ಇಂದಿರಾ ಕ್ಯಾಂಟೀನ್ | ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿ ಅಧಿಕಾರಿ ನೇಮಕ

Date:

  • 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ಯಾಂಟೀನ್‌ಗೆ ₹100 ಕೋಟಿ ಬಿಡುಗಡೆ
  • ಜನರಿಗೆ ಸೇವೆ ನೀಡಲು 1533 ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಿದ ಬಿಬಿಎಂಪಿ

ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಇಂದಿರಾ ಕ್ಯಾಂಟೀನ್ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ₹100 ಕೋಟಿ ಬಿಡುಗಡೆ ಮಾಡಿದೆ. ಕ್ಯಾಂಟೀನ್‌ನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹಾಗಾಗಿ, ಉಂಟಾಗಿರುವ ಅವ್ಯವಸ್ಥೆ ಸರಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿ ನೇಮಕ ಮಾಡಲು ಮುಂದಾಗಿದೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತಿಚೆಗೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ವೇಳೆ ಊಟ ಮತ್ತು ತಿಂಡಿಗೆ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ತಿಳಿದುಬಂದಿದೆ. ಹಾಗಾಗಿ, ಬಿಬಿಎಂಪಿ ನಗರದಲ್ಲಿರುವ ಪ್ರತಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪಾಲಿಕೆಯ ಅಧಿಕಾರಿ ನೇಮಕ ಮಾಡಲು ತಿರ್ಮಾನಿಸಿದೆ.

ಇಂದಿರಾ ಕ್ಯಾಂಟೀನ್‌ನಲ್ಲಿ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಸೇರಿದಂತೆ ಸ್ವಚ್ಛತೆಯ ಬಗ್ಗೆ ನಿಗಾ ವಹಿಸಲು ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲನೆ ಮಾಡಲು ಬಿಬಿಎಂಪಿ ಅಧಿಕಾರಿ ನೇಮಕ ಮಾಡಲು ಮುಂದಾಗಿದೆ. ಜತೆಗೆ ಜನರಿಗೆ ಸೇವೆ ನೀಡಲು 1533 ಹೊಸ ಸಹಾಯವಾಣಿ ರೂಪಿಸಲಾಗಿದ್ದು, ಎಲ್ಲ ಇಂದಿರಾ ಕ್ಯಾಂಟೀನ್​ಗೂ ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಲಾಗಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬ್ಯಾಂಕುಗಳ ಹಣ ಬಂಡವಾಳಿಗರ ಸಾಲ ಮನ್ನಾಗೆ ಬಳಕೆಯಾಗಬಾರದು: ಸಿ.ಹೆಚ್ ವೆಂಕಟಾಚಲಂ

ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕ್ರಮ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ ಕಸ ಹಾಕುವವರ ಮೇಲೆ ನಿಗಾ ಇಡಲು ಪಾಲಿಕೆ ಮಾರ್ಷಲ್ಸ್‌ ಮತ್ತು ಅಧಿಕಾರಿಗಳ ತಂಡ ರಚನೆ ಮಾಡಿದೆ.ಈ ತಂಡ ರಸ್ತೆಬದಿ ಕಸ ಹಾಕುವವರು, ಬ್ಲಾಕ್ ಸ್ಪಾಟ್, ರಸ್ತೆ ಗುಂಡಿ ಮೇಲೂ ನಿಗಾ ವಹಿಸಲಿದೆ.

ಟೆಂಡರ್‌ ಕರೆಯಲು ಅನುಮತಿ ನೀಡಿದ ರಾಜ್ಯ ಸರ್ಕಾರ

ಇಂದಿರಾ ಕ್ಯಾಂಟೀನ್‌ಗಳ ಪುನರುಜ್ಜೀವನಕ್ಕಾಗಿ ಟೆಂಡರ್‌ ಕರೆಯಲು ರಾಜ್ಯ ಸರ್ಕಾರದಿಂದ ಬಿಬಿಎಂಪಿ ಅನುಮೋದನೆ ಪಡೆದುಕೊಂಡಿದೆ. ಉತ್ತಮ ಗುಣಮಟ್ಟದ ಸೇವೆ ನೀಡಲು ಪಾಲಿಕೆಯು ಯೋಜನೆ ರೂಪಿಸಿದ್ದು, ವಲಯಕ್ಕೆ ಒಂದರಂತೆ ಒಟ್ಟು ಎಂಟು ಪ್ಯಾಕೇಜ್‌ಗಳಾಗಿ ವಿಭಜಿಸಲು ಯೋಜಿಸಿದೆ.

“ಸಬ್ಸಿಡಿ ದರದಲ್ಲಿ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ಒದಗಿಸುವ 200 ಕ್ಯಾಂಟೀನ್‌ಗಳನ್ನು ನಡೆಸಲು ಬಿಬಿಎಂಪಿಗೆ ದಿನಕ್ಕೆ ₹31 ಲಕ್ಷ ಬೇಕಾಗುತ್ತದೆ. ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಟೆಂಡರ್‌ ಕರೆಯುತ್ತೇವೆ. ಟೆಂಡರ್‌ ಅನುಮೋದಿಸುವುದರ ಜೊತೆಗೆ, 50 ಹೊಸ ಕ್ಯಾಂಟೀನ್‌ ಆರಂಭಿಸಲು ಸರ್ಕಾರ ಒಪ್ಪಿಗೆ ನೀಡಿದೆ” ಎಂದು ಬಿಬಿಎಂಪಿಯ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಅವರು ತಿಳಿಸಿದರು.

ಪ್ರಸ್ತುತ ನಗರದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ನಡೆಸುವ ಜವಾಬ್ದಾರಿಯನ್ನು ಎರಡು ಸಂಸ್ಥೆಗಳಿಗೆ ವಹಿಸಲಾಗಿದೆ. ಆಹಾರದ ಕೊರತೆಯ ಜೊತೆಗೆ, ಕ್ಯಾಂಟೀನ್‌ಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸುತ್ತಿವೆ ಎಂಬ ದೂರುಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...