ಬೆಂಗಳೂರು ವಿವಿ ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಹೈಕೋರ್ಟ್‌ನಿಂದ ವಿವಿಗೆ ನೋಟಿಸ್ ಜಾರಿ

Date:

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿವಿಗೆ ನೋಟಿಸ್‌ ಜಾರಿ ಮಾಡಿದೆ.

ಅಧಿಸೂಚಿಸಲಾದ ಕಾಲೇಜುಗಳಲ್ಲಿ ಜೂನ್‌ 16, 2023ರಂದು ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಯಾಗಲಿ ಅಥವಾ ಪ್ರವೇಶ ಪತ್ರವನ್ನು ಪರಿಶೀಲಿಸದೆ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಕೆಲವು ವಿದ್ಯಾರ್ಥಿಗಳು ಮೊಬೈಲ್ ಗಳನ್ನು ತೆಗೆದುಕೊಂಡು ಹೋಗಿದ್ದು, ಮೊಬೈಲ್ ಮೂಲಕ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿಕೊಂಡು ಬರೆದಿದ್ದರು. ಹಾಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿಗಳು, ಪಿಹೆಚ್‌ಡಿ ಪಡೆದಿರುವ ವಿದ್ಯಾರ್ಥಿಗಳು ಹಾಗೂ ಕೆಲವು ಸ್ವಯಂ ಘೋಷಿತ ನಾಯಕರು ಪ್ರವೇಶ ಪರೀಕ್ಷೆಯ ಕೇಂದ್ರಗಳಲ್ಲಿ ಅನಧಿಕೃತವಾಗಿ ಪ್ರವೇಶಿಸಿ ಪರೀಕ್ಷಾ ಅಕ್ರಮ ನಡೆಯಲು ಸಹಾಯ ಮಾಡಿದ್ದರು ಎಂದು ಅರ್ಜಿದಾರರಾದ ಎಸ್‌ ಆದಿ ಮಂಜುನಾಥ್‌ ಅವರು ಪ್ರಕರಣ ದಾಖಲಿಸಿದ್ದಾರೆ.

bangalore university

ಅಕ್ರಮ ಪರೀಕ್ಷೆಗೆ ಸಂಬಂಧಿಸಿದಂತೆ ವಿವಿ ಕುಲಪತಿ, ಮೌಲ್ಯಮಾಪನ ಕುಲಸಚಿವರು, ಪಿಹೆಚ್‌ಡಿ ಪರೀಕ್ಷೆಯ ವಿಶೇಷ ಅಧಿಕಾರಿಗಳಿಗೆ ಪರೀಕ್ಷೆ ರದ್ದುಗೊಳಿಸುವಂತೆ ಅರ್ಜಿದಾರರ ನೇತೃತ್ವದಲ್ಲಿ ವಿದ್ಯಾರ್ಥಿಗಳು ದೂರು ಸಲ್ಲಿಸಿದ್ದರು. ಆದರೆ ವಿವಿಯು ದೂರಿನ ಯಾವುದೇ ಮನವಿ ಪರಿಗಣಿಸದೆ ತರಾತುರಿಯಲ್ಲಿ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿತ್ತು. ತಾತ್ಕಾಲಿಕ ಕೀ ಉತ್ತರಗಳಲ್ಲಿ ಹಲವು ಲೋಪದೋಷಗಳಿರುವ ಕಾರಣ ಪ್ರಕಟಿಸಿದ ಕೀ ಉತ್ತರಗಳನ್ನು ಸರಿಪಡಿಸುವ ನೆಪದಲ್ಲಿ ಮತ್ತೊಂದು ಬಾರಿ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಆಕ್ಷೇಪಣೆಗಳಿಗೆ ಕೇವಲ ಒಂದೇ ದಿನ ಅವಕಾಶವನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ತನಿಖೆ ಮತ್ತು ಮರು ಪರೀಕ್ಷೆ ನಡೆಸುವಂತೆ ಅರ್ಜಿದಾರರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಅಶೋಕ್‌ ಎಸ್‌ ಕಿನಗಿ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಮೌಲ್ಯಮಾಪನ ಕುಲಸಚಿವರು, ವಿಶೇಷ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿ ಒಂದು ವಾರದೊಳಗೆ ಉತ್ತರವನ್ನು ನೀಡಬೇಕೆಂದು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...