ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ ‘ಇಂದಿರಾ ಕ್ಯಾಂಟೀನ್‌’ ಪ್ರಾರಂಭ

Date:

  • ನಿಲ್ದಾಣದ ಒಳಗೆ ಇರುವ ಆಹಾರವನ್ನು ಹೆಚ್ಚಿನ ಹಣ ನೀಡಿ ಎಲ್ಲರೂ ಪಡೆಯಲು ಸಾಧ್ಯವಿಲ್ಲ
  • ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವುದಿಲ್ಲ

ರಾಜ್ಯ ರಾಜಧಾನಿ ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ ‘ಇಂದಿರಾ ಕ್ಯಾಂಟೀನ್‌’ ಆರಂಭವಾಗಲಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ.

“ಶೀಘ್ರದಲ್ಲೇ ಕ್ಯಾಬ್ ಚಾಲಕರು ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುವವರು ಇಂದಿರಾ ಕ್ಯಾಂಟೀನ್‌ ಆಹಾರವನ್ನು ಸವಿಯಬಹುದು. ವಿಮಾನ ನಿಲ್ದಾಣವು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ಆದರೂ, ಹೆಚ್ಚಿನ ಸಂಖ್ಯೆಯ ಜನರು ಈ ಯೋಜನೆಯ ಪ್ರಯೋಜನ ಪಡೆಯುವುದರಿಂದ “ವಿಶೇಷ ಪ್ರಕರಣ” ಎಂದು ಪರಿಗಣಿಸಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಬಹುದು” ಎಂದು ಪಾಲಿಕೆ ಹೇಳಿದೆ.

“ನಿಲ್ದಾಣದ ಹೊರಗೆ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಿ. ಏಕೆಂದರೆ, ನಿಲ್ದಾಣದ ಒಳಗೆ ಇರುವ ಮಳಿಗೆಗಳಲ್ಲಿನ ಆಹಾರಕ್ಕಾಗಿ ಎಲ್ಲರೂ ಹೆಚ್ಚಿನ ಹಣವನ್ನು ಪಾವತಿಸಲು ಸಾಧ್ಯವಿಲ್ಲ” ಎಂದು ಖಾಸಗಿ ಕ್ಯಾಬ್ ಯೂನಿಯನ್‌ಗಳ ಪ್ರತಿನಿಧಿಗಳು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, “ವಿಮಾನ ನಿಲ್ದಾಣದ ಹೊರಗೆ ಒಂದು ಅಥವಾ ಎರಡು ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆಯಲಾಗುವುದು” ಎಂದು ತಿಳಿಸಿದ್ದಾರೆ.

“ವಿಮಾನ ನಿಲ್ದಾಣದಲ್ಲಿ ಆಹಾರವನ್ನು ಪಡೆಯಲು ಕ್ಯಾಬ್ ಚಾಲಕರು ಮಾತ್ರವಲ್ಲದೇ, ಅನೇಕ ಜನರು ಸಹ ಇದ್ದಾರೆ. ಈ ಜನರ ಹಿತದೃಷ್ಟಿಯಿಂದ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಅವರಿಗೆ ಕೈಗೆಟಕುವ ದರದಲ್ಲಿ ಆಹಾರವನ್ನು ಒದಗಿಸಲು ಬಯಸುತ್ತೇವೆ. ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಜಾಗವನ್ನು ಮೀಸಲಿಡಲು ಬಿಬಿಎಂಪಿ ಮೂಲಕ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡುತ್ತೇವೆ” ಎಂದು ಸಚಿವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಕ್ಸ್‌ಪ್ರೆಸ್‌ ವೇ: 25 ಅಪಘಾತ ಸ್ಥಳಗಳ ಗುರುತಿಸುವಿಕೆ, ಅಪಘಾತ ತಡೆಗಟ್ಟಲು ಸುರಕ್ಷತಾ ಕ್ರಮ: ಎಡಿಜಿಪಿ

ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಾರಿಗೆ ಸಚಿವರಿಂದ ಯಾವುದೇ ಪತ್ರ ಬಂದಿಲ್ಲ. ಪತ್ರ ಬಂದಾಗ ಆ ಬಗ್ಗೆ ಯೋಜಿಸುತ್ತೇವೆ” ಎಂದು ಹೇಳಿದರು.

“ಪ್ರಸ್ತುತ ನಿಯಮಗಳ ಪ್ರಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಪಾಲಿಕೆ ಮಾತ್ರ ತೆರೆಯಬಹುದು. ಆದರೆ, ವಿಮಾನ ನಿಲ್ದಾಣವು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕ್ಯಾಂಟೀನ್ ನಡೆಸಲು ಪಂಚಾಯಿತಿಗಳಿಗೆ ಅನುಮತಿ ಇಲ್ಲ” ಎಂದು ವಿವರಿಸಿದರು.

“ಭಾರೀ ಜನಸಂದಣಿ ಇರುವ ಪ್ರದೇಶಗಳಲ್ಲಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ನಮಗೆ ಅನುಮತಿ ಇದೆ. ಕೆಲವು ಆಸ್ಪತ್ರೆಗಳಲ್ಲಿ ಕ್ಯಾಂಟೀನ್‌ ಸ್ಥಾಪಿಸಲು ಯೋಜಿಸುತ್ತಿದ್ದೇವೆ. ಅದೇ ರೀತಿ, ವಿಮಾನ ನಿಲ್ದಾಣದಲ್ಲಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ನಮಗೆ ಮನವಿ ಬಂದರೆ, ಅದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸ್ಥಾಪಿಸಲಾಗುತ್ತದೆ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...