ಆಗಸ್ಟ್‌ 1 ರಿಂದ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆಯಲ್ಲಿ ಶೇ. 10ರಷ್ಟು ಹೆಚ್ಚಳ

Date:

  • ಶೇ. 35ರಷ್ಟು ನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳ
  • ಒಂದು ಕೆ.ಜಿ ಕಾಫಿ ಪುಡಿಗೆ ₹80ರಿಂದ ₹100 ಹೆಚ್ಚಳ

ರಾಜ್ಯದಲ್ಲಿ ವಿದ್ಯುತ್ ದರ ಸೇರಿದಂತೆ ಇನ್ನಿತರ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾದ ಕಾರಣ ಆಗಸ್ಟ್‌ 1 ರಿಂದ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆಯಲ್ಲಿ ಶೇ. 10ರಷ್ಟು ಹೆಚ್ಚಳವಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ ತಿಳಿಸಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬೃಹತ್ ಬೆಂಗಳೂರು ಹೋಟೆಲ್‌ ಸಂಘದ ಅಧ್ಯಕ್ಷ ಪಿ ಸಿ ರಾವ್, “ಹೋಟೆಲ್‌ ತಿಂಡಿ-ತಿನಿಸುಗಳ ಬೆಲೆಯಲ್ಲಿ ಶೇ. 10 ರಷ್ಟು ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಹಾಲಿನ ದರ ಆಗಸ್ಟ್‌ 1ರಿಂದ ₹3 ಹೆಚ್ಚಳವಾಗಲಿದೆ. ಒಂದು ಕೆ.ಜಿ ಕಾಫಿ ಪುಡಿಗೆ ₹80ರಿಂದ ₹100 ಹೆಚ್ಚಳವಾಗಿದೆ. ನೀರಿನ ಬೆಲೆ ಹೆಚ್ಚಳ ಮಾಡುವ ಪ್ರಸ್ತಾವನೆ ಇದೆ. ಈಗಾಗಲೇ, ಟೊಮೆಟೊ, ಅಕ್ಕಿ ಸೇರಿದಂತೆ ದಿನನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳವಾಗಿದೆ” ಎಂದರು.

“ಶೇ. 35ರಷ್ಟು ನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳವಾಗಿದೆ. ಇದರಿಂದ ಕಡಿಮೆ ದರಗಳಲ್ಲೇ ಹೋಟೆಲ್‌ ಉದ್ಯಮ ನಡೆಸುವುದು ಕಷ್ಟಕರವಾಗಲಿದೆ. ಮುಂದಿನ ದಿನಗಳಲ್ಲಿ ಉದ್ಯಮದಲ್ಲಿ ಕುಸಿತ ಉಂಟಾಗುವ ಸಾಧ್ಯತೆ ಎದುರಾಗಲಿದೆ. ಹಾಗಾಗಿ, ಶೇ. 10 ರಷ್ಟು ತಿಂಡಿ-ತಿನಿಸುಗಳ ದರ ಹೆಚ್ಚಳ ಮಾಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 2 ಟನ್‌ ಟೊಮ್ಯಾಟೊ ಸಮೇತ ಬೊಲೆರೋ ವಾಹನ ಕದ್ದಿದ್ದ ಆರೋಪಿಗಳ ಬಂಧನ

“ಕಾಫಿ ಮತ್ತು ಚಹಾ ಬೆಲೆ ₹2 ರಿಂದ ₹3 ಹೆಚ್ಚಳವಾಗಲಿದೆ. ತಿಂಡಿ–ತಿನಿಸುಗಳ ದರದಲ್ಲಿ ₹5 ಹಾಗೂ ಊಟಕ್ಕೆ ₹10 ಹೆಚ್ಚಳವಾಗಲಿದೆ. ಈಗಾಗಲೇ ಕೆಲ ಹೋಟೆಲ್‌ಗಳಲ್ಲಿ ದರಗಳನ್ನು ಹೆಚ್ಚಿಸಲಾಗಿದೆ. ಅಧಿಕೃತವಾಗಿ ಆಗಸ್ಟ್‌ 1ರಂದು ಎಲ್ಲ ತಿಂಡಿ–ತಿನಿಸುಗಳ ದರಗಳಲ್ಲಿ ಹೆಚ್ಚಳವಾಗಲಿದೆ. ಬೆಂಗಳೂರು ಹೋಟೆಲ್‌ ಉದ್ಯಮ ತಿಂಡಿ-ತಿನಿಸುಗಳ ಶುಚಿ-ರುಚಿಯಲ್ಲಿ ಹೆಸರುವಾಸಿಯಾಗಿದೆ. ಎಂದಿನಂತೆ ಅದನ್ನು ಕಾಪಾಡಿಕೊಂಡು ಬರಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...