ಪ್ರತಾಪ್‌ ಸಿಂಹರನ್ನು ಉಚ್ಚಾಟನೆ ಮಾಡಲಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ ಒತ್ತಾಯ

Date:

ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸ್‌ಗಳನ್ನು ನೀಡಲು ಹೇಗೆ ಸಾಧ್ಯ? ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್‌ ಸಿಂಹ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್‌ ಶಾ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಸತ್ತಿನ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, “ಹೊಸ ಸಂಸತ್ತು ಉದ್ಘಾಟನೆಗೊಂಡ ನಂತರ ನಡೆದಿರುವ ಎರಡನೇ ಭದ್ರತಾ ಲೋಪ ಇದಾಗಿದೆ. 22 ವರ್ಷಗಳ ಹಿಂದಿನ ಭಯೋತ್ಪಾದಕರ ದಾಳಿ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ, ಈ ಘಟನೆ ಹಿಂದೆ ಬೇರೆ ಹುನ್ನಾರಗಳಿರಬಹುದು. ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಸೃಷ್ಟಿಸಿವೆ. ಮೈಸೂರಿನ ಮೂಲದ ಮನೋರಂಜನ್‌ ಅವರಿಗೆ ಈ ಮೊದಲು ಪ್ರತಾಪ್‌ ಸಿಂಹ ಅವರೇ ಎರಡು ಬಾರಿ ಪಾಸ್‌ ನೀಡಿದ್ದರು ಎನ್ನಲಾಗುತ್ತಿದೆ. ಸಂಸತ್‌ ಸಭಾಂಗಣ ಪ್ರವೇಶಿಸಲು ಪಾಸ್‌ ಸ್ವೀಕರಿಸಿದ ವ್ಯಕ್ತಿ ನಡೆಸುವ ಎಲ್ಲ ಕೃತ್ಯಗಳಿಗೆ ಪಾಸ್‌ ಕೊಟ್ಟ ಸಂಸದರೇ ಜವಾಬ್ದಾರರಾಗಿರುತ್ತಾರೆ. ಪರಿಚಿತರಿಗಷ್ಟೇ ಪಾಸ್‌ ನೀಡಬೇಕು ಎಂಬ ನಿಯಮವಿದೆ. ಇದೆಲ್ಲವೂ ಪಾಸ್‌ನಲ್ಲಿ ಉಲ್ಲೇಖವಾಗಿರುತ್ತದೆ. ಹಾಗಾಗಿ, ಪ್ರತಾಪ್‌ ಸಿಂಹ ಅವರನ್ನು ಉಚ್ಚಾಟಿಸಿ, ವಿಚಾರಣೆಗೆ ಒಳಪಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸತ್ತಿಗೆ ರಕ್ಷಣೆ ನೀಡಲಾಗದವರು, ಪ್ರಶ್ನಿಸಿದ ಸಂಸದರನ್ನು ಅಮಾನತುಗೊಳಿಸಿ ಪೌರುಷ ಮೆರೆಯುತ್ತಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುತ್ತಿದ್ದಾರೆ. ಆದರೆ, ಈ ಭದ್ರತಾ ವೈಫಲ್ಯಕ್ಕೆ ಮೂಲ ಸಂಸದ ಪ್ರತಾಪ್‌ ಸಿಂಹ. ಅವರು ಪಾಸ್‌ ನೀಡಿದ್ದರಿಂದಲೇ ಈ ಎಲ್ಲ ಅನಾಹುತಗಳಿಗೆ ಕಾರಣ. ಪ್ರತಾಪ್‌ ಸಿಂಹ ಅವರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸುವ ಬದಲು ಭದ್ರತಾ ವೈಫಲ್ಯದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದ ಸಂಸದರನ್ನೇ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ” ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

“ಸಂಸತ್‌ ಭವನ ಪ್ರವೇಶಿಸಲು ಪಾಸ್‌ ಹೊಂದಿರುವ ವ್ಯಕ್ತಿ ಬಿಗಿ ಭದ್ರತಾ ನಿಯಮ ಪಾಲಿಸಬೇಕಾಗುತ್ತದೆ. ನೀರಿನ ಬಾಟಲಿ, ಮೊಬೈಲ್‌, ಎಲೆಕ್ಟ್ರಾನಿಕ್‌ ಪರಿಕರ ಹಾಗೂ ಆಯುಧಗಳಂಥ ಯಾವುದೇ ವಸ್ತುಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ. ಪಾರ್ಲಿಮೆಂಟರಿ ಸೆಕ್ಯೂರಿಟಿ ಸರ್ವಿಸ್‌, ದಿಲ್ಲಿ ಪೊಲೀಸ್‌, ನಾನಾ ಏಜೆನ್ಸಿಗಳು, ಮ್ಯಾನುಯಲ್‌ ತಪಾಸಣೆ, ಬಾಡಿ ಸ್ಕ್ಯಾನರ್‌, ಮೆಟಲ್‌ ಡಿಟೆಕ್ಟರ್‌ ಹೀಗೆ ಹಲವು ಹಂತದ ಭದ್ರತಾ ವ್ಯವಸ್ಥೆಯಿರುವ ಸಂಸತ್‌ಗೆ ಗ್ಯಾಸ್‌ ಕ್ಯಾನ್‌ ತಂದಿದ್ದಾರೆ ಎಂದರೆ ಭದ್ರತಾ ವೈಫಲ್ಯವಲ್ಲದೆ ಬೇರೇನೂ ಕಾರಣವಲ್ಲ. ಆರೋಪಿಗಳಾಗಿ ಗುರುತಿಸಿಕೊಂಡಿರುವ ಮೈಸೂರು ಮೂಲದ ಮನೋರಂಜನ್‌, ಉತ್ತರ ಪ್ರದೇಶದ ಲಖನೌದ ಸಾಗರ್‌ ಶರ್ಮಾ, ಹರಿಯಾಣದ ನೀಲಂ ಹಾಗೂ ಐಕ್ಕಿ ಶರ್ಮಾ, ಗುರು ಗ್ರಾಮದ ಲಲಿತ್‌ ಝಾ ಮಹಾರಾಷ್ಟ್ರದ ಅಮೋಲ್‌ ಶಿಂಧೆ ಎಲ್ಲರೂ ಒಗ್ಗೂಡಿದ್ದು ಹೇಗೆ?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಮಾನ್ಯ ಸ್ಥಿತಿಗೆ ಮರಳಿದ ಹಸಿರು ಮಾರ್ಗದ ಮೆಟ್ರೋ ಸಂಚಾರ

“ಒಂದೂವರೆ ವರ್ಷದಿಂದ ಸಂಚು ಹೂಡಿದ್ದರೂ ಕೇಂದ್ರ ಗುಪ್ತಚರಕ್ಕೆ ಗೊತ್ತಾಗಲಿಲ್ಲವೇ? ಗೃಹ ಸಚಿವ ಅಮಿತ್‌ ಶಾ ದೇಶದ ಭದ್ರತೆ ವಿಚಾರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಒಂದೆಡೆ ಚೀನಾದ ಸೇನೆ ಅರುಣಾಚಲ ಪ್ರದೇಶದ ಗಡಿಯನ್ನು ಅತಿಕ್ರಮಿಸಿ ಗ್ರಾಮಗಳನ್ನು ನಿರ್ಮಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಭಾರಿ ಏರಿಕೆಯಾಗಿದೆ. ದೇಶಕ್ಕೆ ರಕ್ಷಣೆ ನೀಡಬೇಕಾದ ಗೃಹ ಸಚಿವರು ತಮ್ಮ ಕೆಲಸವನ್ನು ಬಿಟ್ಟು ಚುನಾವಣೆಗಳನ್ನು ಹೇಗೆ ಗೆಲ್ಲುವುದು ಎಂಬ ತಂತ್ರ ಹೆಣೆಯುವುದರಲ್ಲೇ ಕಾಲಕಳೆಯುತ್ತಿದ್ದಾರೆ. ತನ್ನ ಕರ್ತವ್ಯವನ್ನು ನಿಭಾಯಿಸಲು ಆಗದ ಅಮಿತ್‌ ಶಾ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮ ಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಮೋಹನ್ , ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷ ವೀಣಾ ಸರ್ ರಾವ್ ಹಾಗೂ ಕಾರ್ಯಕರ್ತರುಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...