ಗೌರಿ-ಗಣೇಶ ಹಬ್ಬ | ಮಾರ್ಗಸೂಚಿ ಬಿಡುಗಡೆ ಮಾಡಿದ ಬೆಂಗಳೂರು ಪೊಲೀಸರು

Date:

ಗೌರಿ-ಗಣೇಶ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಗಣೇಶನನ್ನು ಕೂಡಿಸಿ ಪೂಜೆ ಸಲ್ಲಿಸಲಾಗುತ್ತದೆ. ಈ ವೇಳೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಜನರು ಪಾಲಿಸಬೇಕಾದ ಕೆಲವು ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರದ ಪೊಲೀಸ್‌ ಆಯುಕ್ತ ದಯಾನಂದ್, “ಎಲ್ಲ ಗೌರಿ-ಗಣೇಶ ಸಮಿತಿಗಳಿಗೆ, ಗಣೇಶ ಮೂರ್ತಿಗಳ ಸಾರ್ವಜನಿಕ ಪ್ರತಿಷ್ಠಾಪನೆಗೆ ಸೂಕ್ತ ಪರವಾನಗಿಗಳನ್ನು ಪಡೆಯಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಸಾರ್ವಜನಿಕವಾಗಿ ಬಲವಂತದ ಮತ್ತು ಅಕ್ರಮ ಮಾರ್ಗವಾಗಿ ಹಣ ಸಂಗ್ರಹಿಸಬಾರದು” ಎಂದು ಸೂಚನೆ ನೀಡಿದರು.

  • ಸ್ಥಳೀಯ ಪೊಲೀಸ್ ಠಾಣೆಯ ಅನುಮತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು ಇದು ಕಡ್ಡಾಯ.
  • ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್‌ ಹಾಕಲು ವಿಶೇಷ ಅನುಮತಿ ಪಡೆಯಬೇಕು.
  • ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಅವಕಾಶವಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಒತ್ತುವರಿ ಗುರುತಿಸಲು ಪಾಲಿಕೆ ಜತೆ ಕೈಜೋಡಿಸಿ

  • ಮೆರವಣಿಗೆ ವೇಳೆ ಅಹಿಕತರ ಘಟನೆ ನಡೆದರೆ ಅದಕ್ಕೆ ಸಂಘಟಕರೇ ಹೊಣೆಯಾಗುತ್ತಾರೆ.
  • ಕಾರ್ಯಕ್ರಮ ನಡೆಯುವ ಜಾಗದಲ್ಲಿ ಆಯೋಜಕರು ಬೆಂಕಿ ನಂದಿಸುವ ಸಾಮಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ವಸ್ತುಗಳನ್ನು ಇಟ್ಟುಕೊಂಡಿರಬೇಕು.
  • ಕಟ್ಟಿಗೆ, ಉರುವಲು, ಸೀಮೆಎಣ್ಣೆ ಸೇರಿದಂತೆ ಬೆಂಕಿ ಅವಘಡಕ್ಕೆ ಸಂಬಂಧಿಸಿದ ಯಾವುದೇ ಸಾಮಗ್ರಿಗಳನ್ನು ಮೂರ್ತಿ ಸ್ಥಾಪನೆ ಮಾಡಿರುವ ಜಾಗದಲ್ಲಿ ಇಡಬಾರದು.
  • ವಿದ್ಯುತ್ ಸಂಪರ್ಕಕ್ಕೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯಿಂದ ಎನ್‌ಓಸಿ ಕಡ್ಡಾಯ.
  • ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶ.
  • ಡಿಜೆ ಸೌಂಡ್‌ ಬಳಕೆಗೆ ಅವಕಾಶವಿಲ್ಲ.
  • ಮೆರವಣಿಗೆ ಸಮಯದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ.
  • ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...