ಮುಂದಿನ ಪೀಳಿಗೆಗಾಗಿ ಭವಿಷ್ಯದ ಬೆಂಗಳೂರು ನಿರ್ಮಾಣ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

Date:

  • ಬೆಂಗಳೂರಿಗೆ ಹೊಸ ರೂಪ ನೀಡಲು 70 ಸಾವಿರಕ್ಕೂ ಹೆಚ್ಚು ಸಲಹೆ
  • ಬೆಂಗಳೂರಿಗೆ ಹೊಸ ರೂಪ ನೀಡುವುದು ಸವಾಲಿನ ಕೆಲಸ: ಡಿಕೆಶಿ

“ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರು ಮಹಾನಗರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಮುಂದಿನ ಪೀಳಿಗೆಯ ದೃಷ್ಟಿಕೋನ ಇಟ್ಟುಕೊಂಡು ನಗರ ನಿರ್ಮಾಣ ಮಾಡಬೇಕು. ಅದರಂತೆಯೇ ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಭಾರತ ಸ್ಕೌಟ್ಸ್ ಭವನದಲ್ಲಿ ಮಂಗಳವಾರ ನಡೆದ ಬ್ರ್ಯಾಂಡ್ ಬೆಂಗಳೂರು ಕುರಿತ ಚರ್ಚಾ ಸ್ಪರ್ಧೆಯಲ್ಲಿ 17 ಶಾಲೆಗಳ 300ಕ್ಕೂ‌ ಹೆಚ್ಚು‌ ಶಾಲಾ ಮಕ್ಕಳು ‌ಭಾಗವಹಿಸಿದ್ದರು. ಈ ಚರ್ಚಾ ಸ್ಪರ್ಧೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಅವರು, “ಬೆಂಗಳೂರು ತನ್ನದೇ ಆದ ಇತಿಹಾಸ, ಪರಂಪರೆ ಹೊಂದಿದೆ. ಚರ್ಚಾ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಹಸಿರು ಬೆಂಗಳೂರಿನ ಕುರಿತು ಮಾತನಾಡಿದ್ದನ್ನು ಗಮನಿಸಿದೆ. ನಾನು ಸಚಿವನಾದ ನಂತರ ಪರಿಸರ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆಗ ಪಾಲಿಕೆಯು ಶಾಲಾ ಆಡಳಿತದ ಜತೆ ಒಡಂಬಡಿಕೆ ಮಾಡಿಕೊಂಡು ನಗರದಲ್ಲಿ ಶಾಲಾ ಮಕ್ಕಳಿಂದ ಗಿಡ ನೆಡಿಸಿ ಅವುಗಳನ್ನು ಬೆಳೆಸುವ ಜವಾಬ್ದಾರಿ ಅವರಿಗೆ ನೀಡಬೇಕು. ಆ ಗಿಡ ಬೆಳೆಸುವ ಮಗುವಿಗೆ ಆ ಮರದ ಬಳಿ ಹೆಸರು ಹಾಕಿಕೊಳ್ಳುವ ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಇಲ್ಲಿನ ಸಂಸ್ಕೃತಿ ಹಾಗೂ ವಾತಾವರಣ ನಮಗೆ ಹೊಂದಿಕೊಳ್ಳುವಂತಿದ್ದು, ನಾವು ಹಸಿರು ಬೆಂಗಳೂರನ್ನು ಕಾಪಾಡಿಕೊಳ್ಳಬೇಕು” ಎಂದು ತಿಳಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿಗೆ ಹೊಸ ರೂಪ ನೀಡಲು 70 ಸಾವಿರಕ್ಕೂ ಹೆಚ್ಚಿನ ಸಲಹೆಗಳು ಬಂದಿವೆ. ಇವುಗಳ ಜತೆ ಯುವ ಪ್ರತಿಭೆಗಳ ಆಲೋಚನೆಗಳನ್ನು ಪಡೆಯಬೇಕಿದೆ. ಅವರು ಯಾವುದೇ ವೈಯಕ್ತಿಕ ಆಸಕ್ತಿ ಇಲ್ಲದೆ ಸಲಹೆ ನೀಡುತ್ತಾರೆ. ನಾಯಕರನ್ನು ಸೃಷ್ಟಿಸುವವನು ನಿಜವಾದ ನಾಯಕನೇ ಹೊರತು, ಹಿಂಬಾಲಕರನ್ನು ಸೃಷ್ಟಿಸುವವನಲ್ಲ ಎಂಬ ಮಾತಿದೆ. ನೀವುಗಳು ಕೂಡ ನೀವು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರಗಳಲ್ಲಿ ನಾಯಕರಾಗಿ ಬೆಳೆಯಬೇಕು ಎಂದು ಬಯಸುತ್ತೇನೆ. ನೀವು ಸದೃಢವಾಗಿ ಬೆಳೆದು, ಸಮಾಜಕ್ಕೆ ಕೊಡುಗೆ ನೀಡಬೇಕು. ಸಮಾಜಕ್ಕೆ ನೀವು ಏನು ಮಾಡುತ್ತೀರಿ ಎಂಬುದು ಮುಖ್ಯ” ಎಂದರು.

“ಬೆಂಗಳೂರು ಪೂರ್ವ ನಿಯೋಜಿತ ನಗರವಲ್ಲ. ಇದಕ್ಕೆ ಹೊಸ ರೂಪ ನೀಡುವುದು ಸವಾಲಿನ ಕೆಲಸ. ಇದಕ್ಕಾಗಿ ಸೋಮವಾರ ಬೆಂಗಳೂರು ವಿನ್ಯಾಸಕ್ಕೆ ಅಂತಾರಾಷ್ಟ್ರೀಯ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ. ನಗರದ ವಾತಾವರಣ ಹಾಗೂ ಸಂಸ್ಕೃತಿಗೆ ಮನಸೋತು ಹೆಚ್ಚಿನ ಸಮಯದಲ್ಲಿ ಬೆಂಗಳೂರಿಗೆ ಬಂದು ಮರಳಿ ತಮ್ಮ ಊರಿಗೆ ಹೋಗುವುದಿಲ್ಲ. ಬೆಂಗಳೂರು ಜ್ಞಾನ, ಶಿಕ್ಷಣ, ಮೆಡಿಕಲ್, ಐಟಿ ರಾಜಧಾನಿ ಆಗಿದೆ. ಇಲ್ಲಿ ಓದಿ ಬೆಳೆದವರು ವಿಶ್ವದ ಪ್ರಮುಖ ಕಂಪನಿಗಳನ್ನು ಮುನ್ನಡೆಸುತ್ತಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಪ್ರಧಾನಿ ಮೋದಿ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕು: ಆಪ್ ಪ್ರತಿಭಟನೆ

“ಇಲ್ಲಿ ಓದಿದ ಪ್ರತಿಭಾವಂತರು ಹೊರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಕೆಲವರು ಮಾತ್ರ ಇಲ್ಲೇ ಉಳಿಯುತ್ತಿದ್ದಾರೆ. ಕೆಲವೊಮ್ಮೆ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳಿಗಿಂತ ಮಕ್ಕಳು ಅತ್ಯುತ್ತಮ ಸಲಹೆಗಳನ್ನು ನೀಡುತ್ತಾರೆ. ಹೀಗಾಗಿ ನಾನು ನಿಮ್ಮ ಸಲಹೆ ಪಡೆಯುತ್ತಿದ್ದೇನೆ” ಎಂದರು.

ಈ ವೇಳೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಮಾಜಿ ಎಂಎಲ್‌ಸಿ ಮೋಹನ್ ಕೊಂಡಜ್ಜಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...