ಕಾರ್ಮಿಕರು ಕೆಲಸದ ಸ್ಥಳದಲ್ಲಿ ಕಿರುಕುಳ ಅನುಭವಿಸುತ್ತಿದ್ದರೆ, ಈ ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

Date:

ಕೆಲಸದ ಸ್ಥಳದಲ್ಲಿ ಕಾರ್ಮಿಕರ ಮೇಲೆ ನಡೆಯುವ ಹಿಂಸೆಗಳಿಗೆ ನೆರವು ನೀಡುವ ಉದ್ದೇಶದಿಂದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹೆಲ್ಪ್‌ಲೈನ್ ಆರಂಭಿಸಿದ್ದು, ಬೆಂಗಳೂರಿನಲ್ಲಿ ಇಲ್ಲಿಯವರೆಗೆ ಸುಮಾರು 2,780 ದೂರುಗಳು ದಾಖಲಾಗಿದ್ದು, ಈ ಪೈಕಿ 1,160 ದೂರುಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಸಂಘಟನೆ ಹೇಳಿದೆ.

“ಇಂಡಿಯಾ ಲೇಬರ್ ಲೈನ್ ವಲಸೆ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಕೂಲಿ ವಂಚನೆ, ಪಿ.ಎಫ್. ಗ್ರಾಚ್ಯುಟಿ, ಕೆಲಸದ ಸ್ಥಳದಲ್ಲಿ ಕಾರ್ಮಿಕರ ಮೇಲೆ ನಡೆಯುವ ಹಿಂಸೆಗೆ ಸಂಬಂಧಿಸಿದಂತೆ ಮಧ್ಯಸ್ಥಿಕೆಯ ಮೂಲಕ ಕಾರ್ಮಿಕರಿಗೆ ನೆರವು ನೀಡುವ ಉದ್ದೇಶದಿಂದ ಈ ಹೆಲ್ಪ್‌ಲೈನ್ ಆರಂಭವಾಗಿದೆ. ಈ ಕೆಲಸವು ಜುಲೈ 2021 ರಿಂದ ಪ್ರಾರಂಭವಾಗಿದ್ದು, ಪ್ರಸ್ತುತ ಬೆಂಗಳೂರು, ಹುಬ್ಬಳಿ-ಧಾರವಾಡ, ಮುಂಬೈ, ದೆಹಲಿ ಸೇರಿದಂತೆ ದೇಶದ 16 ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ” ಎಂದು ಹೇಳಿದೆ.

“ಬೆಂಗಳೂರಿನಲ್ಲಿ ದಾಖಲಾದ ದೂರಗಳನ್ನು ಇತ್ಯರ್ಥಪಡಿಸಿ ಕಾರ್ಮಿಕರಿಗೆ 2.62 ಕೋಟಿ ಕೊಡಿಸಲಾಗಿದೆ. ಇದರಿಂದ ಸುಮಾರು 3,068 ವಲಸೆ ಕಾರ್ಮಿಕ ಕುಟುಂಬಗಳಿಗೆ ಅನುಕೂಲವಾಗಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಬೇರೆ ಬೇರೆ ರಾಜ್ಯಗಳಿಂದ ಹಾಗೂ ಕರ್ನಾಟಕದ ನಾನಾ ಜಿಲ್ಲೆಗಳಿಂದ ಜೀವನ ನಡೆಸಲು ಕೆಲಸಕ್ಕಾಗಿ ಲಕ್ಷಾಂತರ ಕಾರ್ಮಿಕರು ವಲಸೆ ಬರುತ್ತಾರೆ. ಇವರು ಅಸಂಘಟಿತ ವಲಯಗಳಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ, ಮನೆಗೆಲಸ, ಹೌಸ್‌ ಕೀಪಿಂಗ್, ಗಾರ್ಮೆಂಟ್, ಸಣ್ಣ-ಸಣ್ಣ ಕಾರ್ಖಾನೆಗಳು, ಸೆಕ್ಯೂರಿಟಿ ಗಾರ್ಡ್, ಸೇವಾ ವಲಯಗಳಾದ ನರ್ಸಿಂಗ್, ಹೋಮ್ ನರ್ಸಿಂಗ್, ಟ್ರಾನ್ಸ್‌ಪೋರ್ಟ್, ಗಿಗ್ ವರ್ಕರ್ಸ್‌ ಹೀಗೆ ಇನ್ನಿತರ ಅಸಂಘಟಿತ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಂಗಳವಾರ ಬೆಳ್ಳಂಬೆಳಿಗ್ಗೆ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಇಂತಹ ಕಾರ್ಮಿಕರು ಮಾಲೀಕರಿಂದ/ಗುತ್ತಿಗೆದಾರರ ಕಡೆಯಿಂದ ಕೂಲಿ ವಂಚನೆ, ಪಿ.ಎಫ್, ಅಪಘಾತ ಪರಿಹಾರ ಕೆಲಸದ ಸ್ಥಳದಲ್ಲಿ ಕಿರುಕುಳ ಅನುಭವಿಸುತ್ತಿದ್ದಲ್ಲಿ, ಅವರು ಇಂಡಿಯಾ ಲೇಬರ್ ಲೈನ್ ಉಚಿತ ಸಹಾಯವಾಣಿ ಸಂಖ್ಯೆ 1-800-833-9020 ಕರೆ ಮಾಡಿ ದೂರು ಸಲ್ಲಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...