ಚುನಾವಣೆ | ಕೆಎಸ್‌ಆರ್‌ಟಿಸಿಗೆ 350 ಬಸ್‌ ಬಾಡಿಗೆ ನೀಡಿದ ಬಿಎಂಟಿಸಿ; ಬೆಂಗಳೂರಿನಲ್ಲಿ ಸೇವೆಯಲ್ಲಿ ವ್ಯತ್ಯಯ

Date:

  • ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ
  • ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಕಾರ್ಯಾಚರಣೆ ನಡೆಸಿದ ಬಿಎಂಟಿಸಿಯ 350 ಬಸ್‌ಗಳು

ಮತದಾನದ ದಿನದಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ 6,850 ಬಸ್‌ಗಳ ಪೈಕಿ 1,700 ಬಸ್‌ಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ಮತ್ತು ಇನ್ನೂ 350 ವಾಹನಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ ನಿಯೋಜಿಸಿದ್ದರಿಂದಾಗಿ ನಗರದಲ್ಲಿ ಪ್ರಯಾಣಿಕರ ಸೇವೆಗಳಿಗೆ ತೊಂದರೆ ಉಂಟಾಯಿತು.

ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕಾಗಿ ನೀಡಿದ್ದು, ಬಿಎಂಟಿಸಿಯಿಂದ ಬಾಡಿಗೆ ಪಡೆದ 350 ಬಸ್‌ಗಳು ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಅಂದರೆ, ಮೈಸೂರು, ಮಂಡ್ಯ, ಮದ್ದೂರು, ತುಮಕೂರು, ಪಾವಗಡ, ಚಿತ್ರದುರ್ಗ, ಹೊಸದುರ್ಗ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿವೆ.

“ಬೆಳಗ್ಗೆ ಬಸ್‌ಗಳಿಗೆ ಸಾಕಷ್ಟು ಬೇಡಿಕೆ ಇತ್ತು. ಹೆಚ್ಚಿನ ಪ್ರಯಾಣಿಕರು ಮತ ಚಲಾಯಿಸಲು ತಮ್ಮ ಊರಿಗಳಿಗೆ ತೆರಳಿದ್ದಾರೆ” ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ, ಬಿಎಂಟಿಸಿ ಬೇಡಿಕೆಗೆ ಅನುಗುಣವಾಗಿ ಬಸ್ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿತ್ತು. ಮೇ 10ರಂದು ಸಾರ್ವಜನಿಕ ರಜೆ ಇದ್ದ ಕಾರಣ ನಗರದಲ್ಲಿ ಬಸ್‌ಗಳಲ್ಲಿ ಹೆಚ್ಚಿನ ಬೇಡಿಕೆ ಇರಲಿಲ್ಲ” ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

“ಮೆಜೆಸ್ಟಿಕ್ ಮತ್ತು ಶಿವಾಜಿನಗರ ಬಸ್ ನಿಲ್ದಾಣಗಳು ಹೆಚ್ಚು ಪ್ರಯಾಣಿಕರು ಮತ್ತು ಬಸ್‌ಗಳಿಲ್ಲದೆ ಖಾಲಿಯಾಗಿದ್ದವು. ಮೇ 9 ಮತ್ತು 10 ರಂದು ಬಿಎಂಟಿಸಿ ಬಸ್ ಸೇವೆಗೆ ತೊಂದರೆಯಾಗಿದೆ. ಪ್ರಯಾಣಿಕರು ಬಸ್ ಪಡೆಯಲು 45 ನಿಮಿಷದಿಂದ ಎರಡು ಗಂಟೆಗಳವರೆಗೆ ಕಾಯಬೇಕಾಯಿತು” ಎಂದು ಪ್ರಯಾಣಿಕರೊಬ್ಬರು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...