ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಪರ ಹೈಕೋರ್ಟ್ ತೀರ್ಪು

Date:

ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದರೆ ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರದ ಈ ಕ್ರಮಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಗಾಳಿ ಆಂಜನೇಯಸ್ವಾಮಿ ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ನುಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿಗೆ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗಿತ್ತು. ಇದೀಗ ಹೈಕೋರ್ಟ್ ಸಹ ಸರ್ಕಾರದ ಕ್ರಮ ಸರಿ ಇದೆ ಎಂದು ತಡೆ ನೀಡಲು ನಿರಾಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವನಹಳ್ಳಿ ಐತಿಹಾಸಿಕ ಗೆಲುವಿಗೆ ರೈತರು, ಪ್ರಗತಿಪರ ಸಂಘಟನೆಗಳು ಹಾಗೂ ಸಿದ್ದರಾಮಯ್ಯ ಕಾರಣ

ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಎಂದು ಘೋಷಣೆ ಮಾಡಿತ್ತು.

ಸರ್ಕಾರದ ಆದೇಶದಲ್ಲಿ ಏನಿದೆ?

“ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುತ್ತಿರುವುದು ಮತ್ತು ಹಣ ದುರುಪಯೋಗಪಡಿಸಿಕೊಂಡಿರುವುದು, ಟ್ರಸ್ಟ್​ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಕಲಂ ಸೆಕ್ಷನ್ 42 ಮತ್ತು 43ರನ್ವಯ “ಘೋಷಿತ ಸಂಸ್ಥೆ” ಎಂದು ಘೋಷಿಸಲಾಗಿದೆ” ಎಂದು ಆದೇಶ ಹೊರಡಿಸಲಾಗಿದೆ.

ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...