ಬೆಂಗಳೂರು ಜಲಮಂಡಳಿ ಸುಪರ್ದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಹಸ್ತಾಂತರ

Date:

ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ. ಆದರೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ. ಈಗ ಬೇಸಿಗೆ ಆರಂಭವಾಗುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತಿ ಹೋದರೆ ಆರ್.ಓ. ಘಟಕಗಳಿಗೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿ ಮುಖಾಂತರವೇ ಪೂರೈಸಬೇಕು” ಎಂದು ಹೇಳಿದ್ದಾರೆ.

“ನೀರು ಸರಬರಾಜು ಮಾಡುವ ಕುರಿತು ಎರಡು ಸಂಸ್ಥೆಗಳ ನಡುವೆ ಯಾವುದೇ ರೀತಿಯ ಸಮನ್ವಯದ ಕೊರತೆ ಉಂಟಾದರೂ ನಾಗರೀಕರಿಗೆ ತೊಂದರೆಯಾಗುತ್ತದೆ. ಆದ ಕಾರಣಕ್ಕೆ ಈ ಅನಾನುಕೂಲತೆ ತಪ್ಪಿಸುವ ದೃಷ್ಟಿಯಿಂದ ಬಿಬಿಎಂಪಿಗೆ ಸೇರಿದ ಎಲ್ಲಾ ಆರ್.ಓ. ಪ್ಲಾಂಟ್ ಗಳನ್ನು ಬೆಂಗಳೂರು ಜಲಮಂಡಳಿಯೇ ನಿರ್ವಹಣೆ ಮಾಡುವುದು ಸೂಕ್ತ” ಎಂದು ಡಿಸಿಎಂ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ಸಂಚಾರ ಕೈಗೊಂಡು ಪರಿಶೀಲಿಸಿದ ವೇಳೆ ಬೆಂಗಳೂರು ನಗರದ ಕೆಲವು ಆರ್.ಓ. ಪ್ಲಾಂಟ್ ಗಳು ಕೆಲಸ ಮಾಡದೇ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದರು.

WhatsApp Image 2025 02 24 at 1.12.59 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...