ಇಎಸ್‌ಐ ಯೋಜನೆಗೆ ಕಾರ್ಮಿಕರ ವೇತನ ಮಿತಿ ₹21 ಸಾವಿರದಿಂದ ₹50 ಸಾವಿರಕ್ಕೆ ಏರಿಕೆ ಮಾಡಿ; ಕಾರ್ಮಿಕರ ಪ್ರತಿಭಟನೆ

Date:

ಕೇಂದ್ರ ಸರ್ಕಾರವು ಕಾರ್ಮಿಕರ ರಾಜ್ಯ ವಿಮಾ ಯೋಜನೆ(ಇಎಸ್ಐ)ಯನ್ನು ನಾಶ ಮಾಡಿ ಖಾಸಗಿ ಆರೋಗ್ಯ ವಿಮಾ ಕಂಪನಿಗಳನ್ನು ಬೆಳೆಸುವ ಹುನ್ನಾರ ನಡೆಸುತ್ತಿದೆ. ಕೇಂದ್ರದ ಕಾರ್ಮಿಕ ವಿರೋಧಿ ಧೋರಣೆಯನ್ನು ಖಂಡಿಸಿ ಹಾಗೂ ಇಎಸ್ಐ ಯೋಜನೆ ಪ್ರಯೋಜನ ಪಡೆಯಲು ಇರುವ ಕಾರ್ಮಿಕರ ವೇತನ ಮಿತಿಯನ್ನು ₹21,000 ನಿಂದ ₹50,000 ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

“ಕಾರ್ಮಿಕರು, ಇಎಸ್‌ಐ ಯೋಜನೆಗೆ ಒಳಪಡಲು ಹಾಲಿ ಇರುವ ವೇತನ ಮಿತಿ ₹21,000 ಮಾತ್ರ ಇದೆ. ಇಎಸ್‌ಐ ಯೋಜನೆಗೆ ಒಳಪಡದ ಕಾರ್ಮಿಕರು ಬಹುತೇಕ ಖಾಸಗಿ ಆರೋಗ್ಯ ವಿಮಾ ಕಂಪನಿಗಳ ಮೆಡಿಕ್ಲೈಮ್ ಪಾಲಿಸಿ ಸೌಲಭ್ಯ ಹೊಂದಿರುತ್ತಾರೆ. ಆದರೆ, ಈ ಸೌಲಭ್ಯ ಕಾರ್ಮಿಕರು 24 ಗಂಟೆಗಳ ಕಾಲ ಒಳರೋಗಿಯಾಗಿ ಚಿಕಿತ್ಸೆ ಪಡೆದರೆ ಮಾತ್ರ ಲಭ್ಯವಿದೆ” ಎಂದು ಕರ್ನಾಟಕ ವರ್ಕರ್ಸ್‌ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಕೆ.ಎನ್‌ ರಾಜನ್ ಹೇಳಿದ್ದಾರೆ.

“ಕಾರ್ಮಿಕರ ಪೋಷಕರಿಗೆ ಖಾಸಗಿ ಮೆಡಿಕ್ಲೈಮ್ ಅಡಿಯಲ್ಲಿ ಚಿಕಿತ್ಸಾ ಸೌಲಭ್ಯವಿಲ್ಲ. ಎಲ್ಲ ರೀತಿಯ ಕಾಯಿಲೆಗಳಿಗೆ ಚಿಕಿತ್ಸೆ ದೊರೆಯುವುದಿಲ್ಲ. ಖಾಸಗಿ ವಿಮಾ ಕಂಪನಿಗಳು ಹಾಗೂ ಖಾಸಗಿ ಆಸ್ಪತ್ರೆಗಳು ಶಾಮೀಲಾಗಿ ಮೆಡಿಕ್ಲೈಮ್ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯುತ್ತಿವೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚೈತ್ರಾ ಪ್ರಕರಣ | ಸಮಗ್ರ ತನಿಖೆ ನಡೆಸಿ, ಕಾಣದ ಕೈ ಪತ್ತೆ ಹಚ್ಚಲು ಜನಪರ ಸಂಘಟನೆಗಳ ಆಗ್ರಹ

“ಕೇಂದ್ರ ಸರ್ಕಾರ ಸಹ ಖಾಸಗಿ ವಿಮಾ ಕಂಪನಿಗಳ ಜೊತೆ ಶಾಮೀಲಾಗಿದೆ. ಆರೋಗ್ಯ ಚಿಕಿತ್ಸೆ ಖರ್ಚುಗಳು, ವಿಪರೀತವಾಗಿರುವ ಇಂದಿನ ದಿನಗಳಲ್ಲಿ ಎಲ್ಲ ಕಾರ್ಮಿಕರು ಇಎಸ್‌ಐ ಯೋಜನೆಗೆ ಒಳಪಡುವುದು ಅತ್ಯಂತ ಅವಶ್ಯವಾಗಿದೆ. ಹಾಗಾಗಿ, ಇಎಸ್‌ಐ ಯೋಜನೆಗೆ ಒಳಪಡಲು ಕಾರ್ಮಿಕರ ವೇತನ ಮಿತಿಯನ್ನು ₹21,000 ರಿಂದ ₹50,000 ಕ್ಕೆ ಏರಿಸಲು ಕೇಂದ್ರ ಸರ್ಕಾರ ಕ್ರಮವಹಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಸೆ.21 ರಂದು ಇಎಸ್‌ಐ ಪ್ರಾದೇಶಿಕ ಕಛೇರಿ ಮುಂದೆ ಶಾಂತಿಯುತ ಧರಣಿ ನಡೆಸಿ, ಇಎಸ್‌ಐ ಪ್ರಾದೇಶಿಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಅವರು ಈ ಮನವಿಯನ್ನು ಕೆಂದ್ರ ಸರ್ಕಾರಕ್ಕೆ ತಲುಪಿಸಲಾಗುವುದು ಎಂದು ತಿಳಿಸಿದ್ದಾರೆ” ಎಂದು ಈ ದಿನ.ಕಾಮ್‌ಗೆ ಕಾರ್ಮಿಕರೊಬ್ಬರು ತಿಳಿಸಿದರು.

ಪ್ರತಿಭಟನೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...