ಬೆಂಗಳೂರು | ಜೋಡಿಗಳನ್ನು ಸುಲಿಯುತ್ತಿದ್ದ ನಕಲಿ ಪೊಲೀಸನ ಬಂಧನ

Date:

ಬೆಂಗಳೂರಿನ ಪಾರ್ಕುಗಳು ಮತ್ತು ಕೆರೆಗಳು ಇಲ್ಲವೇ ರಸ್ತೆ ಬದಿ ಬಳಿ ಕಾರಿನಲ್ಲಿ ಕುಳಿತ ಜೋಡಿಗಳನ್ನು ಬೆದರಿಸಿ ಅವರಿಂದ ಹಣ, ಚಿನ್ನ ಸುಲಿಗೆ ಮಾಡುತ್ತಿದ್ದ ನಕಲಿ ಪೊಲೀಸನನ್ನು ಬಂಧಿಸಲಾಗಿದೆ.

ನಕಲಿ ಪೊಲೀಸನ ಹಾವಳಿ ಬಗ್ಗೆ ಹಲವಾರು ದೂರುಗಳು ಕೇಳಿ ಬಂದ ನಂತರ ಕಾರ್ಯಾಚರಣೆಗಿಳಿದ ಜಯನಗರ ಪೊಲೀಸರು ಆಸೀಫ್ ಖಾನ್ ಅಲಿಯಾಸ್ ಪಿಸ್ತೋ ಎಂಬುವನನ್ನು ದಸ್ತಗಿರಿ ಮಾಡಿದ್ದಾರೆ. ಗಂಗಾನಗರದ ನಿವಾಸಿಯಾದ ಖಾನ್ 10ನೆಯ ತರಗತಿಯಲ್ಲಿ ನಪಾಸಾಗಿ ಅರೆಕಾಲಿಕ ಆಟೋ ಚಾಲಕನಾಗಿದ್ದ. ಕಾರಿನಲ್ಲಿ ಕುಳಿತಿರುತ್ತಿದ್ದ ಜೋಡಿಗಳನ್ನು ‘ಸಾರ್ವಜನಿಕ ಅಸಭ್ಯತೆ’ಯ ಹೆಸರಿನಲ್ಲಿ ಬೆದರಿಸಿ ಹಣ ಕೀಳುತ್ತಿದ್ದ. ಪೊಲೀಸರ ಹೆಸರಿನಲ್ಲಿ ಈ ಕೆಲಸ ಮಾಡುತ್ತಿದ್ದ ಈತ ಪೊಲೀಸರ ಪಾಲಿಗೆ ವಿಶೇಷ ತಲೆನೋವಾಗಿದ್ದ.

ತನ್ನನ್ನು ಪೊಲೀಸನೆಂದು ಬಣ್ಣಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆಯ ಕೇಸು ಹಾಕುವುದಾಗಿ ಜೋಡಿಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಹಣ ಪಡೆಯುತ್ತಿದ್ದ. ಜಯನಗರದ ಆರ್,ವಿ,ಮೆಟ್ರೋ ನಿಲ್ದಾಣದ ಬಳಿ ತಮ್ಮ ಸಹೋದ್ಯೋಗಿಯ ಜೊತೆ ಕಾರಿನಲ್ಲಿ ಕುಳಿತಿದ್ದ ಖಾಸಗಿ ಕಂಪನಿಯೊಂದರ ಉದ್ಯೋಗಿಯನ್ನು ಇದೇ ತಿಂಗಳ ಐದರಂದು ಬೆದರಿಸಿದ್ದ. ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಕೈಯಲ್ಲಿನ ಚಿನ್ನದ ಉಂಗುರದ ಜೊತೆಗೆ ಎಟಿಎಂ ನಿಂದ 10 ಸಾವಿರ ರುಪಾಯಿಗಳನ್ನು ತೆಗೆಯಿಸಿ ಕಬಳಿಸಿದ್ದ.  ಇಂತಹ ಇನ್ನೂ ಹಲವು ದೂರುಗಳು ಈತನ ಮೇಲಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಕಲಿ ಪೊಲೀಸನಿಂದ 80 ಗ್ರ್ಯಾಮ್ ಗಳಷ್ಟು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ. ಈತನ ಸುಲಿಗೆಗೆ ಈಡಾದವರು ಜಯನಗರ ಪೊಲೀಸರನ್ನು ಸಂಪರ್ಕಿಸಬಹುದು ಇಲ್ಲವೇ ಸಮೀಪದ ಠಾಣೆಗಳಲ್ಲಿ ದೂರು ನೀಡಬಹುದು ಎಂದು ಪೊಲೀಸರು ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...