ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ; ಸೋಮವಾರವೂ ಮಳೆಯಾಗುವ ಸಾಧ್ಯತೆ

Date:

ಮುಂಜಾನೆಯಿಂದ ನೆತ್ತಿ ಸುಡುವ ಬಿಸಿಲಿನ ಕಾವಿನಲ್ಲಿದ್ದ ಬೆಂಗಳೂರಿನಲ್ಲಿ ಸಂಜೆ ಮೂರರಿಂದ ದಿಢೀರ್‌ ಗುಡುಗು ಸಹಿತ ಆಲಿಕಲ್ಲು ಮಳೆ ಒಂದೇ ಸಮನೆ ಧಾರಕಾರವಾಗಿ ಸುರಿಯಿತು.

ಬಾನುವಾರ ವಾರಾಂತ್ಯವಾದ ಕಾರಣ ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚು ಲಾಭವಿರುತ್ತಿತ್ತು. ಆದರೆ, ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಷ್ಟ ಉಂಟಾಗಿದೆ. ವಾರಾಂತ್ಯದ ದಿನವನ್ನು ಹೊರಗೆ ಕಳೆಯಲು ಹೊರಟಿದ್ದ ನಾಗರಿಕರಿಗೆ ಮಳೆಯಿಂದಾಗಿ ಪೆಚ್ಚು ಮೋರೆ ಹಾಕುವಂತಾಗಿದೆ.

ಸೋಮವಾರವೂ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಳೆ ಮುಂದಿನ ಕೆಲವು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಶನಿವಾರ ರಾತ್ರಿ ನಗರದಲ್ಲಿ 25 ಮಿ.ಮೀ ಮಳೆಯಾಗಿದ್ದು, ಉತ್ತರಹಳ್ಳಿ ಭಾಗದಲ್ಲಿ ಮಾತ್ರ 33 ಮಿ.ಮೀ ಮಳೆಯಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಮರಾಜಪೇಟೆ, ಅಶೋಕನಗರ, ಹಲಸೂರು, ಮೆಜೆಸ್ಟಿಕ್, ದೀಪಾಂಜಲಿ ನಗರ, ಕಾಮಾಕ್ಷಿಪಾಳ್ಯ, ಮಲ್ಲೇಶ್ವರ, ಶ್ರೀರಾಮಪುರ, ರಾಜಾಜಿನಗರ ಹಾಗೂ ವಿಜಯನಗರ, ಯಶವಂತಪುರ, ರಿಚ್‌ಮಂಡ್ ರಸ್ತೆ, ನಂಜಪ್ಪ ಸರ್ಕಲ್, ಜೆ ಪಿ ನಗರ, ಬನಶಂಕರಿ, ಶಾಂತಿನಗರ, ಚಾಮರಾಜಪೇಟೆ, ಲಗ್ಗೆರೆ ಸೇರಿದಂತೆ ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಗಾಳಿಮಳೆ ಆಗಿದೆ. ವಾಹನ ಸವಾರರು ಮತ್ತು ಪ್ರಯಾಣಿಕರು ಅಂಗಡಿಗಳ ಮಗ್ಗಲುಗಳಲ್ಲಿ, ಮೇಲ್ಸೇತುವೆಗಳ ಅಡಿಯಲ್ಲಿ ಆಶ್ರಯ ಪಡೆಯುತ್ತಿರುವ ದೃಶ್ಯ ಕಂಡುಬಂದಿತು.

ಈ ಬಗ್ಗೆ ನೆಟ್ಟಿಗರು ಟ್ವೀಟ್ ಮಾಡಿದ್ದು, “ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಇಂತಹ ಆಲಿಕಲ್ಲು ಮಳೆ ಎಂದು ಕಂಡಿರಲಿಲ್ಲ. ಭಾನುವಾರದ ಕ್ರಿಕೆಟ್‌ ಪಂದ್ಯ ಮರೆತು, ಮುಂದಾಗುವ ನಷ್ಟದ ಬಗ್ಗೆ ಚಿಂತಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಬಿರುಗಾಳಿಗೆ ಕೆಲವೆಡೆ ಮರಗಳು ಧರೆಗುರುಳಿವೆ. ಕುಮಾರಕೃಪಾ ರಸ್ತೆಯಲ್ಲಿ ಕಾರು ಹಾಗೂ ಆಟೊದ ಮೇಲೆ ಮರದ ರೊಂಬೆಗಳು ಬಿದ್ದಿದ್ದು ಪ್ರಯಾಣಿಕರು ಪಾರಾಗಿದ್ಧಾರೆ. ಮಳೆಯೊಂದಿಗೆ ದಟ್ಟೈಸಿದ ಮೋಡದಿಂದ ಮಧ್ಯಾಹ್ನವೇ ಕಗ್ಗತ್ತಲು ಆವರಿಸಿತ್ತು.

ಭಾನುವಾರ ಅರ್ಧಗಂಟೆಯಿಂದ ಸುರಿಯುತ್ತಿರುವ ಮಳೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ರಸ್ತೆಗಳು ನದಿಯಂತಾಗಿದೆ. ಮೇಲ್ಸೆತುವೆ ಬಳಿ ಆಶ್ರಯ ಪಡೆದಿದ್ದ ವಾಹನ ಸವಾರರು ಮಳೆ ನೀರಿನಲ್ಲೆ ನಿಂತು ಪರದಾಡುವಂತಾಗಿದೆ.

ಹೆಬ್ಬಾಳ, ಅಶೋಕ ನಗರ, ಆರ್‌ಟಿ ನಗರ, ಯಲಹಂಕ, ಮಲ್ಲೇಶ್ವರ, ಮೆಜೆಸ್ಟಿಕ್‌, ವಿಧಾನಸೌಧದ ಸುತ್ತಮುತ್ತ, ಸದಾಶಿವನಗರ, ಬಸವನಗುಡಿ, ಜಯನಗರ , ದೊಮ್ಮಲೂರು, ಹೊಸೂರು ರಸ್ತೆ ಭಾಗದಲ್ಲಿ ಅರ್ಧ ಗಂಟೆಯಿಂದ ನಿರಂತರ ಮಳೆಯಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...