾತೆಗಳ ಮೇಲೆ ನಿಗಾ

“ಒಂದೇ ಬ್ಯಾಂಕ್ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗುವುದು ಕಂಡುಬಂದರೆ ಅಂತವರ ಮೇಲೆ ನಿಗಾವಹಿಸಿ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಅಧಿಕಾರಿಗಳು ಬ್ಯಾಂಕ್ ಖಾತೆಗಳ ಮೇಲೆ ನಿಗಾವಹಿಸುತ್ತಿದ್ದಾರೆ” ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಟ್ರೈನಿಂಗ್ ನೋಡಲ್ ಅಧಿಕಾರಿಯಾದ ನಾಗರಾಜ್, ನಾಗೇಂದ್ರ ಹೊನ್ನವಳ್ಳಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...