ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಬೇಕು: ನ್ಯಾಯಮೂರ್ತಿ ಗೋಪಾಲಗೌಡ

Date:

ಕೈಗಾರಿಕೆ ಸ್ಥಾಪನೆ ಹೆಸರಿನಲ್ಲಿ ರೈತರಿಂದ ಭೂಸ್ವಾಧೀನದ ಮೂಲಕ ಪಡೆದುಕೊಂಡ ಭೂಮಿಯ ಒಡೆತನವನ್ನು ಯಾವುದೇ ಕಾರಣಕ್ಕೂ ಉದ್ಯಮಿಗಳ ಒಡೆತನಕ್ಕೆ ಹಸ್ತಾಂತರಿಸಬಾರದು. ಸರ್ಕಾರವೇ ಒಡೆತನವನ್ನು ಉಳಿಸಿಕೊಳ್ಳಬೇಕು. ಇದರಿಂದ ಭೂಮಿ ದುರ್ಬಳಕೆ ತಡೆಯಲು ಸಾಧ್ಯ ಎಂದು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ನ್ಯಾಯಮೂರ್ತಿ ವಿ ಗೋಪಾಲಗೌಡ ಪ್ರತಿಪಾದಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಬದಲಾಗುತ್ತಿರುವ ಭೂ ನೀತಿ ಹಾಗೂ ಸಂಬಂಧಗಳು’ ವಿಷಯ ಕುರಿತು ದುಂಡು ಮೇಜಿನ ಸಭೆಯಲ್ಲಿ ಅವರು ಮಾತನಾಡಿದರು.

“ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ. ಸಂವಿಧಾನ ಬದ್ದ ,ಶಾಸನ ಬದ್ದ ಕರ್ತವ್ಯಗಳನ್ನು ಸರಿಯಾಗಿ ಸರ್ಕಾರಗಳು ನಿರ್ವಹಿಸುತ್ತಿಲ್ಲ. ಸರ್ಕಾರಗಳು ಗ್ರಾಮಗಳ ಅಭಿವೃದ್ಧಿ ಯನ್ನು ಕಡೆಗಣಿಸಿವೆ. ಅಭಿವೃದ್ಧಿ ಹೆಸರಿನಲ್ಲಿ ವಿವೇಚನಾ ರಹಿತ ನಗರೀಕರಣವನ್ನು ಪ್ರೊತ್ಸಾಹಿಸುತ್ತಿವೆ. ಇದರಿಂದ ಪ್ರತಿ ಹಳ್ಳಿಗಳು ಕೊಳಗೇರಿಗಳಾಗುತ್ತಿವೆ. ಭೂ ರಹಿತ ಕೃಷಿಕರಿಗೆ ಭೂಮಿ ಒದಗಿಸುವ ಮೂಲಕ ರೈತರ ಬದುಕಿಗೆ ಭದ್ರತೆ ಒದಗಿಸಬೇಕು. ಆದರೆ, ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ಭೂಮಿ ಹಕ್ಕು ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿವೆ” ಎಂದು ವಿಷಾಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಗತಿಪರ ಭೂ ಸುಧಾರಣೆಗೆ ಹೆಸರಾಗಿದ್ದ ಕರ್ನಾಟಕ ರಾಜ್ಯ ಇಂದು ಕಾರ್ಪೊರೇಟ್ ಭೂ ಕಬಳಿಕೆಗೆ ಕುಖ್ಯಾತಿ ಪಡೆಯುತ್ತಿದೆ. ಬಡವರು, ದಲಿತರಿಗೆ ಭೂಮಿ ಹಕ್ಕು ನೀಡುವ ,ಉಳುವವನೇ ಭೂಮಿ ಒಡೆಯ ಎಂಬ ಕರ್ನಾಟಕ ಭೂ ಸುಧಾರಣಾ ಕಾಯ್ದೆಗಳನ್ನು ದುರ್ಬಲಗೊಳಿಸಲಾಗಿದೆ. ಈಗ ಉಳ್ಳವರೇ ಭೂಮಿ ಒಡೆಯರು ಎಂಬಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ದೇವರಾಜ ಅರಸು ಜಾರಿಗೊಳಿಸಿದ್ದ ಕಾಯ್ದೆಯನ್ನು ನಿರ್ನಾಮ ಮಾಡಿ, ಜಾರಿಯಾಗಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ-2020ಅನ್ನು ರದ್ದುಪಡಿಸಬೇಕು. ಗ್ರಾಮೀಣ ವಸತಿ ರಹಿತರಿಗೆ ಭೂಮಿ ಒದಗಿಸಲು ಜನಪರ ಭೂಮಿ ನೀತಿಯನ್ನು ಅಂಗೀಕರಿಸಬೇಕು. ನೂರಾರು ವರ್ಷಗಳ ಹಿಂದಿನ ದಾಖಲೆಗಳಲ್ಲಿ ಅರಣ್ಯ ಎಂದು ಇದೆ ಎಂಬ ಕಾರಣದಿಂದ ಕಂದಾಯ ಹಕ್ಕು ದಾಖಲೆಗಳನ್ನು ಹೊಂದಿರುವ ರೈತರನ್ನು ಒಕ್ಕಲೆಬ್ಬಿಸುವುದು ಕಾನೂನು ಬಾಹಿರ ಕ್ರಮ” ಎಂದು ತಿಳಿಸಿದರು.’

ಸಭೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ವಿ ನಾಗರಾಜ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ,ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ, ಜಿಎನ್ ನಾಗರಾಜ್ ,ಯು ಬಸವರಾಜ, ಹೆಚ್ ಆರ್ ನವೀನ್ ಕುಮಾರ್ ಮುಂತಾದವರು ಮಾತಾನಾಡಿದರು.

ದುಂಡು ಮೇಜಿನ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷ ಜಿಸಿ ಬಯ್ಯಾರೆಡ್ಡಿ ವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...