ಬಿಎಸ್‌ವೈ ಭೇಟಿಯಾದ ಸೋಮಣ್ಣ- ಚರ್ಚೆಗೆ ಗ್ರಾಸ

Date:

ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ನಾಯಕರುಗಳ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಚಿವ ವಿ ಸೋಮಣ್ಣ ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪರನ್ನು ಶನಿವಾರ ಭೇಟಿಯಾಗಿದ್ದಾರೆ. ಈ ಭೇಟಿಯೀಗ ಚರ್ಚೆಗೆ ಗ್ರಾಸವಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಸಕ್ರಿಯ ರಾಜಕೀಯ ಚಟುವಟಿಕೆಯಿಂದ ವಿ ಸೋಮಣ್ಣ ದೂರು ಉಳಿದಿದ್ದರು. ಆದರೆ ಈಗ ದಿಡೀರ್ ಆಗಿ ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿರುವುದರಿಂದ ಈ ವಿಷಯ ಚರ್ಚೆಗೆ ಗ್ರಾಸವಾಗಿದೆ.

ಈ ವರ್ಷದಲ್ಲೇ ಲೋಕಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಸೋಮಣ್ಣ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಮತ್ತು ಸೋಮಣ್ಣ ಭೇಟಿ ಮಹತ್ವವನ್ನು ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

V Somanna Yediyurappa

ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಬಿಎಸ್‌ವೈ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತುಮಕೂರು ಸಂಸದ ಜಿ ಎಸ್‌ ಬಸವರಾಜ, ಮಾಜಿ ಶಾಸಕ ಎಂ ಡಿ ಲಕ್ಷ್ಮೀ ನಾರಾಯಣ ಮತ್ತು ತಮ್ಮ ಪುತ್ರ ಅರುಣ್ಣ ಸೋಮಣ್ಣ ಜೊತೆ ವಿ ಸೋಮಣ್ಣ ತೆರಳಿದ್ದಾರೆ. ಎಲ್ಲ ಭಿನ್ನಾಭಿಪ್ರಾಯವನ್ನು ಬಿಟ್ಟು ರಾಜಕೀಯ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ವಿಧಾನಸಭೆ ಚುನಾವಣೆ ವೇಳೆಯಲ್ಲಿ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ಧ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಕಣ್ಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ವಿಜಯೇಂದ್ರರನ್ನು ತಮ್ಮ ಸ್ವಕ್ಷೇತ್ರವಾದ ಶಿಕಾರಿಪುರದಿಂದ ಕಣ್ಣಕ್ಕೆ ಇಳಿಸಲು ಬಿಎಸ್‌ ಯಡಿಯೂರಪ್ಪ ಬಯಸಿದ್ದರು. ಈ ನಿಟ್ಟಿನಲ್ಲಿ ಹೈಕಮಾಂಡ್ ಮನವೊಲಿಸುವಲ್ಲಿಯೂ ಸಫಲರಾಗಿದ್ದರು. ಈ ಕಾರಣದಿಂದ ವಿ ಸೋಮಣ್ಣರನ್ನು ಸಿದ್ಧರಾಮಯ್ಯರ ವಿರುದ್ಧ ನಿಲ್ಲಿಸಲ್ಲಾಗಿತ್ತು. ಆದರೆ ಸೋಮಣ್ಣ ಸೋತು ತನ್ನ ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದರು.

ಭೇಟಿ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿ ಸೋಮಣ್ಣ, “ನನಗೆ ಪಕ್ಷದ ನಾಯಕರ ಜೊತೆ ಮುನಿಸಿಲ್ಲ. ಇದೆಲ್ಲ ಮನೆಯೊಳಗೆ ನಡೆಯುವ ಜಗಳ. ಏನಾದರೂ ದೇಶದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರ ಪಡೆಯಬೇಕು. ರಾಜ್ಯದ ಎಲ್ಲ 28 ಸ್ಥಾನದಲ್ಲಿಯೂ ನಾವೇ ಗೆಲ್ಲುವುದು ನಮ್ಮ ಗುರಿ. ತುಮಕೂರು ಕ್ಷೇತ್ರವನ್ನು ಬಿಜೆಪಿಗೆ ಬಿಡುವ ಮಾತುಕತೆ ನಡೆದಿಲ್ಲ. ಏನಾದರೂ ನಾನು ಪಕ್ಷದ ವರಿಷ್ಠರ ತೀರ್ಮಾನ ಒಪ್ಪಿ ಪಾಲಿಸುತ್ತೇನೆ,” ಎಂದರು.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...