ಬೆಂಗಳೂರು | ತಾಯಿಗಾಗಿ 100 ಅಡಿ ವಿಸ್ತೀರ್ಣದ ಮನೆಯನ್ನೇ ಬೇರೆಡೆ ಸ್ಥಳಾಂತರಿಸಲು ಮುಂದಾದ ಮಕ್ಕಳು

Date:

ತಾಯಿಯ ಆಸೆಯನ್ನು ನೆರವೇರಿಸಲು ಮಕ್ಕಳು ನೂರು ಅಡಿ ವಿಸ್ತೀರ್ಣದ ಮನೆಯನ್ನು ಶಿಫ್ಟ್‌ ಮಾಡಲು ಮುಂದಾಗಿದ್ದಾರೆ. ಮಹಾದೇವಪುರ ವಿಧಾನಸಭಾ ಕ್ಷೇತ್ರದ ಬಿಇಎಂಎಲ್ ಲೇಔಟ್‌ನಲ್ಲಿರುವ ಮನೆಯನ್ನು ಹಿಂದಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಯತ್ತಿದೆ.

ಬಿಇಎಂಎಲ್ ಲೇಔಟ್ ನಲ್ಲಿರುವ ಯಲ್ಲಪ್ಪನವರ ಮನೆ ತುಂಬಾ ಜಲಾವೃತವಾಗುತ್ತಿತ್ತು. ಎರಡರಿಂದ ಮೂರು ಅಡಿಗಳಷ್ಟು ಕೊಳಚೆ ನೀರು ನಿಲ್ಲುತ್ತಿತ್ತು. ಅದಕ್ಕೆ ಮಕ್ಕಳು ಮನೆಯನ್ನು ಕೆಡವಿ ಹೊಸ ಮನೆಯನ್ನು ನಿರ್ಮಿಸಲು ಯೋಜಿಸಿದ್ದರು. ಆದರೆ ತಾಯಿ ಯಲ್ಲಮ್ಮ, ತಾಯಿ ಯಲ್ಲಮ್ಮ ತಾನು ಕಷ್ಟಪಟ್ಟು ಕಟ್ಟಿಸಿದ ಮನೆಯನ್ನು ಕೆಡವಬಾರದು ಎಂದು ಮಕ್ಕಳಿಗೆ ತಿಳಿ ಹೇಳಿದ ಕಾರಣ ನೀರಿನಲ್ಲಿ ಮುಳುಗುವ ಮನೆಯನ್ನು ಕೆಡುವುದರ ಬದಲಾಗಿ ಶಿಫ್ಟ್​ ಮಾಡಲು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚೀನಾಕ್ಕೆ ತಲೆನೋವಾಗಿರುವ ಜನಸಂಖ್ಯೆ- ಭಾರತ ಕಲಿಯಬೇಕಿರುವ ಪಾಠಗಳು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆ ಶಿಫ್ಟ್ ಮಾಡಲು ಬಿಹಾರ ಮೂಲದ ಶ್ರೀರಾಮ್ ಹೌಸ್ ಲಿಫ್ಟಿಂಗ್ ಅಂಡ್ ಶಿಫ್ಟಿಂಗ್ ಕಂಪನಿಯನ್ನು ಸಂಪರ್ಕಿಸಲಾಗಿದೆ. ಮನೆಯನ್ನು ಶಿಫ್ಟ್ ಮಾಡಲು 200 ಕಬ್ಬಿಣದ ಜಾಕ್ ಮತ್ತು 100 ಕಬ್ಬಿಣದ ರೋಲರ್‌ಗಳ ಬಳಕೆ ಮಾಡಲಾಗಿದೆ. ಶಿಫ್ಟ್‌ ಮಾಡುತ್ತಿರುವ ಮನೆ ನಿರ್ಮಿಸಲು 13 ಲಕ್ಷ ರುಪಾಯಿ ವೆಚ್ಚವಾಗಿತ್ತು. ಈಗ ಈ ಮನೆಯನ್ನು ನಿರ್ಮಾಣ ಮಾಡಲು ಅಂದಾಜು 70 ಲಕ್ಷ ರುಪಾಯಿ ಬೇಕಾಗುತ್ತದೆ. ಸದ್ಯ ಮನೆಯನ್ನು 15 ಅಡಿ ಹಿಂದಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ನಂತರ 30 ದಿನಗಳಲ್ಲಿ 85 ಅಡಿ ಹಿಂದಕ್ಕೆ ಮನೆಯನ್ನು ಶಿಫ್ಟ್ ಮಾಡಲಾಗುತ್ತದೆ. ಮನೆಯನ್ನು ಶಿಫ್ಟ್ ಮಾಡಲು ಶ್ರೀರಾಮ್ ಕಂಪನಿಗೆ ಹತ್ತು ಲಕ್ಷ ಗುತ್ತಿಗೆ ನೀಡಲಾಗಿದೆ.

ಶ್ರೀರಾಮ್ ಕಂಪನಿ ಈಗಾಗಲೇ ಬೇರೆ ಬೇರೆ ನಗರಗಳಲ್ಲಿ ಮನೆಗಳನ್ನು ಸ್ಥಳಾಂತರಿಸಿದ್ದು ಸಾಕಷ್ಟು ಪರಿಣಿತಿಹೊಂದಿದೆ. ಈ ಕಂಪನಿ ಇದೇ ಮೊದಲ ಬಾರಿಗೆ ಬೆಂಗಳೂರಲ್ಲಿ ಎರಡು ಅಂತಸ್ತಿನ ಮನೆಯನ್ನು ಲಿಫ್ಟ್ ಮಾಡಲು ಮುಂದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...