ಭಾರಿ ಮಳೆ: ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ

Date:

ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು (ಅ. 21, ಸೋಮವಾರ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ, ಎಲ್​​​​ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ.

ಕಾಲೇಜುಗಳ ಕಟ್ಟಡಗಳು ದುರ್ಬಲವಾಗಿದ್ದಲ್ಲಿ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿದ್ದರಿಂದ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಿಬಿಎಂಪಿ ಮುನ್ನೆಚ್ಚರಿಕೆ ಸಂದೇಶ

ಭಾರಿ ಮಳೆಯಾಗುತ್ತಿರುವ ಮತ್ತು ಮಳೆಯ ಮುನ್ಸೂಚನೆ ಇರುವುದರಿಂದ ಬೆಂಗಳೂರು ಜನತೆಗೆ ಬಿಬಿಎಂಪಿ ಹಲವು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಲಹೆ ನೀಡಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ನೀಡಿದೆ.

‘ನಾಗರಿಕರೇ, ಇದು 21.10.2024 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ದಯವಿಟ್ಟು ಮುನ್ನೆಚ್ಚರಿಕೆಗಳನ್ನು ಅನುಸರಿಸಿ. ಮನೆಯೊಳಗೆಯೇ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಸುರಕ್ಷಿತ ಸ್ಥಳಗಳಲ್ಲಿ ಆಶ್ರಯವನ್ನು ಪಡೆದುಕೊಳ್ಳಿ, ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ. ವಿದ್ಯುತ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್​ಪ್ಲಗ್ ಮಾಡಿ ಇಡಿ. ತಕ್ಷಣವೇ ಜಲಮೂಲಗಳಿಂದ ಹೊರಬನ್ನಿ ಎಂದು ಬಿಬಿಎಂಪಿ ಸಲಹೆ ನೀಡಿದೆ.

ವಿದ್ಯುಚ್ಛಕ್ತಿಗೆ ಸಂಬಂಧಿತ ಎಲ್ಲ ಸಾಧನಗಳಿಂದ ದೂರವಿರಿ. ನೀವು ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಯಾವುದೇ ಸಹಾಯ ಬೇಕಿದ್ದಲ್ಲಿ ದಯವಿಟ್ಟು 1533 ಗೆ ಕರೆ ಮಾಡಿ ಎಂದು ಬಿಬಿಎಂಪಿ ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...