ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲು ಸೇವೆ ಪಂಢರಪುರದವರೆಗೆ ವಿಸ್ತರಣೆ

Date:

ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿರುವ (ರೈಲುಗಳ ಸಂಖ್ಯೆ-16535/16536) ಮೈಸೂರು–ಸೋಲಾಪುರ-ಮೈಸೂರು ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲುಗಳನ್ನು ಪಂಢರಪುರ ನಿಲ್ದಾಣದವರೆಗೆ ವಿಸ್ತರಿಸುವ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಸೆಪ್ಟೆಂಬರ್ 4 ರಿಂದ ಜಾರಿಗೆ ಬರುವಂತೆ (ರೈಲು ಸಂಖ್ಯೆ-16535) ಮೈಸೂರು-ಪಂಢರಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ಮೈಸೂರು ನಿಲ್ದಾಣದಿಂದ ಮಧ್ಯಾಹ್ನ 3:45 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:25 ಗಂಟೆಗೆ ಪಂಢರಪುರ ನಿಲ್ದಾಣವನ್ನು ತಲುಪಲಿದೆ ಎಂದು ಹೇಳಿದೆ.

ಈ ರೈಲಿನ ನಿಲುಗಡೆ/ವೇಳಾಪಟ್ಟಿಯೂ ಬಸವನ ಬಾಗೇವಾಡಿ ರೋಡ್ ನಿಲ್ದಾಣದವರೆಗೆ ಯಾವುದೇ ಬದಲಾವಣೆ ಇರುವುದಿಲ್ಲ. ಈ ರೈಲು ವಿಜಯಪುರ – 07:55/08:00AM, ಇಂಡಿ ರೋಡ್ – 08:41/08:42AM, ಸೋಲಾಪುರ – 10:15/10:20AM ಮತ್ತು ಕುರ್ದುವಾಡಿ -11:25/11:27AM ನಿಲ್ದಾಣಗಳಿಗೆ ಆಗಮಿಸಿ/ನಿರ್ಗಮಿಸಲಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದಿರುಗುವ ದಿಕ್ಕಿನಲ್ಲಿ ಸೆಪ್ಟೆಂಬರ್ 5 ರಿಂದ ಜಾರಿಗೆ ಬರುವಂತೆ (ರೈಲು ಸಂಖ್ಯೆ-16536) ಪಂಢರಪುರ-ಮೈಸೂರು ಗೋಲ್‌ ಗುಂಬಜ್ ಎಕ್ಸ್‌ಪ್ರೆಸ್‌ ಪಂಢರಪುರದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 10:45 ಗಂಟೆಗೆ ಮೈಸೂರು ನಿಲ್ದಾಣವನ್ನು ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಕುರ್ದುವಾಡಿ, ಸೋಲಾಪುರ, ಇಂಡಿ ರೋಡ್, ವಿಜಯಪುರ, ಬಸವನ ಬಾಗೇವಾಡಿ ರೋಡ್, ಆಲಮಟ್ಟಿ, ಬಾಗಲಕೋಟ, ಗುಳೇದಗುಡ್ಡ ರೋಡ್, ಬಾದಾಮಿ, ಹೊಳೆ ಆಲೂರು, ಗದಗ, ಅಣ್ಣಿಗೇರಿ ನಿಲ್ದಾಣಗಳಿಗೆ ಆಗಮಿಸಿ/ನಿರ್ಗಮಿಸಲಿದೆ. ಹುಬ್ಬಳ್ಳಿ ನಿಲ್ದಾಣದಿಂದ ಮೈಸೂರು ನಿಲ್ದಾಣಗಳವರೆಗಿನ ಈ ರೈಲಿನ ವೇಳಾಪಟ್ಟಿ, ನಿಲುಗಡೆ ಹಾಗೂ ರೈಲುಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಕನ್ನಡಿಗ, ಜಾವೆಲಿನ್ ಪಟು ಮನುಗೆ ಬೆಂಬಲ ನೀಡಿ: ಸಿಎಂಗೆ ಮೋಹನ್‌ ದಾಸರಿ ಮನವಿ

ಹೊಳೆನರಸೀಪುರ ನಿಲ್ದಾಣ: ರೈಲುಗಳ ಪ್ರಾಯೋಗಿಕ ನಿಲುಗಡೆ

ಪ್ರಾಯೋಗಿಕ ಆಧಾರದ ಮೇಲೆ ಆರು ತಿಂಗಳ ಅವಧಿಗೆ ಒಂದು ನಿಮಿಷ ಕಾಲ ಹೊಳೆನರಸೀಪುರ ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ತಾತ್ಕಾಲಿಕ ಅವಕಾಶ ನೀಡಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಹೇಳಿದೆ.

ಮೈಸೂರಿನಿಂದ 2023ರ ಸೆ. 8 ರಿಂದ 2024ರ ಮಾ. 8ರವರೆಗೆ ಹಾಗೂ ಹಜರತ್ ನಿಜಾಮುದ್ದೀನ್ ನಿಲ್ದಾಣದಿಂದ 2023ರ ಸೆ. 9 ರಿಂದ 2024ರ ಮಾ.11 ರವರೆಗೆ ಜಾರಿಗೆ ಬರುವಂತೆ (ರೈಲುಗಳ ಸಂಖ್ಯೆ-12781/12782) ಮೈಸೂರು ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣಗಳ ನಡುವೆ ಸಂಚರಿಸುವ ಸ್ವರ್ಣ ಜಯಂತಿ ಎಕ್ಸ್‌ಪ್ರೆಸ್‌ ರೈಲುಗಳು ಹೊಳೆನರಸೀಪುರ ನಿಲ್ದಾಣದಲ್ಲಿ ಒಂದು ನಿಮಿಷ ನಿಲುಗಡೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

• (ರೈಲು ಸಂಖ್ಯೆ-12781) ಹೊಳೆನರಸೀಪುರ ನಿಲ್ದಾಣಕ್ಕೆ ರಾತ್ರಿ 9:30/9:31 ಗಂಟೆಗೆ ಆಗಮಿಸಿ/ ನಿರ್ಗಮಿಸಲಿದೆ.

• (ರೈಲು ಸಂಖ್ಯೆ-12782) ಹೊಳೆನರಸೀಪುರ ನಿಲ್ದಾಣಕ್ಕೆ ರಾತ್ರಿ 11:51/11:52  ಗಂಟೆಗೆ ಆಗಮಿಸಿ/ ನಿರ್ಗಮಿಸಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...