ಮತದಾನ ಮಾಡಲು ಆಮಿಷ ಬಂದರೆ ‘ಸಿ-ವಿಜಿಲ್’ ತಂತ್ರಾಂಶದಲ್ಲಿ ದೂರು ದಾಖಲಿಸಿ: ತುಷಾರ್ ಗಿರಿನಾಥ್

Date:

  • ಕಳೆದ ಬಾರಿ ಶೇ.55 ರಷ್ಟು ಮತದಾನವಾಗಿತ್ತು
  • ಬೆಂಗಳೂರಿನಲ್ಲಿ 97 ಲಕ್ಷ ಮತದಾರರಿದ್ದಾರೆ

“ಮತ ಚಲಾಯಿಸುವ ಹಕ್ಕನ್ನು ಹೊಂದಿರುವವರು ಮತದಾನ ಮಾಡದಿರುವುದು ಘಾತಕದ ಸಂಗತಿ. ಆಮಿಷಕ್ಕೊಳಗಾಗಿ ಮತ ನೀಡುವುದು ಮತದಾನ ಮಾಡದಿರುವುದಕ್ಕಿಂತಲೂ ದೊಡ್ದ ಘಾತಕದ ಸಂಗತಿ. ಮತದಾನ ಮಾಡಲು ಏನಾದರೂ ಆಮಿಷಗಳು ಬಂದಲ್ಲಿ ಸಿ-ವಿಜಿಲ್ ತಂತ್ರಾಂಶದಲ್ಲಿ ದೂರು ದಾಖಲಿಸಿ, ಭ್ರಷ್ಠ ಚಟುವಟಿಕೆಗಳನ್ನು ನಿಲ್ಲಿಸಿ” ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

ಬೆಂಗಳೂರು ಪ್ರೆಸ್‌ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಅವರು ಮಾತನಾಡಿದರು, “ನಗರದಲ್ಲಿ ಎಲ್ಲರಿಂದಲೂ ಮತದಾನ ಮಾಡಿಸಲು ಶ್ರಮವಹಿಸಿ ಕೆಲಸ ಮಾಡಲಾಗುತ್ತಿದೆ. ಕಳೆದ ಬಾರಿ ಶೇ.55 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.75ರಷ್ಟು ಮತದಾನವಾಗಲು ಪ್ರಯತ್ನಿಸುತ್ತಿದ್ದೇವೆ. ನಾವು ಎಷ್ಟೇ ಪ್ರಯತ್ನಿಸಿದರೂ ಕೂಡಾ ಎಲ್ಲವೂ ಮತದಾರರ ಕೈಯಲ್ಲಿದೆ. ಅವರು ಸ್ವಯಂಪ್ರೇರಿತರಾಗಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು” ಎಂದು ಹೇಳಿದರು.

“ಸಾಂಖ್ಯಿಕ ಇಲಾಖೆಯ ಪ್ರಕಾರ ನಗರದಲ್ಲಿ 1.65 ಕೋಟಿ ಜನಸಂಖ್ಯೆಯಿದ್ದು, ನಗರದಲ್ಲಿ 97 ಲಕ್ಷ ಮತದಾರರಿದ್ದಾರೆ. ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 8,000 ಬೂತ್ ಮಟ್ಟದ ಅಧಿಕಾರಿಗಳುನ್ನು ನಿಯೋಜಿಸಿದ್ದ ಕಾರಣ ತಳಮಟ್ಟದಲ್ಲಿ ಸಮರ್ಪಕವಾಗಿ ಕೆಲಸ ಮಾಡಿದ ಕಾರಣ ಮತದಾರಪಟ್ಟಿಯಲ್ಲಿನ ಸಂಖ್ಯೆ ಹೆಚ್ಚಾಗಿದೆ. ಎಲ್ಲ ಅಧಿಕಾರಿಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಹೊಸದಾಗಿ ಸೇರ್ಪಡೆಯಾದಂತಹ ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಣೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇ 1ರಿಂದ ಆಸ್ತಿ ತೆರಿಗೆ ಪಾವತಿಸುವವರಿಗೆ 5% ರಿಯಾಯಿತಿಯಿಲ್ಲ!

ಏಪ್ರಿಲ್ 28 ರಿಂದ ಮತದಾನ ಚೀಟಿ ಹಾಗೂ ಮಾರ್ಗಸೂಚಿ ವಿತರಣೆ

“ಮತದಾರರ ಪಟ್ಟಿಯಲ್ಲಿರುವ ಎಲ್ಲರಿಗೂ ಏಪ್ರಿಲ್ 28 ರಿಂದ ಮತದಾರರ ಚೀಟಿ, ಮತದಾನದ ಮಾರ್ಗಸೂಚಿಯನ್ನು ನೀಡುತ್ತಿರುವುದರ ಜೊತೆಗೆ ಮತಗಟ್ಟೆಯ ವಿವರವನ್ನು ಕೂಡಾ ನೀಡಲಾಗುತ್ತಿದೆ. ಮತದಾನದ ದಿನಕ್ಕಿಂದ 6 ದಿನದ ಮುಂಚಿತವಾಗಿಯೇ ಎಲ್ಲರಿಗೂ ಮತದಾರರ ಚೀಟಿ ತಲುಪಿಸಲಾಗುವುದು. ಬಾರ್ ಕೋಡ್ ಸ್ಕ್ಯಾನ್ ಮಾಡಿಯೂ ಮಾಹಿತಿ ಪಡೆಯಬಹುದು. ಜೊತೆಗೆ ವಿ.ಹೆಚ್.ಎ ತಂತ್ರಾಶದಲ್ಲಿಯೂ ಮತದಾನ ಗುರುತಿನ ಚೀಟಿಯ ಸಂಖ್ಯೆ ಹಾಕಿ ಮಾಹಿತಿ ಪಡೆದುಕೊಳ್ಳಬಹುದು” ಎಂದರು.

ಮತಗಟ್ಟೆಯ ಬಳಿ ಸ್ವಚ್ಛತಾ ಆಂದೋಲನ

“ನಗರದಲ್ಲಿ ಸುಮಾರು 3,600 ಸ್ಥಳಗಳಲ್ಲಿ 8,802 ಮತಗಟ್ಟೆಗಳಿದ್ದು, ಎಲ್ಲ ಮತಗಟ್ಟೆಗಳ ಬಳಿಯೂ ಸ್ವಚ್ಛತಾ ಆಂದೋಲನೆ ನಡೆಸಲಾಗುವುದು. ಮತಗಟ್ಟೆಗಳ ಬಳಿಯಿರುವ ರಾಜಕಾಲುವೆಗಳಲ್ಲಿ ಹೂಳೆತ್ತುವ ಕೆಲಸ ಮಾಡಲಾಗುವುದು. ಎಲ್ಲ ಮತಗಟ್ಟೆ ಕನಿಷ್ಠ ಸೌಲಭ್ಯಗಳ ವ್ಯವಸ್ಥೆ ಮಾಡಲಾಗುವುದು. 1,500 ಮತಗಟ್ಟೆಗಳ ಬಳಿ ನೆರಳಿಗಾಗಿ ಪೆಂಡಾಲ್ ವ್ಯವಸ್ಥೆ ಮಾಡಲಾಗುವುದು. ಮತಗಟ್ಟೆಗಳಿಗೆ ರಸ್ತೆ ಸರಿಯಾಗಿಲ್ಲದಿದ್ದರೆ ಅದನ್ನು ಸರಿಪಡಿಸಲಾಗುವುದು. ನಗರದಲ್ಲಿ ಪಿಂಕ್ ಬೂತ್, ವಿಕಲ ಚೇತನರ ಬೂತ್, ಪರಿಸರ ಬೂತ್, ಡಿಜಿಟಲ್ ಬೂತ್, ಯುವ ಸಮೂಹ ಬೂತ್ ಸೇರಿದಂತೆ ಸುಮಾರು 300 ಥೀಮ್ ಆಧಾರಿತ ಮತಗಟ್ಟೆಗಳನ್ನು ಮಾಡಲಾಗುತ್ತಿದೆ” ಎಂದು ಹೇಳಿದರು.

“ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಸಂಬಂಧ 8,802 ಮತಗಟ್ಟೆಗಳಿಗೆ ಸುಮಾರು 36 ಸಾವಿರ ಸಿಬ್ಬಂದಿ, ಸೆಕ್ಟರ್ ಮೆಜಿಸ್ಟ್ರೇಟ್, ಮೈಕ್ರೋ ಅಬ್ಸರ್‌ವರ್ಸ್ ಸೇರಿದಂತೆ ಬೇರೆ ಬೇರೆ ಕೆಲಸ ಕಾರ್ಯಗಳಿಗಾಗಿ ಒಟ್ಟಾರೆ 42,000 ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅತಿ ಸೂಕ್ಷ್ಮ, ಸೂಕ್ಷ್ಮ ಹಾಗೂ ಸಾಮಾನ್ಯ ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪ್ಯಾರಾ ಮಿಲಿಟರಿ, ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದರು.

“ನಗರದಲ್ಲಿ ಕಾನೂನು ವ್ಯವಸ್ಥೆಯ ಮೂಲಕ ಚುನಾವಣೆ ನಡೆಯಲಿದ್ದು, ಸೌಹಾರ್ದತೆಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಚುನಾವಣೆ ನಡೆಯಲಿದೆ. ನಾಗರಿಕರಿಗೆ ಭಯಪಡಿಸಿ ಮತಪಡೆಯಲು ಸಾಧ್ಯವಿಲ್ಲ. ನಾವು ಆ ರೀತಿಯಾಗಲು ಅವಕಾಶ ನೀಡುವುದಿಲ್ಲ. ಅಹಿತಕರ ಘಟನೆ ಸೃಷ್ಟಿಸುವಂತವರ ಮೇಲೆ ಪೊಲೀಸ್ ಸಿಬ್ಬಂದಿಯು ನಿಗಾವಹಿಸಿದ್ದಾರೆ” ಎಂದು ಹೇಳಿದರು.

ಸಿ-ವಿಜಿಲ್ ಮೂಲಕ ದೂರು ದಾಖಲಿಸಿ

“ನಗರದಲ್ಲಿ 250ಕ್ಕೂ ಹೆಚ್ಚು ಫ್ಲೆಯಿಂಗ್ ಸ್ಕ್ವಾಡ್ಸ್‌, 230 ವೀಡಿಯೋ ಟೀಮ್, 35 ವೀಡಿಯೋ ವೀವಿಂಗ್ ಟೀಮ್, ಎಲ್ಲದರ ಮೇಲೂ ಹೆಚ್ಚು ನಿಗಾವಹಿಸಲಾಗುವುದು. ಮುಂದಿನ ವಾರ ಮತದಾನ ನಡೆಯಲಿದೆ” ಎಂದರು.

ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿಯಾದ ಬಿ.ಪಿ.ಮಲ್ಲಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...