ಟೊಮ್ಯಾಟೋ ದರದಲ್ಲಿ ದಿಢೀರ್ ಕುಸಿತ ; ಕೆಜಿಗೆ ₹30-40

Date:

ಕಳೆದ ಎರಡು ತಿಂಗಳಿನಿಂದ ₹200ರ ಗಡಿಯಲ್ಲಿದ್ದ ಟೊಮ್ಯಾಟೋ ದರ ಇದೀಗ ಏಕಾಏಕಿ ಕುಸಿತ ಕಂಡಿದ್ದು, ಪ್ರತಿ ಕೆಜಿಗೆ ₹30-40 ಆಗಿದೆ. ಇದರಿಂದ ಗ್ರಾಹಕರ ಮೊಗದಲ್ಲಿ ಸಂತಸ ಮೂಡಿದೆ. ಆದರೆ, ಟೊಮ್ಯಾಟೋ ಬೆಳೆಗಾರರಿಗೆ ತೀವ್ರ ನಿರಾಸೆ ಉಂಟಾಗಿದೆ.

ಸತತ ಒಂದು ವಾರದಿಂದ ಟೊಮ್ಯಾಟೋ ದರ ಕುಸಿತ ಕಾಣುತ್ತಿದೆ. ಕಳೆದ ಒಂದರೆಡು ದಿನದಲ್ಲಿ ಭಾರೀ ಕುಸಿತ ಕಂಡಿದೆ. ವಾರದ ಹಿಂದೆ ₹1700, ₹2000 ಅಸುಪಾಸಿನಲ್ಲಿದ್ದ 15 ಕೆ.ಜಿ. ಟೊಮ್ಯಾಟೋ ದರ ಇದೀಗ ₹700ಕ್ಕೆ ಕುಸಿತ ಕಂಡಿದೆ. ಟೊಮ್ಯಾಟೋ ದರ ಇನ್ನಷ್ಟು ಕುಸಿಯುವ ಆತಂಕ ಬೆಳೆಗಾರರಲ್ಲಿದೆ.

ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮ್ಯಾಟೋ ದರ ಭಾರಿ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ ₹2,000 – ₹2,500 ಕಂಡಿದ್ದ ಟೊಮ್ಯಾಟೋ ಬೆಲೆ ಈಗ ₹450 ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ ₹150 ರಿಂದ ₹169 ಇತ್ತು. ಒಂದು ಕ್ರೇಟ್‌ಗೆ ₹2,000 ಇತ್ತು. ಈಗ ಒಂದು ಕ್ರೇಟ್‌ಗೆ ₹1,500 ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಗ್ನಿ ಅವಘಡ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಜೂನ್‌ ಅಂತ್ಯ, ಜುಲೈ ತಿಂಗಳ ಆರಂಭದಲ್ಲಿ ಟೊಮ್ಯಾಟೋ ಬೆಲೆ ಗಗನಕ್ಕೇರಿತ್ತು. ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಟೊಮ್ಯಾಟೋ ಬೆಳೆದ ರೈತರಿಗೆ ಹೆಚ್ಚಿನ ಲಾಭ ಬಂದಿತ್ತು. ಇದರಿಂದ ಟೊಮ್ಯಾಟೋ ಬೆಳೆದ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿತ್ತು.

ಅಕಾಲಿಕ ಮಳೆ ಕಾರಣ ಹೆಚ್ಚಿನ ಟೊಮ್ಯಾಟೋ ನಾಶವಾಗಿತ್ತು. ಹಾಗಾಗಿ, ಈ ಬಾರಿ ಟೊಮ್ಯಾಟೋ ಇಳುವರಿ ಕಡಿಮೆಯಾಗಿದೆ. ಈ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮ್ಯಾಟೋ ಸರಬರಾಜು ಆಗಿರಲಿಲ್ಲ. ಈ ಹಿನ್ನೆಲೆ ದರ ಹೆಚ್ಚಳವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...