ಬಿರಿಯಾನಿ ಕೇಳಿದರೆ ಕುಷ್ಕಾ ನೀಡಿದ ಹೋಟೆಲ್ ಮಾಲೀಕ; ₹1000 ದಂಡ ವಿಧಿಸಿದ ನ್ಯಾಯಾಲಯ

Date:

ಬಿರಿಯಾನಿ ನೀಡಿ ಎಂದು ಕೇಳಿದರೆ ಕುಷ್ಕಾ ನೀಡಿದ್ದ ಹೋಟೆಲ್ ಮಾಲೀಕನಿಗೆ ಗ್ರಾಹಕ ನ್ಯಾಯಾಲಯವು ₹1,000 ದಂಡ ವಿಧಿಸಿದೆ. ಜತೆಗೆ, ₹150 ಬಿರಿಯಾನಿ ಹಣವನ್ನು ಗ್ರಾಹಕನಿಗೆ ಹಿಂತಿರುಗಿಸುವಂತೆ ಆದೇಶಿಸಿದೆ.

ನಾಗರಭಾವಿ ನಿವಾಸಿ ಕೃಷ್ಣಪ್ಪ ಎಂಬುವವರು ಮನೆಯಲ್ಲಿ ಅಡುಗೆ ಅನಿಲ ಖಾಲಿಯಾದ ಹಿನ್ನೆಲೆ, 2023ರ ಏಪ್ರಿಲ್ 2ರಂದು ಐಟಿಐ ಲೇಔಟ್‌ನಲ್ಲಿರುವ ಹೋಟೆಲ್ ಪ್ರಶಾಂತ್‌ನಿಂದ ₹150 ಕೊಟ್ಟು ಬಿರಿಯಾನಿ ಪಾರ್ಸೆಲ್ ತಂದಿದ್ದರು.

ಮನೆಗೆ ಬಂದು ಪಾರ್ಸೆಲ್ ತೆರೆದು ನೋಡಿದಾಗ ತಾವು ಆರ್ಡ್‌ರ್ ಮಾಡಿದ್ದ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಇರಲಿಲ್ಲ. ಈ ಬಗ್ಗೆ ವಿಚಾರಿಸಲು ಕೃಷ್ಣಪ್ಪ ಅವರು ಹೋಟೆಲ್ ಪ್ರಶಾಂತ್ ಮಾಲೀಕನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ, ಹೋಟೆಲ್ ಮಾಲೀಕ ಮತ್ತೊಂದು ಬಿರಿಯಾನಿಯನ್ನು ಮನೆಗೆ ಕಳುಹಿಸಿ ಕೊಡುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ನಂಬಿ ಕೃಷ್ಣಪ್ಪ ದಂಪತಿ ಸುಮಾರು ಎರಡು ಗಂಟೆ ಊಟ ಮಾಡದೇ ಕಾದು ಕುಳಿತಿದ್ದಾರೆ. ಎಷ್ಟು ಕಾದರೂ ಚಿಕನ್ ಬಿರಿಯಾನಿ ಬರದ ಹಿನ್ನೆಲೆ, ಕುಷ್ಕಾ ತಿಂದೆ ರಾತ್ರಿ ಕಳೆದಿದ್ದಾರೆ.

ಎಪ್ರಿಲ್ 28 ರಂದು ಕೃಷ್ಣಪ್ಪ ಅವರು ಹೋಟೆಲ್ ಮಾಲೀಕನಿಗೆ ಈಗಾಗಿರುವ ತಪ್ಪಿನ ಬಗ್ಗೆ ಕಾನೂನಿನ ಮೊರೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ. ಆದರೆ, ಮಾಲೀಕ ಉದಾಸೀನ ತೋರಿ ಪ್ರತಿಕ್ರಿಯೆ ನೀಡದೆ ಸುಮ್ಮನಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ ಅಧಿಕಾರಿಗಳು: ರಾಜ್ಯದ 63 ಕಡೆ ದಾಳಿ

ಕೃಷ್ಣಪ್ಪ ಅವರು ಪ್ರಶಾಂತ್ ಹೋಟೆಲ್ ಮಾಲೀಕ ₹30 ಸಾವಿರ ಪರಿಹಾರ ನೀಡುವಂತೆ ಕೋರಿ ಮೇ ತಿಂಗಳಿನಲ್ಲಿ ಶಾಂತಿನಗರದಲ್ಲಿರುವ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಹೋಟೆಲ್​ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದರು.

ಹೋಟೆಲ್​ ಮಾಲೀಕ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ವಕೀಲ ಆಗಿರುವ ಕೃಷ್ಣಪ್ಪ ತಾವೇ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

“ಹೋಟೆಲ್ ಮಾಲೀಕ ಗ್ರಾಹಕನಿಂದ ಬಿರಿಯಾನಿಗೆ ಪೂರ್ತಿ ಹಣ ಪಡೆದು ತಪ್ಪಾದ ಪಾರ್ಸೆಲ್ ನೀಡಿದೆ. ಇದು ತಿಳಿದೋ ತಿಳಿಯದೇಯೋ ಆಗಿರುವ ತಪ್ಪಾಗಿದೆ. ಈ ಬಗ್ಗೆ ಗ್ರಾಹಕ ಹೋಟೆಲ್ ಮಾಲೀಕರಿಗೆ ತಿಳಿಸಿದರೂ, ಕೂಡ ಬದಲಿ ಬಿರಿಯಾನಿ ಪಾರ್ಸೆಲ್ ನೀಡಿಲ್ಲ. ಗ್ರಾಹಕರಿಗೆ ಉತ್ತಮ ಸೇವೆ ನೀಡುವಲ್ಲಿ ಹೋಟೆಲ್‌ ಮಾಲೀಕ ವಿಫಲವಾಗಿದ್ದಾರೆ. ಹಾಗಾಗಿ, ತಪ್ಪಿಗೆ ₹1000 ಪರಿಹಾರ ಜತೆಗೆ ಬಿರಿಯಾನಿಗೆ ಪಾವತಿಸಿದ ₹150 ಹಣವನ್ನು ನೀಡಬೇಕು” ಎಂದು ಗ್ರಾಹಕ ನ್ಯಾಯಾಲಯ ನ್ಯಾಯಾಧೀಶರು 2023ರ ಅ.5 ರಂದು ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...