ಬೆಂಗಳೂರಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ, ಸಹಕರಿಸದಿದ್ದಾಗ ಅತ್ಯಾಚಾರ; ಇಬ್ಬರ ಬಂಧನ

Date:

ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್ ಫ್ರೆಂಡ್ಸ್ ಅದಲು ಬದಲು ಮಾಡಿಕೊಂಡು ಸಹಕರಿಸುವಂತೆ ಒತ್ತಾಯಿಸಿದ್ದು, ಸಹಕರಿಸದಿದ್ದಾಗ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಹರೀಶ್, ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಬೆಂಗಳೂರು ಹೊರವಲಯದಲ್ಲಿ ಪಾರ್ಟಿಗೆಂದು ಕರೆದೊಯ್ದು ಸ್ನೇಹಿತನೊಂದಿಗೆ ಸಹಕರಿಸುವಂತೆ ಒತ್ತಾಯಿಸಿದ್ದ. ಆಕೆ ಒಪ್ಪದಿದ್ದಾಗ ಆರೋಪಿಗಳು ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಿಂಗರ್ಸ್ ವಾಟ್ಸ್ ಆಪ್ ಗ್ರೂಪ್

ವಾಟ್ಸ್ ಆಪ್ ಗ್ರೂಪ್ ಮಾಡಿಕೊಂಡಿದ್ದ ‘ಸ್ವಿಂಗರ್ಸ್’ ಟೀಂ, ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಗೆ ಕಪಲ್ಸ್ ಜೊತೆಗೆ ಆಸಾಮಿಗಳು ತಮ್ಮ ಪ್ರಿಯತಮೆಯರನ್ನು ಪರಸ್ಪರ ಎಕ್ಸ್ ಚೇಂಜ್ ಮಾಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲ ಒಬ್ಬನ ಗರ್ಲ್ ಫ್ರೆಂಡ್ ಜೊತೆಗೆ ಮತ್ತೊಬ್ಬ ಬೆಡ್ ಶೇರ್ ಮಾಡುತ್ತಿದ್ದ. ಇದೇ ರೀತಿ ಯುವತಿಯನ್ನ ಹರೀಶ್ ಎಂಬಾತ ಕೂಪಕ್ಕೆ ದೂಡಿದ್ದ. ಒಪ್ಪದಿದ್ದಾಗ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಎಸಗಿದ್ದ.

ದೂರು ಆಧರಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಮೊಬೈಲ್‌ ಪರಿಶೀಲನೆ ವೇಳೆ ಭಯಾನಕ‌ ಸತ್ಯ ಬಯಲಾಗಿದೆ. ಮೊಬೈಲ್ ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೋಗಳು ಪತ್ತೆಯಾಗಿವೆ. ಇನ್ನು ಏಕಾಂತದಲ್ಲಿದ್ದ ವಿಡಿಯೋಗಳನ್ನು ಸಹ ಆರೋಪಿಗಳು ರೆಕಾರ್ಡ್​ ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಅದೇ ವೀಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...