ಇಂದಿರಾ ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ಊಟದ ಜೊತೆಗೆ ಮೊಟ್ಟೆ ನೀಡಲು ಚಿಂತನೆ

Date:

  • ಬಡವರಿಗೆ ಅತಿ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿ ಮತ್ತು ಊಟ
  • ವಾರದಲ್ಲಿ ಮೂರು ದಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೋಳಿ ಮೊಟ್ಟೆ ನೀಡಲು ಚಿಂತನೆ

ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಮಲತಾಯಿ ಧೋರಣೆಗೆ ಒಳಗಾಗಿದ್ದ ಇಂದಿರಾ ಕ್ಯಾಂಟೀನ್‌ ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜೀವ ಬಂದಂತಾಗಿದೆ. ಆಹಾರ ತಜ್ಞರು ಕ್ಯಾಂಟೀನ್‌ಗಳಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದು, ಈ ಹಿನ್ನೆಲೆ ಕ್ಯಾಂಟೀನ್‌ಗಳಲ್ಲಿ ಊಟದ ಜತೆಗೆ ಮೊಟ್ಟೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ದುಡಿಯುವ ವರ್ಗ, ಕಾರ್ಮಿಕ ವರ್ಗ, ಬಡವರಿಗೆ ಅತಿ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿ ಮತ್ತು ಊಟ ನೀಡಲಾಗುತ್ತದೆ. ಇದು ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ.

ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದು, ಬೆಂಗಳೂರಿನ 250 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜತೆಗೆ ಕ್ಯಾಂಟೀನ್‌ನ ಊಟದ ಮೆನು ಬದಲಾವಣೆಯಾಗಲಿದೆ. ಮೆನುವನ್ನು ಬಹುತೇಕ ಮುಖ್ಯಮಂತ್ರಿಗಳೇ ಅಂತಿಮಗೊಳಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜತೆಗೆ ಸಾರ್ವಜನಿಕರು ಕ್ಯಾಂಟೀನ್‌ನಲ್ಲಿ ಚಪಾತಿ, ರಾಗಿ ಮುದ್ದೆ, ಟೀ ಸೇರಿದಂತೆ ಮಾಂಸಾಹಾರವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದರು.

ವಾರದಲ್ಲಿ ಮೂರು ದಿನವಾದರೂ ಕೋಳಿ ಮೊಟ್ಟೆಯನ್ನು ನೀಡಬೇಕು ಇದರಿಂದ ಜನರಲ್ಲಿ ಪೌಷ್ಠಿಕಾಂಶ ಕೊರತೆಯನ್ನು ಸ್ವಲ್ಪಮಟ್ಟಿಗೆ ಆದರೂ ನೀಗಿಸಬಹುದು. ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರ ನೀಡಲು ಕೋಳಿ ಮೊಟ್ಟೆ ಅತ್ಯುತ್ತಮವಾದ ಆಹಾರ ಎಂದು ಆಹಾರ ತಜ್ಞರು ಹಾಗೂ ಬಿಬಿಎಂಪಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಪೌಷ್ಟಿಕತೆ ಹೋಗಲಾಡಿಸಲು ಕಡಿಮೆ ಬೆಲೆಯಲ್ಲಿ ವಾರದಲ್ಲಿ ಮೂರು ದಿನ ಕೋಳಿ ಮೊಟ್ಟೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಮನವಿ ಮಾಡಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಜೂನ್‌ 30 ರವರೆಗೆ ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ : ಕೆಎಸ್‌ಆರ್‌ಟಿಸಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜಧಾನಿಯಲ್ಲಿ ಇದ್ದ 198 ಇಂದಿರಾ ಕ್ಯಾಂಟೀನ್‌ಗಳ ಸಂಖ್ಯೆಯನ್ನು 250ಕ್ಕೆ ಏರಿಸಲು ಮುಂದಾಗಿದೆ. ಇದರಲ್ಲಿ 24 ಮೊಬೈಲ್ ಕ್ಯಾಂಟೀನ್‌ಗಳು ಸೇರಿವೆ. ಉತ್ತಮ ಗುಣಮಟ್ಟದ ಆಹಾರ ಸೇರಿದಂತೆ ಕ್ಯಾಂಟೀನ್‌ ಹೈಟೆಕ್ ಮಾಡಲು ಹೆಚ್ಚುವರಿಯಾಗಿ ಪಾಲಿಕೆ 15 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...