ನಕಲಿ ಆಧಾರ್, ನಕಲಿ ಮತದಾರರ ಗುರುತಿನ ಚೀಟಿಯನ್ನು ಹೊಂದಿರುವ ಪಶ್ಚಿಮ ಬಂಗಾಳದ ವಲಸಿಗರು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಅಕ್ರವಾಗಿ ವಾಸಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, “ಹೆಬ್ಬಾಳದ ಅಮಾನಿಕೆರೆ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ವೇಳೆ, ಅಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಪಶ್ಚಿಮ ಬಂಗಾಳದ ವಿಳಾಸವಿರುವ ಅವರ ಆಧಾರ್ ಕಾರ್ಡ್ಗಳು ನಕಲಿಯಾಗಿವೆ” ಎಂದಿದ್ದಾರೆ.
“ಅಲ್ಲದೇ, ನಿಯಮಬಾಹಿರವಾಗಿ ಪ್ಲಾಸ್ಟಿಕ್, ತ್ಯಾಜ್ಯಗಳನ್ನು ಇಲ್ಲಿ ಶೇಖರಿಸಿ ಅದನ್ನು ಸುಡುವ ಕೆಲಸವನ್ನೂ ಮಾಡುತ್ತಿದ್ದಾರೆ. ಈ ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಡಂಪಿಂಗ್ ಮಾಡುತ್ತಿರುವ ಬಗ್ಗೆ ಬಿಬಿಎಂಪಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಪೊಲೀಸರು ಯಾಕೆ ಈ ಬಗ್ಗೆ ವಿಚಾರಣೆ ನಡೆಸುತ್ತಿಲ್ಲ? ರಾಜ್ಯ ಸರ್ಕಾರದ ಈ ನಡೆ ಅನುಮಾನ ಹುಟ್ಟಿಸುವಂತಿದೆ” ಎಂದು ಆರೋಪಿಸಿದ್ದಾರೆ.
“ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರವೇ ಈ ಅಕ್ರಮ ವಲಸಿಗರ ಬಗ್ಗೆ ಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.
ಹೆಬ್ಬಾಳದ ಅಮಾನಿಕೆರೆ ಗ್ರಾಮಕ್ಕೆ ಇಂದು ಭೇಟಿ ನೀಡಿದ ವೇಳೆ, ಅಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿರುವುದು ನನ್ನ ಗಮನಕ್ಕೆ ಬಂತು. ಪಶ್ಚಿಮ ಬಂಗಾಳದ ವಿಳಾಸವಿರುವ ಅವರ ಆಧಾರ್ ಕಾರ್ಡ್ಗಳು ನಕಲಿಯಾಗಿವೆ. ನಕಲಿ ಆಧಾರ್, ನಕಲಿ ಮತದಾರರ ಗುರುತಿನ ಚೀಟಿಯನ್ನು ಹೊಂದಿರುವ ಈ ಅಕ್ರಮ ವಲಸಿಗರು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ.… pic.twitter.com/T4g4R6OUwO
— Shobha Karandlaje (@ShobhaBJP) July 19, 2025





