ವಂಚನೆ ಪ್ರಕರಣ | ಇಂಡಿಯನ್​ಮನಿ ಫ್ರೀಡಂ ಆ್ಯಪ್​​ ಸಿಇಒ ಸಿಎಸ್ ಸುಧೀರ್​ ವಿಚಾರಣೆ

Date:

  • ಸಿಎಸ್ ಸುಧೀರ್ ಮತ್ತು ತಂಡದ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ
  • ಜನರನ್ನು ವಂಚಿಸುವ ಉದ್ದೇಶದಿಂದ ಇಂಡಿಯನ್ ​ಮನಿ ಫ್ರೀಡಂ ಆ್ಯಪ್ ಜಾರಿಗೆ ತಂದ ಸುಧೀರ್; ಯುವತಿ

ಯುವಕ-ಯುವತಿಯರಿಗೆ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿ ತಮ್ಮ ಆ್ಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್​ಮನಿ ಫ್ರೀಡಂ ಆ್ಯಪ್​​ ಸಿಇಒ ಸಿಎಸ್ ಸುಧೀರ್​ ಅನ್ನು ಬನಶಂಕರಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಂಚನೆಗೀಡಾಗಿರುವ ಯುವತಿ ಸೇರಿ ಒಟ್ಟು 21 ಮಂದಿ ಸಿಎಸ್‌ ಸುಧೀರ್ ವಿರುದ್ಧ ದೂರು ದಾಖಲಿಸಿದ್ದಾರೆ. ಸುಧೀರ್‌ ಸೇರಿದಂತೆ ಒಟ್ಟು 23 ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಆದರೆ, ಸುಧೀರ್ ಹಾಗೂ ಇತರ ಆರೋಪಿಗಳು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತೆಗೆದುಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನ್ಯಾಯಾಲಯ ಷರತ್ತು ವಿಧಿಸಿದೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು ಸುಧೀರ್ ಮತ್ತು ಅವನ ತಂಡದ ವಿರುದ್ಧ ನಯನಾ ಎಂಬ ಮಹಿಳೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರನ್ನು ವಂಚಿಸುವ ಉದ್ದೇಶದಿಂದ ಸುಧೀರ್ ಹಾಗೂ ಇನ್ನಿತರರು ಸೇರಿ ಈ ಆ್ಯಪ್‌ ಅನ್ನು ಜಾರಿಗೆ ತಂದಿದ್ದಾರೆ. ಈ ಆ್ಯಪ್‌ ಪ್ರಚಾರ ಮಾಡಲು ನಿರುದ್ಯೋಗಿಗಳನ್ನೇ ಬಂಡವಾಳವಾಗಿ ಮಾಡಿಕೊಂಡಿರುವ ಸುಧೀರ್ ಮತ್ತು ತಂಡ ಅಮಾಯಕ ಯುವಕ ಮತ್ತು ಯುವತಿಯರನ್ನು ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿಗೆ ಐಎಎಸ್‌ ಅಧಿಕಾರಿಯಿಂದ ವರದಕ್ಷಿಣೆ ಕಿರುಕುಳ; ದೂರು ದಾಖಲು

“ಮೊದಲಿಗೆ ಇವರು ಝೂಮ್‌ ಮಿಟೀಂಗ್‌ ಮೂಲಕ ಎಲ್ಲರಿಗೂ ಒಂದು ವಾರದ ತರಬೇತಿ ನೀಡುತ್ತಾರೆ. ಅದರಲ್ಲಿ ಹಣ ಗಳಿಸುವುದಕ್ಕೆ ದಾರಿ ಮತ್ತು ಅವರ ಆ್ಯಪ್‌ ಅನ್ನು ಜನರಿಗೆ ಹೇಗೆ ತಲುಪಿಸಬೇಕು ಎಂದು ತಿಳಿಸುತ್ತಾರೆ. ಆ್ಯಪ್‌ ಅನ್ನು ಹೆಚ್ಚು ಜನರ ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಸಿದರೇ, ಹೆಚ್ಚು ಜನರನ್ನು ಚಂದಾದಾರನ್ನಾಗಿ ಮಾಡಿದರೇ, ಪ್ರತಿ ತಿಂಗಳು ₹15,000 ಸಂಬಳ ನೀಡುವುದಾಗಿ ಹೇಳಿದ್ದಾರೆ. ಇನ್ನು ಹೆಚ್ಚು ಜನರು ಚಂದಾದಾರರಾದರೇ ಹೆಚ್ಚು ಹಣ ಗಳಿಸಬಹುದು ಎಂದೆನ್ನುತ್ತಾರೆ” ಎಂದು ಹೇಳಲಾಗಿದೆ.

“ಅವರು ಹೇಳಿದಂತೆಯೇ ಹಲವು ಯುವಕ-ಯುವತಿಯರು ಹಣ ಗಳಿಸಬಹುದೆಂದು ತಿಳಿದು ಸಂಬಂಧಿಕರು ಹಾಗೂ ಸ್ನೇಹಿತರನ್ನೇ ಚಂದಾದಾರರನ್ನಾಗಿ ಮಾಡಿಸಿದ್ದಾರೆ. ಯುವಕ–ಯುವತಿಯರಿಂದ ಎಲ್ಲ ಕೆಲಸ ಮಾಡಿಸಿಕೊಂಡ ಕಂಪನಿಯವರು, ನಿಗದಿತ ದಿನದೊಳಗೆ ಸಂಬಳ ನೀಡಿಲ್ಲ. ಕೆಲಸಕ್ಕೆ ತೆಗೆದುಕೊಳ್ಳುವ ಬಗ್ಗೆಯೂ ಯಾವುದೇ ಮಾಹಿತಿ ನೀಡಿಲ್ಲ. ಕಾರಣ ನೀಡದೇ ಎಲ್ಲರನ್ನೂ ಕೆಲಸದಿಂದ ತೆಗೆದಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...