ಮುಂಗಾರು ಮಳೆಯಿಂದಾಗುವ ಸಮಸ್ಯೆ ನಿಭಾಯಿಸಲು ಸಂಪೂರ್ಣ ಸನ್ನದ್ಧ : ತುಷಾರ್ ಗಿರಿನಾಥ್

Date:

  • ಬೆಂಗಳೂರು ದಕ್ಷಿಣ ಒಂದರಲ್ಲೇ 50 ಬೋರ್‌ವೆಲ್‌ ಕೊರೆಸಲು ಬೇಡಿಕೆ
  • ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಬಿಲ್‌ ಶೀಘ್ರವೇ ಪಾವತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈ ವರ್ಷ ಮುಂಗಾರು ಮಳೆಯಿಂದಾಗುವ ಸಮಸ್ಯೆ ನಿಭಾಯಿಸಲು ಸಂಪೂರ್ಣ ಸನ್ನದ್ಧವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಸೋಮವಾರ ವಲಯ ಆಯುಕ್ತರೊಂದಿಗೆ ಸಮನ್ವಯ ಸಮಿತಿ ಸಭೆ ನಡೆಸಿ ಮುಂಗಾರು ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

“ನಗರದ ಕೆಲವೆಡೆ ಚರಂಡಿ ಹೂಳು ತೆಗೆಯುವುದು ಹಾಗೂ ಇತರ ಸಿವಿಲ್ ಕಾಮಗಾರಿಗಳು ನಡೆಯುತ್ತಿವೆ. ಈ ಬಾರಿ ಮಳೆಯಿಂದ ಹೆಚ್ಚಿನ ಹಾನಿಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ), ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಬಿಬಿಎಂಪಿ ಮತ್ತು ಇತರ ಇಲಾಖೆಗಳು ಸೇರಿದಂತೆ ವಾಟ್ಸ್‌ಆಪ್ ಗ್ರೂಪ್‌ ಮಾಡಲಾಗಿದೆ. ಪ್ರವಾಹ ಮತ್ತು ಇನ್ನಿತರ ತುರ್ತು ಸಂದರ್ಭಗಳಲ್ಲಿ ಸ್ಥಳಕ್ಕೆ ಧಾವಿಸಲು ಈ ವಾಟ್ಸಾಪ್ ಗ್ರೂಪ್ ಸಹಕಾರಿಯಾಗಲಿದೆ” ಎಂದು ಗಿರಿನಾಥ್ ಹೇಳಿದರು.

“ವಾರ್ಡ್‌ ಮರುವಿಂಗಡಣೆಯ ಬಳಿಕ ಬಿಬಿಎಂಪಿಗೆ ವಿಲೀನಗೊಂಡ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಬಗ್ಗೆ ಹೆಚ್ಚುತ್ತಿರುವ ಸಮಸ್ಯೆಗೆ ಸಂಬಂಧಿಸಿದಂತೆ ಯೋಜನೆ ರೂಪಿಸಲಾಗುವುದು. ಮನವಿಗಳ ಮೇರೆಗೆ ಬೋರ್‌ವೆಲ್‌ ಕೊರೆಸಲಾಗುವುದು” ಎಂದು ತಿಳಿಸಿದರು.

“ಮಹದೇವಪುರ, ಯಲಹಂಕ, ಬೆಂಗಳೂರು ದಕ್ಷಿಣ ಮತ್ತು ಆರ್‌ಆರ್‌ನಗರದಂತಹ 110 ಹಳ್ಳಿಗಳಿಗೆ ನೀರಿನ ಕೊರತೆಯಿದ್ದಲ್ಲಿ ಬಿಬಿಎಂಪಿಯಿಂದ ನೀರು ಒದಗಿಸಲಾಗುವುದು. ಬೆಂಗಳೂರು ದಕ್ಷಿಣ ಒಂದರಲ್ಲೇ 50 ಬೋರ್‌ವೆಲ್‌ಗಳನ್ನು ಅಳವಡಿಸಲು ಬೇಡಿಕೆ ಇದೆ” ಎಂದರು.

“ಪಾಲಿಕೆಗೆ ಗ್ರಾಮಗಳಿಂದ ಸುಮಾರು 100 ಬೋರ್‌ವೆಲ್‌ಗಾಗಿ ಮನವಿ ಬಂದಿದ್ದು, ಪ್ರತಿ ಬೋರ್‌ವೆಲ್‌ಗೆ ತಲಾ 8 ಲಕ್ಷ ಬೇಕಾಗುತ್ತದೆ. ಪ್ರಸ್ತುತ ಹೊಸದಾಗಿ ವಿಲೀನಗೊಂಡ ಗ್ರಾಮಗಳಲ್ಲಿ ಬೋರ್‌ವೆಲ್‌ಗಳನ್ನು ಕೊರೆಸಲು 10 ಕೋಟಿ ಬೇಕಾಗುತ್ತದೆ” ಎಂದು ಹೇಳಿದರು.

“ಬಿಬಿಎಂಪಿ ಕಾಮಗಾರಿಗಳಲ್ಲಿ ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ (ಕೆಆರ್‌ಐಡಿಎಲ್) ಹಗರಣದ ಕುರಿತು, ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲು ಮತ್ತು ವರದಿ ನೀಡಲು ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರನ್ನು ನೇಮಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ಗುತ್ತಿಗೆದಾರರಿಗೆ ಬಾಕಿ ಇರುವ ಬಿಲ್

“ಕರ್ನಾಟಕ ಸರ್ಕಾರದ ಅನುದಾನದಡಿ ತೆಗೆದುಕೊಳ್ಳಲಾದ ಮಳೆನೀರು ಚರಂಡಿ ಕಾಮಗಾರಿಯ ಬಿಲ್‌ಗಳನ್ನು ಫೆಬ್ರವರಿಯಲ್ಲಿ ಇತ್ಯರ್ಥಪಡಿಸಲಾಗಿದೆ. ಗುತ್ತಿಗೆದಾರರಿಗೆ ಉಳಿದಿರುವ ಬಾಕಿಯನ್ನು ಶೀಘ್ರವೇ ಬಿಬಿಎಂಪಿ ತೆರವುಗೊಳಿಸಲಿದೆ” ಎಂದು ಅವರು ಹೇಳಿದರು.

“₹100 ಕೋಟಿ ವರೆಗಿನ ಬಿಲ್‌ಗಳನ್ನು ಈ ವರ್ಷದ ಏಪ್ರಿಲ್‌ನಲ್ಲಿ ತೆರವುಗೊಳಿಸಲಾಗಿದೆ. ಮೇ 2021 ಮತ್ತು ಜೂನ್ 2021ರ ನಡುವಿನ ₹300 ಕೋಟಿ ಬಿಲ್ ಮೊತ್ತವನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...