ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಜೋರು ಮಳೆ, ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೂ ಅಡ್ಡಿ

Date:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಜೋರು ಮಳೆಯಾಗಿದೆ. ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾನವಾಗಿತ್ತು. ಸಂಜೆ 5 ಗಂಟೆಗೆ ಆರಂಭವಾದ ಮಳೆ 8 ಗಂಟೆವರೆಗೂ ಸುರಿದಿದೆ.

ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧದ ಪಂದ್ಯ ಮಳೆಯಿಂದ ಇನ್ನೂ ಆರಂಭವಾಗಿಲ್ಲ.

ಶನಿವಾರ ಸಂಜೆ ಬೆಂಗಳೂರಿನ ಶಾಂತಿನಗರ, ರಿಚ್ಮಂಡ್​ ಸರ್ಕಲ್​, ಕಾರ್ಪೊರೇಷನ್, ಕಬ್ಬನ್​ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್​.ಮಾರ್ಕೆಟ್, ಮೆಜೆಸ್ಟೆಕ್​, ರಾಜಾಜಿನಗರ, ಲಾಲ್​ಬಾಗ್​, ಜಯನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ರಾತ್ರಿ 7:30ಕ್ಕೆ ಆರ್​ಸಿಬಿ ವರ್ಸಸ್​ ಕೆಕೆಆರ್ ಪಂದ್ಯ ಆರಂಭವಾಗಲಿದೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನ ಮಳೆಯಾಗುತ್ತಿರುವುದರಿಂದ ಆರ್​ಸಿಬಿ ಅಭಿಮಾನಿಗಳಲ್ಲಿ ನಿರಾಶೆ ಮೂಡಿದೆ.

ಸಂಚಾರ ದಟ್ಟನೆ

ಭಾರಿ ಮಳೆಯಾಗುತ್ತಿರುವುದರಿಂದ ನಗರದ ಹಲವು ರಸ್ತೆಗಳ ಮೇಲೆ ನೀರು ನಿಂತಿದೆ. ಹೆಬ್ಬಾಳದಲ್ಲಿ ಮಳೆ ಬರುತ್ತಿರುವುದರಿಂದ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳ ಕಡೆ ಹೋಗುವ ರಸ್ತೆಯಲ್ಲಿ ತೀವ್ರ ಸಂಚಾರದಟ್ಟಣೆ ಉಂಟಾಗಿದೆ.

ವರ್ತೂರು ಕಡೆಯಿಂದ, ವೈಟಫಿಲ್ಡ್ ಕಡೆಗೆ ಹೋಗುವ ಮಾರ್ಗದಲ್ಲಿ, ಕಸ್ತೂರಿನಗರ ಕಡೆಯಿಂದ ಹೆಬ್ಬಾಳ ಮುಖ್ಯ ರಸ್ತೆಯ ಕಡೆಗೆ ಹೋಗುವ ಮಾರ್ಗದಲ್ಲಿ, ಬಾಗಲೂರು ಕಡೆಯಿಂದ ನಗರ ಮತ್ತು ವಿಮಾನ ನಿಲ್ದಾಣದ ಕಡೆಗೆ ಸಂಚರಿಸುವ ರಸ್ತೆಯಲ್ಲಿ ಮತ್ತು ನ್ಯಾಷನಲ್ ಗೇಮ್ಸ್ ವಿಲೇಜ್ ಗೆಟ್​ನಿಂದ ಸೋನಿ ವರ್ಲ್ಡ್ ಜಂಕ್ಷನ್ ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ನಿಧಾನವಾಗಿ ಚಲಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೀದರ್‌: ಭಾರೀ ಮಳೆ

ಬೀದರ್ ಜಿಲ್ಲೆಯ ಹಲವು ಕಡೆ ಇಂದು ಸಾಯಂಕಾಲ ಗುಡುಗು ಸಹಿತವಾಗಿ ಭಾರಿ ಮಳೆಯಾಗಿದೆ. ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು. ಸಾಯಂಕಾಲ ಸಮಯದಲ್ಲಿ ಮೋಡವಾಗಿ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ.

ಬೀದ‌ರ್ ನಗರ ಸೇರಿದಂತೆ ನೌಬಾದ್ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಭಾರಿ ಮಳೆಯಾಗಿದೆ. ಜಿಲ್ಲೆಯಲ್ಲಿ ಇಂದು ಸೇರಿದಂತೆ ರವಿವಾರ ಹಾಗೂ ಸೋಮವಾರ ಇದೆ ರೀತಿಯ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...