ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯ ಅಡಗಿವೆ: ಕೋಟಿಗಾನಹಳ್ಳಿ ರಾಮಯ್ಯ

Date:

ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯಗಳು ಅಡಗಿವೆ. ಇದೀಗ, ಮಕ್ಕಳಿಗೆ ಶಿಕ್ಷಣ ನೀಡುವ ನೈತಿಕತೆಯೇ ನಮಗೆ ಇಲ್ಲದಂತಾಗಿದೆ. ಹೀಗಿರುವಾಗ ಅವರಿಗೆ ಯಾವ ರೀತಿಯ ನೀತಿ ಶಿಕ್ಷಣ ನೀಡಲು ಸಾಧ್ಯ. ಆ ಅರ್ಹತೆಯನ್ನೇ ನಾವು ಕಳೆದುಕೊಂಡಿದ್ದೇವೆ ಎಂದು ಹಿರಿಯ ಲೇಖಕ ಕೋಟಿಗಾನಹಳ್ಳಿ ರಾಮಯ್ಯ ವಿಷಾದಿಸಿದರು.

ಬಹುರೂಪಿ ಪ್ರಕಾಶನ ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಪರಾಗ್, ಪರಿ, ಕರಡಿ ಟೇಲ್ಸ್, ಕಲ್ಪವೃಕ್ಷ, ಏಕತಾರದ ಸಹಯೋಗದಲ್ಲಿ ಮಕ್ಕಳ 10 ಕೃತಿಗಳ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

10 ಮಕ್ಕಳ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “ನಮ್ಮ ದೇಶದಲ್ಲಿ ಪಠ್ಯ ಪುಸ್ತಕಗಳು, ಕಥೆ ಪುಸ್ತಕಗಳ ಮೂಲಕ ಬಹು ಹಿಂದಿನಿಂದಲೂ ಮೈಕ್ರೋ ಫ್ಯಾಸಿಸಂ ಅನ್ನು ಬಿತ್ತಲಾಗುತ್ತಿದೆ. ಆದನ್ನು ಇಂದಿಗೂ ಮುಂದುವರಿಸಿಕೊಂಡು ಹೋಗಲಾಗುತ್ತಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳು ಏನು ಓದಬೇಕು, ಏನನ್ನು ಓದಬಾರದು ಎಂಬುದನ್ನು ತೀರ್ಮಾನಿಸುವವರು ಯಾರು? ಇಂಥ ತೀರ್ಮಾನ ಕೈಗೊಳ್ಳಲು ನಮಗೆ ಅರ್ಹತೆ ಇದೆಯೇ? ಈ ಬಗ್ಗೆ ಮಕ್ಕಳಿಂದ ಅಭಿಪ್ರಾಯಗಳನ್ನು ಪಡೆಯಲಾಗಿದೆಯೇ ಎಂಬ ಸಂಕೀರ್ಣ ಪ್ರಶ್ನೆಗಳಿಗೆ ತ್ವರಿತವಾಗಿ ಉತ್ತರ ಕಂಡುಕೊಳ್ಳುವ ಅನಿವಾರ್ಯತೆ ಇದೆ” ಎಂದು ತಿಳಿಸಿದರು.

ಖ್ಯಾತ ಗಾಯಕಿ ಎಂ ಡಿ ಪಲ್ಲವಿ ಅವರು ಮಾತನಾಡಿ, “ಮಕ್ಕಳ ಎಳೆ ಮನಸ್ಸಿನಲ್ಲಿ ಜಾತಿ, ಬಡವ, ಶ್ರೀಮಂತ ಇತ್ಯಾದಿ ಭೇದಭಾವಗಳು ಯಾವುದೂ ಇರುವುದಿಲ್ಲ. ಆದರೆ, ಮಕ್ಕಳನ್ನು ಬೆಳೆಸುವ ಹಾದಿಯಲ್ಲಿ ಈ ರೀತಿಯ ತಾರತಮ್ಯ ಮೂಡಿಸುತ್ತಿದ್ದೇವೆ. ಅವರ ಮನಸ್ಸನ್ನು ಸಂಕೀರ್ಣಗೊಳಿಸುವ ಬದಲು ಹಿಗ್ಗಿಸಲು ಪ್ರಯತ್ನಿಸಿದಾಗ ಉತ್ತಮ ಹಾಗೂ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

“ಕನ್ನಡ ಭಾಷೆಯಲ್ಲಿ ಮಕ್ಕಳ ಪುಸ್ತಕಗಳು ತುಂಬಾ ಕಡಿಮೆ ಇವೆ. ಈ ವಿಷಯದಲ್ಲಿ ಸಾಕಷ್ಟು ಕೆಲಸಗಳು ಆಗಬೇಕಿದೆ. ಹಾಗಾಗಿ, ಬರವಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಕೊಡುಗೆ ನೀಡುವ ಆಸೆ ಇದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆ ಮಧ್ಯೆ ನಿಂತ ಹೆಲಿಕಾಪ್ಟರ್: ಮತ್ತಷ್ಟು ಹೆಚ್ಚಾದ ಸಂಚಾರ ದಟ್ಟಣೆ

“ಮಕ್ಕಳ ಪುಸ್ತಕಗಳನ್ನು ಹೇಗೋ ರೂಪಿಸಬಹುದು. ಆದರೆ, ಅವುಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಹಲವಾರು ಅಡೆತಡೆಗಳು ಸೃಷ್ಟಿಯಾಗಿವೆ. ಒಂದೆಡೆ ಶಾಲೆಗಳೇ ಕಣ್ಮರೆಯಾಗುತ್ತಿದ್ದರೆ, ಇನ್ನೊಂದೆಡೆ ಕನ್ನಡ ಮಕ್ಕಳೇ ಕಣ್ಮರೆಯಾಗುತ್ತಿದ್ದಾರೆ” ಎಂದು ವಿಜ್ಞಾನ ಬರಹಗಾರರಾದ ನಾಗೇಶ ಹೆಗಡೆ ಹೇಳಿದರು.

“ಮಕ್ಕಳ ಪುಸ್ತಕಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ, ಭಾಷಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸಂಸ್ಥೆಗಳು ಕೆಲಸ ಮಾಡಬೇಕಿತ್ತು. ಆದರೆ, ಈ ವಿಷಯದಲ್ಲಿ ಅವೆಲ್ಲವೂ ವಿಫಲವಾಗಿವೆ” ಎಂದರು.

ಬಹುರೂಪಿಯ ಜಿ ಎನ್ ಮೋಹನ್, ಶ್ರೀಜಾ ವಿ ಎನ್, ಪರಾಗ್ ನ ಲಕ್ಷ್ಮಿ ಕರುಣಾಕರನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

10 ಕೃತಿ

ಬಿಡುಗಡೆಯಾದ ಕೃತಿಗಳು

ಈ ಪಿಕ್ ಯಾರ ಕ್ಲಿಕ್  ಬೆಲೆ: ₹160

ಸೀರೆ ಉಡುವ ರಾಕ್ ಸ್ಟಾರ್  ಬೆಲೆ: ₹160

ಲೇಡಿ ಟಾರ್ಜಾನ್ ಬೆಲೆ: ₹120

ಮರ ಏರಲಾಗದ ಗುಮ್ಮ  ಬೆಲೆ: ₹160

ಸುಂದರಬಾಗ್ ಬೀದಿಯಲ್ಲಿ ನಡೆಯಿತೊಂದು ವಿಸ್ಮಯ ಬೆಲೆ: ₹140 

ಮರಳಿ ಮನೆಗೆ  ಬೆಲೆ: ₹125

ಟಿಕೆಟ್ ಇಲ್ಲ, ಪ್ರಯಾಣ ನಿಲ್ಲಲ್ಲ ಬೆಲೆ: ₹125

ಸ್ನೇಹಗ್ರಾಮದ ಸಂಸತ್ತು ಬೆಲೆ: ₹150

ನಂದಿನಿ ಎಂಬ ಜಾಣೆ ಬೆಲೆ: ₹150

ಗೆದ್ದೇ ಬಿಟ್ಟೆ! ಬೆಲೆ: ₹125

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...