ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಎನ್ಐಎ ಹುಡುಕಾಟ ನಡೆಸುತ್ತಿದೆ. ಆ ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಟ್ವೀಟ್ ಮಾಡಿರುವ ಎನ್ಐಎ, “ಪ್ರಮುಖ ಆರೋಪಿ ಮುಸ್ಸಾವೀರ್ ಹುಸೇನ್ ಶಾಜಿಬ್ (30) ಮತ್ತು ಅಬ್ದುಲ್ ಮತೀನ್ ಅಹಮದ್ ತಾಹ (30) ಸುಳಿವು ಸಿಕ್ಕರೆ, ಕೂಡಲೇ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು” ಎಂದು ತಿಳಿಸಿದೆ.
ಪ್ರಕರಣದ ತನಿಖೆ ಆರಂಭಿಸಿರುವ ಎನ್ಐಎ ಈಗಾಗಲೇ ಮುಜಾಮಿಲ್ ಷರೀಫ್ ಎಂಬಾತನನ್ನ ಬಂಧಿಸಿದೆ.
ಎನ್ಐಎ ಹುಡುಕುತ್ತಿರುವ ಮುಸ್ಸಾವೀರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತೀನ್ ಅಹಮದ್ ತಾಹಗೆ ಸಂಬಂಧಿಸಿದ ವಿವರಗಳನ್ನು ಎನ್ಐಎ ಪ್ರಕಟಿಸಿದೆ.
Request for Information, Identity of the Informer will be kept Secret. pic.twitter.com/JkMUWay23m
— NIA India (@NIA_India) March 29, 2024
ಆರೋಪಿಗಳ ಕುರಿತು ಯಾವುದೇ ಸುಳಿವು ಸಿಕ್ಕರೆ, ಎನ್ಐಎ ಸಂಪರ್ಕ ಸಂಖ್ಯೆ: 080-29510900, 8904241100 ಅಥವಾ ಇ-ಮೇಲ್: info.blr.nia.gov.inಗೆ ಮಾಹಿತಿ ನೀಡುವಂತೆ ಕೋರಿದೆ.




