ಬೆಂಗಳೂರು | ಐಎಂಎ ಬಹುಕೋಟಿ ಹಗರಣ: ಅಂತೂ ಸಂತ್ರಸ್ತ ಗ್ರಾಹಕರ ಕೈಸೇರಿದ ಹಣ

Date:

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಐಎಂಎ ಬಹುಕೋಟಿ ಹಗರಣ ಪ್ರಕರಣದಲ್ಲಿ ಹಣ ಕಳೆದುಕೊಂಡಿದ್ದ ಸಂತ್ರಸ್ತ ಗ್ರಾಹಕರಿಗೆ ಅಂತೂ ಹಣ ಕೈಸೇರಿದೆ. ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ಒಡೆತನದ ಆಸ್ತಿಗಳನ್ನು 2023ರ ಫೆಬ್ರವರಿಯಲ್ಲಿ ‘ಕಾಂಪಿಟೆಂಟ್ ಅಥಾರಿಟಿ’ ಇ-ಹರಾಜು ಪ್ರಕ್ರಿಯೆ ನಡೆಸಿತ್ತು. ಅದರಿಂದ ಬಂದ ಹಣವನ್ನು ಸಂತ್ರಸ್ತ ಗ್ರಾಹಕರ ಖಾತೆಗೆ ಹಂತ-ಹಂತವಾಗಿ ಜಮೆ ಮಾಡುತ್ತಿದೆ.

ಮನ್ಸೂರ್ ಅಲಿಖಾನ್ ಒಡೆತನದ ಐಎಂಎ ಜುವೆಲ್ಲರಿಯಲ್ಲಿದ್ದ ವಜ್ರ, ಚಿನ್ನ, ಬೆಳ್ಳಿಯನ್ನು ಜಪ್ತಿ ಮಾಡಿದ್ದ ಸರ್ಕಾರವು ಕಾಂಪಿಟೆಂಟ್ ಅಥಾರಿಟಿ ಮೂಲಕ ಇ-ಹರಾಜು ಮಾಡಿತ್ತು. ಅದರಿಂದ ಬಂದ ಒಟ್ಟು 68 ಕೋಟಿ ರೂ. ಹಣವನ್ನು ಸಂತ್ರಸ್ತ ಗ್ರಾಹಕರಿಗೆ ಹಂಚಿಕೆ ಮಾಡುತ್ತಿದೆ.

ಮರಳಿ ಹಣ ಪಡೆದ ಸಂತ್ರಸ್ತ ಗ್ರಾಹಕರ ಮೊಗದಲ್ಲಿ ಸಂತೋಷ ಕಾಣಿಸುತ್ತಿದೆ. “ನಮ್ಮ ಹಣವನ್ನು ಮರಳಿ ನೀಡುತ್ತಿರುವ ಸರ್ಕಾರಕ್ಕೆ ಧನ್ಯವಾದಗಳು. ಉಳಿದ ಹಣವನ್ನೂ ತ್ವರಿತವಾಗಿ ನೀಡಲಿ” ಎಂದು ಗ್ರಾಹಕರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಐಎಂಎ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ಜನರಲ್ಲಿ ಆಸೆ ತೋರಿಸಿ, ಹಲವರನ್ನು ಹೂಡಿಕೆಗೆ ಪ್ರೇರೇಪಿಸಲಾಗಿತ್ತು. ಹಲವರು ಅದನ್ನು ನಂಬಿ ಹೂಡಿಕೆ ಮಾಡಿದ್ದರು. ಬರೋಬ್ಬರಿ ಒಟ್ಟು 4,000 ಕೋಟಿ ರೂ. ಹಣವನ್ನು ಹೂಡಿಕೆ ಮೂಲಕ ಸಂಗ್ರಹಿಸಿದ್ದ ಐಎಂಎ ಕಂಪನಿ, ಗ್ರಾಹಕರಿಗೆ ವಂಚಿಸಿತ್ತು.

ವಂಚನೆ ಬೆಳಕಿಗೆ ಬಂದ ಬಳಿಕ ಗ್ರಾಹಕರು ಬೆಂಗಳೂರಿನ ಐಎಂಎ ಕಂಪನಿ ಎದುರು ಪ್ರತಿಭಟನೆಗಳನ್ನು ನಡೆಸಿದ್ದರು. ಆರೋಪಿ ಮನ್ಸೂರ್ ಅಲಿಖಾನ್ ಅವರನ್ನು ಪೊಲೀಸರು ಬಂಧಿಸಿದ್ದರು.

ವಂಚನೆಯ 4,000 ಕೋಟಿ ರೂ. ಹಣದಲ್ಲಿ ಸದ್ಯ ಆಭರಣಗಳ ಹರಾಜಿನಿಂದ 68 ಕೋಟಿ ರೂ. ಸಂಗ್ರಹಿಸಲಾಗಿದ್ದು, ಗ್ರಾಹಕರಿಗೆ ಸ್ವಲ್ವ ಪ್ರಮಾಣದ ಹಣವನ್ನು ವಿತರಣೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...