ಬೆಂಗಳೂರು | ‘2,000 ರೂ. ನೋಟು ಕೊಟ್ಟರೆ ಹಣದ ಮಳೆ ಸುರಿಯುತ್ತದೆ’; ಜನರನ್ನು ವಂಚಿಸಿದ್ದ 10 ಮಂದಿ ಬಂಧನ

Date:

ಧಾರ್ಮಿಕ ವಿಧಿವಿಧಾನಗಳ ಮೂಲಕ ಹಣದ ಮಳೆ ಸುರಿಸುವುದಾಗಿ ಭರವಸೆ ನೀಡಿ 2,000 ರೂ. ಮುಖಬೆಲೆಯ (ಆರ್‌ಬಿಐ ಹಿಂಪಡೆದುಕೊಂಡಿದೆ) ನೋಟುಗಳನ್ನು ನಾಗರಿಕರಿಂದ ಸಂಗ್ರಹಿಸಿ, ವಂಚಿಸಿದ್ದ 10 ಮಂದಿಯ ಗುಂಪೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಮಾರು 18 ಲಕ್ಷ ರೂ. ಮೌಲ್ಯದ 2,000 ರೂ. ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರ್‌ಬಿಐನಲ್ಲಿ ಠೇವಣಿ ಇಡಲಾಗಿದ್ದ ಕೆಲವು 2,000 ರೂ. ಮುಖಬೆಲೆಯ ನೋಟುಗಳ ಸೀರಿಸ್‌ ಸಂಖ್ಯೆಗಳು ಮತ್ತು ಕೋಡ್‌ಗಳನ್ನು ತಿರುಚಲಾಗಿದೆ ಎಂದು ಆರ್‌ಬಿಐ ವ್ಯವಸ್ಥಾಪರು ಅಕ್ಟೊಬರ್‌ನಲ್ಲಿ ದೂರು ನೀಡಿದ್ದರು. ಅವರ ದೂರಿನಿಂದಾಗಿ ಪ್ರಕರಣವು ಬೆಳಕಿಗೆ ಬಂದಿದೆ. ತನಿಖೆ ನಡೆಸಿದ ಹಲಸೂರು ಗೇಟ್ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.

“ಆರೋಪಿಗಳು – 2018ರಿಂದ ನಿರ್ದಿಷ್ಟ ಸರಣಿಯ (ಸೀರಿಸ್‌) M, N, O, P ಮತ್ತು Gಗಳಲ್ಲಿ ಮುದ್ರಿತವಾದ 2,000 ರೂ. ನೋಟುಗಳನ್ನು ತಮಗೆ ನೀಡಿದರೆ, ಧಾರ್ಮಿಕ ಆಚರಣೆಗಳನ್ನು ನಡೆಸಿ ಹಣವನ್ನು ನೂರು ಪಟ್ಟು ಹೆಚ್ಚಿಸಿ ಹಣದ ಮಳೆ ಸುರಿಸುತ್ತೇವೆಂದು ಜನರಿಗೆ ವಂಚಿಸಿದ್ದಾರೆ. ಸುಳ್ಳು ಆಮಿಷವೊಡ್ಡಿ ಹಳೆಯ 2,000 ರೂ. ನೋಟುಗಳನ್ನು ಹೊಂದಿರುವ ಜನರಿಂದ ನೋಟುಗಳನ್ನು ಪಡೆದುಕೊಂಡಿದ್ದಾರೆ” ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನಿಖೆಯ ಸಮಯದಲ್ಲಿ, ಅಕ್ಟೋಬರ್ 24ರಂದು ಕಬ್ಬನ್‌ಪೇಟೆಯಿಂದ ಮೊದಲ ಆರೋಪಿಯನ್ನು ಪೊಲೀಸರು ಬಂಧಿಸಿದರು. ಅವರು ಕಮಿಷನ್‌ಗಾಗಿ ಬ್ಯಾಂಕಿನಲ್ಲಿ ಅಂತಹ 40,000 ರೂ. ನೋಟುಗಳನ್ನು ಠೇವಣಿ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ, ತನ್ನ ಇಬ್ಬರು ಸಹಚರರ ಮಾಹಿತಿಯನ್ನು ಪೊಲೀಸರು ನೀಡಿದ್ದರು. ಬಳಿಕ, ಆ ಇಬ್ಬರನ್ನೂ ಪೊಲೀಸರು ಬಂಧಿಸಿದರು.

ಹೆಚ್ಚಿನ ತನಿಖೆ ಮುಂದುವರೆದಂತೆ, ಈ ಮೂವರು ಆರೋಪಿಗಳಿಗೆ ತಮ್ಮ ಖಾತೆಗಳಿಗೆ ಜಮಾ ಮಾಡಲು 8 ಲಕ್ಷ ರೂ. ಮೌಲ್ಯದ 2,000 ರೂ. ಮುಖಬೆಲೆಯ ನೋಟುಗಳನ್ನು ಕೊಟ್ಟಿದ್ದ ಇತರ ಮೂವರು ವ್ಯಕ್ತಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅಕ್ಟೋಬರ್ 25ರಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಬಿಜೆಪಿ 1 ಕೋಟಿ ಉದ್ಯೋಗದ ಭರವಸೆ; 20 ವರ್ಷದಲ್ಲಿ ಆಗದ್ದು ಈಗ ಸಾಧ್ಯವೇ?

ನಂತರ, ಅಕ್ಟೋಬರ್ 28 ರಂದು ಆಂಧ್ರಪ್ರದೇಶದ ವಿವಿಧ ಭಾಗಗಳಲ್ಲಿ ಇನ್ನೂ ಮೂರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಅವರಿಂದ, 6 ಲಕ್ಷ ರೂ. ಮೌಲ್ಯದ 2,000 ರೂ. ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆಯ ಪರಿಣಾಮವಾಗಿ ಯಶವಂತಪುರದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ವಿಶೇಷ ಪರಿಕರಗಳನ್ನು ಬಳಸಿಕೊಂಡು ನೋಟುಗಳ ಮೇಲೆ ಸರಣಿ ಸಂಖ್ಯೆಗಳನ್ನು ಬದಲಾಯಿಸುತ್ತಿದ್ದರು ಮತ್ತು ವರ್ಷಗಳನ್ನು ಮುದ್ರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆತನ ನಿವಾಸದಿಂದ ಆ ಪರಿಕರಗಳು ಮತ್ತು 6 ಲಕ್ಷ ರೂ. ನಕಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈವರೆಗೆ, ಒಟ್ಟು 10 ಮಂದಿ ಆರೋಪಿಗಳು ಮತ್ತು 18 ಲಕ್ಷ ರೂ. 2,000 ಮುಖಬೆಲೆಯ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅವರೆಲ್ಲರನ್ನೂ ನವೆಂಬರ್ 3 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಬ್ಬ ಮಹಿಳಾ ಆರೋಪಿಯನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...