ದೇವನಹಳ್ಳಿಯಲ್ಲಿ ಸರ್ಕಾರಿ ಪ್ರಮಾಣೀಕೃತ ವಾಹನ ಗುಜರಿ ಕೇಂದ್ರ ಶೀಘ್ರದಲ್ಲೇ ಆರಂಭ

Date:

ಬೆಂಗಳೂರಿನ ದೇವನಹಳ್ಳಿಯಲ್ಲಿ ಸರ್ಕಾರಿ ಪ್ರಮಾಣೀಕೃತ ವಾಹನ ಗುಜರಿ ಕೇಂದ್ರ ಶೀಘ್ರದಲ್ಲೇ ಆರಂಭವಾಗಲಿದೆ. ಇದು ಕರ್ನಾಟಕದಲ್ಲಿಯೇ ಮೊದಲನೇ ವಾಹನ ಗುಜರಿ (ಸ್ಕ್ರ್ಯಾಪಿಂಗ್‌) ಕೇಂದ್ರವಾಗಲಿದೆ.

ಈ ವಾಹನ ಗುಜರಿ ಕೇಂದ್ರದಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗುತ್ತದೆ. ರಾಜ್ಯ ಸರ್ಕಾರವು ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯವನ್ನು (ಆರ್‌ವಿಎಸ್‌ಎಫ್) ಸ್ಥಾಪಿಸಲು ಮೂರು ಖಾಸಗಿ ಕಂಪನಿಗಳನ್ನು ಅಂತಿಮಗೊಳಿಸಿದೆ. ಈ ತಿಂಗಳ ಅಂತ್ಯದ ವೇಳೆಗೆ ಅದಕ್ಕೆ ಅನುಮೋದನೆ ನೀಡುವ ನಿರೀಕ್ಷೆಯಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಮತ್ತು ಕೊಪ್ಪಳದಲ್ಲಿ ಇನ್ನೂ ಎರಡು ಗುಜರಿ ಕೇಂದ್ರ ಸ್ಥಾಪಿತವಾಗಲಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹೊಸ ನೀತಿಯನ್ವಯ ಇದು ಆರಂಭವಾಗಿದೆ. “15 ವರ್ಷಕ್ಕಿಂತ ಹಳೆಯದಾದ, ಅನರ್ಹ ವಾಹನಗಳು ಹಾಗೂ ಮಾಲಿನ್ಯವನ್ನು ಉಂಟುಮಾಡುವ ವಾಹನಗಳನ್ನು ನೋಂದಾಯಿತ ವಾಹನ ಗುಜರಿ ಕೇಂದ್ರಕ್ಕೆ ತಂದು (ಆರ್‌ವಿಎಸ್‌ಎಫ್) ರದ್ದುಗೊಳಿಸಬೇಕು. ಭಾರತದಾದ್ಯಂತ ಸುಮಾರು 60 ಆರ್‌ವಿಎಸ್‌ಎಫ್‌ಗಳಿವೆ. ಆದರೆ, ಕರ್ನಾಟಕದಲ್ಲಿ ಯಾವುದೂ ಇಲ್ಲ” ಎಂದು ಸಾರಿಗೆ ಇಲಾಖೆಯ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“15 ವರ್ಷಗಳಿಂದ ಓಡುತ್ತಿರುವ ಎಲ್ಲ ಸರ್ಕಾರಿ ವಾಹನಗಳನ್ನು ರದ್ದುಪಡಿಸಬೇಕು. 15 ವರ್ಷ ಮೇಲ್ಪಟ್ಟು ಓಡಿದ ಮತ್ತು ಫಿಟ್‌ನೆಸ್ ಪ್ರಮಾಣ ಪತ್ರ ಪಡೆಯದ ಖಾಸಗಿ ವಾಹನಗಳನ್ನು ಕಡ್ಡಾಯವಾಗಿ ರದ್ದುಗೊಳಿಸಬೇಕು. ಫಿಟ್‌ನೆಸ್ ಪ್ರಮಾಣಪತ್ರ ಪಡೆದಿರುವ ಖಾಸಗಿ ವಾಹನಗಳನ್ನು ರದ್ದುಪಡಿಸುವ ಅಗತ್ಯವಿಲ್ಲ” ಎಂದು ಹೆಚ್ಚುವರಿ ಸಾರಿಗೆ ಆಯುಕ್ತ (ದಕ್ಷಿಣ) ಮಲ್ಲಿಕಾರ್ಜುನ ಸಿ ತಿಳಿಸಿದರು.

“ಗುಜರಿ ಕೇಂದ್ರಕ್ಕೆ ಹೋಗುವ ವಾಹನಗಳ ಮೇಲೆ ಯಾವುದೇ ಪೊಲೀಸ್ ಪ್ರಕರಣಗಳು ಇರಬಾರದು. ಅವರು ಯಾವುದೇ ಬಾಕಿ ಇರುವ ಸಂಚಾರ ದಂಡವನ್ನು ಹೊಂದಿರಬಾರದು. ಆರ್‌ವಿಎಸ್‌ಎಫ್ ಪರಿಸರ ಸ್ನೇಹಿ ರೀತಿಯಲ್ಲಿ ವಾಹನಗಳನ್ನು ಸ್ಕ್ರ್ಯಾಪ್ ಮಾಡುತ್ತದೆ. ಅಪಾಯಕಾರಿ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಸ್ವಾಮೀಜಿ ಬಂಧನವಾದ್ರೆ, ಸತ್ಯ ಹೊರಬರಲಿದೆ: ಚೈತ್ರಾ ಕುಂದಾಪುರ

“ಸ್ಕ್ರ್ಯಾಪ್ ಮಾಡಿದ ನಂತರ, ವಾಹನ ಮಾಲೀಕರಿಗೆ ಡಿಸ್ಟ್ರಕ್ಷನ್ ಪ್ರಮಾಣಪತ್ರ (ಸಿಒಡಿ) ನೀಡಲಾಗುವುದು. ಅದನ್ನು ರಿಯಾಯಿತಿಗಳನ್ನು ಪಡೆಯಲು ಹೊಸ ವಾಹನಗಳನ್ನು ಖರೀದಿಸುವಾಗ ಉಪಯೋಗಿಸಬಹುದು” ಎಂದು ಹೇಳಿದರು.

“ಇಂತಹ ಸೌಲಭ್ಯವನ್ನು ಸ್ಥಾಪಿಸಲು ಸುಮಾರು ₹10 ಕೋಟಿ ವೆಚ್ಚವಾಗಲಿದೆ. ಡಿಸೆಂಬರ್ ಅಂತ್ಯದ ವೇಳೆಗೆ ದೇವನಹಳ್ಳಿಯಲ್ಲಿ ಕಾರ್ಯಾಚರಣೆ ಪ್ರಾರಂಭವಾಗುವ ಸಾಧ್ಯತೆಯಿದೆ” ಎಂದು ಮೂಲಗಳು ತಿಳಿಸಿವೆ.

ಮುಖ್ಯ ಅಂಶಗಳು

  • ಮಾಲಿನ್ಯಕಾರಕವಾಗಿರುವ 15 ವರ್ಷ ಮತ್ತು ಅದಕ್ಕೂ ಹಳೆಯ ವಾಹನಗಳನ್ನು ರದ್ದುಗೊಳಿಸಬೇಕು
  • ಸ್ಕ್ರ್ಯಾಪಿಂಗ್ ಪರಿಸರ ಸ್ನೇಹಿ ಆಗಿರಬೇಕು
  • ಆರ್‌ವಿಎಸ್‌ಎಫ್‌ನಲ್ಲಿ ಸ್ಕ್ರ್ಯಾಪಿಂಗ್ ಮಾಡಬೇಕು.
  • ಭಾರತದಲ್ಲಿ 60 ಆರ್‌ವಿಎಸ್‌ಎಫ್‌ಗಳಿವೆ. ಕರ್ನಾಟಕದಲ್ಲಿ ಯಾವುದೂ ಇಲ್ಲ
  • ಬೆಂಗಳೂರು, ತುಮಕೂರು, ಕೊಪ್ಪಳದಲ್ಲಿ ಘಟಕ ಸ್ಥಾಪಿಸಲು 3 ಕಂಪನಿಗಳಿಗೆ ಸರ್ಕಾರ ಅನುಮತಿ ನೀಡಿದೆ
  • ಸ್ಕ್ರ್ಯಾಪ್ ವಾಹನ ಮಾಲೀಕರು ಡಿಸ್ಟ್ರಕ್ಷನ್ ಪ್ರಮಾಣ ಪತ್ರವನ್ನು ಪಡೆಯಲು, ರಿಯಾಯಿತಿ ಪಡೆಯಲು ಹೊಸ ವಾಹನಗಳನ್ನು ಖರೀದಿಸುವಾಗ ಉಪಯೋಗಿಸಬಹುದು.
  • ರಾಜ್ಯದಲ್ಲಿ ಸುಮಾರು 15 ಲಕ್ಷ ವಾಹನಗಳು ಸ್ಕ್ರ್ಯಾಪಿಂಗ್‌ಗೆ ಯೋಗ್ಯವಾಗಿವೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...