ಕಾನೂನು ಬಾಹಿರವಾಗಿ ವೈದ್ಯಕೀಯ ಸೀಟು ಹಂಚಿಕೆ; ಕೆಇಎಗೆ 5 ಲಕ್ಷ ರೂ. ದಂಡ

Date:

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ರೇಡಿಯೋ ಡಯಾಗ್ನೋಸಿಸ್ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಅಕ್ರಮವಾಗಿ ಸೀಟು ಕಾಯ್ದಿರಿಸುವುದು ಮತ್ತು ಕಾನೂನು ಬಾಹಿರವಾಗಿ ಡಾ.ಸುನೀಲ್​ ಕುಮಾರ್​ ಎಂಬುವರಿಗೆ ಸೀಟು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ದಂಡ ವಿಧಿಸಲಾಗಿದೆ.

ಕೆಇಎ ಸೀಟು ಹಂಚಿಕೆಯಲ್ಲಿ ಅಕ್ರಮ ಎಸಗಿದೆ ಎಂದು ಆರೋಪಿಸಿ ಹಾಸನ ಜಿಲ್ಲೆಯ ಡಾ. ಸಿ.ಕೆ ರಜನಿ ಎಂಬವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಮತ್ತು ಟಿ.ಜಿ ಶಿವಶಂಕರೇಗೌಡ ಅವರಿದ್ದ ನ್ಯಾಯ ಪೀಠ ಅರ್ಜಿಯ ವಿಚಾರಣೆ ನಡೆಸಿದೆ. ಕೆಇಎ ಅಕ್ರಮ ಸಾಬೀತಾಗಿದ್ದು, ಕೆಇಎಗೆ ದಂಡ ವಿಧಿಸಿದೆ.

2023ರ ಸೆಪ್ಟೆಂಬರ್ 19ರಂದು ಕೌನ್ಸಿಲಿಂಗ್‌ನಿಂದ ಹಿಂದೆ ಸರಿಯಲು ಸುನೀಲ್‌ ಕುಮಾರ್‌ಗೆ ಅನುಮತಿ ನೀಡಿದ್ದ ಕೆಇಎ 2023ರ ಅಕ್ಟೋಬರ್ 6ರವರೆಗೂ ಸೀಟು ಲಭ್ಯವಿದೆ ಎಂದು ಹೇಳಿಕೊಂಡಿತ್ತು. ಅದೇ ದಿನ ಸುನೀಲ್‌ ಕುಮಾರ್‌ಗೆ ಸೀಟು ಹಂಚಿಕೆಯನ್ನೂ ಮಾಡಿತ್ತು. ಇದು, ಸುನೀಲ್ ಅವರಿಗೆ ಅಕ್ರಮವಾಗಿ ಸೀಟು ಹಂಚಿಕೆ ಮಾಡಿರುವುದನ್ನು ಸೂಚಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೇಡಿಯೋ ಡಯಾಗ್ನೋಸಿಸ್​ನಲ್ಲಿ ಸೀಟು ಲಭ್ಯವಿಲ್ಲವೆಂದು ತೋರಿಸಿ, ಅರ್ಜಿದಾರರಿಗೆ ಇಷ್ಟವಿಲ್ಲದೇ ಇದ್ದರೂ, ಒತ್ತಾಯವಾಗಿ ಸ್ತ್ರೀರೋಗಶಾಸ್ತ್ರದಲ್ಲಿ ಸೀಟು ಆಯ್ಕೆ ಮಾಡಿಕೊಳ್ಳುವಂತೆ ಮಾಡಲಾಗಿದೆ” ಎಂಬುದನ್ನು ಪೀಠವು ಗಮನಿಸಿದೆ.

“ಅರ್ಜಿದಾರ ಡಾ. ಸಿ.ಕೆ ರಜನಿ ಅವರಿಗೆ ರೇಡಿಯೋ ಡಯಾಗ್ನೋಸಿಸ್ ಸೀಟನ್ನು ಮರು ಹಂಚಿಕೆ ಮಾಡಬೇಕು. ವೈದ್ಯಕೀಯ ಸ್ನಾತಕೋತ್ತರ ವಿಭಾಗದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರಕ್ಕೆ ಅರ್ಜಿದಾರರು ಪಾವತಿಸಿದ್ದ ಶುಲ್ಕವನ್ನು ಎಂ.ಆರ್ ವೈದ್ಯಕೀಯ ಕಾಲೇಜಿನ ರೇಡಿಯೋ ಡಯಾಗ್ನೋಸಿಸ್ ಸೀಟಿಗೆ ಸರಿಹೊಂದಿಸಬೇಕು. ಅಲ್ಲದೆ, ದಂಡದ ಮೊತ್ತದಲ್ಲಿ 2.5 ಲಕ್ಷ ರೂಪಾಯಿಯನ್ನು ರಜನಿ ಅವರಿಗೆ ನೀಡಬೇಕು. ಉಳಿದ ಹಣವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಹೆಸರಿನಲ್ಲಿ ಠೇವಣಿ ಇಡಬೇಕು” ಎಂದು ಕೋರ್ಟ್‌ ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...