ಮೂರು ವಾರಗಳ ಕಾಲ ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಹೈಕೋರ್ಟ್‌ ಆದೇಶ

Date:

  • ಮಾ.20ರಂದು ಸಭೆ ನಡೆಸಿದ್ದ ಕಾರ್ಮಿಕ ಇಲಾಖೆ ಆಯುಕ್ತರು
  • ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಮುಷ್ಕರ

ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ, ಮಾ. 24ರಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ, ಮೂರು ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಸಾರಿಗೆ ನೌಕರರ ಮುಷ್ಕರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

ಸಿಜೆ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿ, ಸಂಘಟನೆಗಳಿಗೆ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ, “ಕಾರ್ಮಿಕ ಇಲಾಖೆ ಆಯುಕ್ತರು ಮಾ.20ರಂದು ಸಭೆ ನಡೆಸಿದ್ದರು. ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಮುಂದಿನ ಸಭೆಯನ್ನು ಏ. 6ರಂದು ನಿಗದಿಪಡಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

“ಸಾರಿಗೆ ಮುಷ್ಕರದಿಂದ ವಿದ್ಯಾರ್ಥಿಗಳು, ನೌಕರರು, ಪ್ರಯಾಣಿಕರಿಗೆ ತೊಂದರೆ ಉಂಟಾಗಲಿದೆ. ವರ್ಷಪೂರ್ತಿ ಓದಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಎದುರಿಸಲು ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗುತ್ತದೆ. ಈ ಮುಷ್ಕರ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲಿದೆ. ಏ. 6ರಂದು ಮುಂದಿನ ಸಭೆಯಿರುವ ಕಾರಣ 3 ವಾರಗಳ ಕಾಲ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಬಾರದು” ಎಂದು ನ್ಯಾಯಾಲಯ ಸೂಚನೆ ನೀಡಿದೆ.

ಹಿನ್ನಲೆ ಏನು?

ರಾಜ್ಯಾದ್ಯಂತ ಮಾರ್ಚ್‌ 24ರಂದು ನಾಲ್ಕು ನಿಗಮಗಳ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿತ್ತು.

ಈ ಹಿಂದೆ, ಮಾರ್ಚ್ 21ರಂದು ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ 15% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆ, ಮಾ. 21ರ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿತ್ತು. ಈಗ ಚಂದ್ರಶೇಖರ್ ನೇತೃತ್ವದ ಸಮಾನ ಮನಸ್ಕರ ವೇದಿಕೆ ಸರ್ಕಾರಿ ನೌಕರರಿಗೆ ನೀಡುವಷ್ಟು ನಮಗೂ ಸಂಬಳ ನೀಡಬೇಕೆಂದು ಪಟ್ಟು ಹಿಡಿದಿದೆ. ಈ ಹಿನ್ನೆಲೆ ನಾಳೆಯಿಂದ ಮುಷ್ಕರಕ್ಕೆ ವೇದಿಕೆ ಕರೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...