ಬೆಂಗಳೂರಿನಲ್ಲಿ 500 ಕೋಟಿ ರೂ. ಅರಣ್ಯ ಭೂಮಿ ಒತ್ತುವರಿ ತೆರವು ಜಾಗದಲ್ಲಿ ವೃಕ್ಷೋಧ್ಯಾನ: ಈಶ್ವರ್ ಖಂಡ್ರೆ

Date:

ರಾಜ್ಯ ರಾಜಧಾನಿಯಲ್ಲಿ ಒತ್ತುವರಿ ತೆರವು ಮಾಡಿಸಲಾದ ಸುಮಾರು 500 ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ವೃಕ್ಷೋಧ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಬುಧವಾರ ಭೂಮಿಪೂಜೆ ನೆರವೇರಿಸಿದರು.

ಇಲಾಖೆ ಮರುವಶ ಪಡಿಸಿಕೊಂಡಿರುವ 17 ಎಕರೆ ಜಮೀನಿನ ಖುದ್ದು ಪರಿಶೀಲನೆಗೆ ಆಗಮಿಸಿದ್ದ ಸಚಿವರು, ಗಿಡ ನೆಡುವ ಮೂಲಕ ವೃಕ್ಷೋಧ್ಯಾನದಲ್ಲಿ 1800 ಸ್ಥಳೀಯ ಪ್ರಭೇದದ ಸಸಿ ನೆಡುವ ಕಾರ್ಯಕ್ರಮಕ್ಕೆ ಹಾಗೂ ಜಮೀನಿನ ಸುತ್ತಲೂ ತಂತಿ ಬೇಲಿ ಹಾಕುವ ಕಾಮಗಾರಿಗೂ ಚಾಲನೆ ನೀಡಿದರು.

“ಬೆಂಗಳೂರು ನಗರ ಬೃಹದಾಕಾರವಾಗಿ ಬೆಳೆಯುತ್ತಿದ್ದು, ನಗರ ಪ್ರದೇಶದಲ್ಲಿ ಉಸಿರಾಡಲು ಹಸಿರು ಪ್ರದೇಶ (ಲಂಗ್ ಸ್ಪೇಸ್) ಇರಬೇಕು. ಐ.ಟಿ., ಬಿ.ಟಿ. ಕಂಪನಿಗಳಿರುವ ಈ ಪ್ರದೇಶ ಕಾಂಕ್ರೀಟ್ ಕಾಡಿನಂತಿದ್ದು, 17 ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ವೃಕ್ಷೋಧ್ಯಾನ ಬೆಳಗಿನ ವಾಯು ವಿಹಾರಕ್ಕೆ ಬರುವವರಿಗೆ ಮತ್ತು ವಾರಾಂತ್ಯದಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಸಮಯ ಕಳೆಯಲು ಮಾಹಿತಿ ಮತ್ತು ಮನರಂಜನೆಯ ತಾಣವಾಗುವಂತೆ ಅಭಿವೃದ್ಧಿ ಪಡಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿ ಪಕ್ಷಿಲೋಕ ನಿರ್ಮಿಸಲಾಗುವುದು. ಎತ್ತರದ ಬೃಹತ್ ಪಂಜರದೊಳಗೆ ಮರಗಳನ್ನು ಬೆಳೆಸಿ ಅದರಲ್ಲಿ ವಿವಿಧ ಬಗೆಯ ಪಕ್ಷಿಗಳನ್ನು ಬಿಡಲಾಗುವುದು. ಈ ಹಕ್ಕಿಗಳ ಕಲರವ, ಸ್ವಚ್ಛಂದ ಹಾರಾಟವನ್ನು ಸ್ಥಳೀಯರಷ್ಟೇ ಅಲ್ಲ, ಪ್ರವಾಸಿಗರೂ ಕಣ್ತುಂಬಿಕೊಳ್ಳುವಂತೆ ಮಾಡಲಾಗುವುದು” ಎಂದು ಈಶ್ವರ ಖಂಡ್ರೆ ತಿಳಿಸಿದರು.

500 ಕೋಟಿ ರೂ. ಬೆಲೆಯ ಭೂಮಿ ಮರು ವಶ

“ಬೆಂಗಳೂರು ಹೊರವಲಯ ಕೆ.ಆರ್.ಪುರಂ ಹೋಬಳಿಯ ಕೊತ್ತನೂರಿನ ಸರ್ವೆ ನಂಬರ್ 47ರಲ್ಲಿನ 17 ಎಕರೆ 34 ಗುಂಟೆ ಜಮೀನನ್ನು ಬೆಂಗಳೂರು ನಗರ ಅಂದಿನ ಜಿಲ್ಲಾಧಿಕಾರಿಗಳು 2006ರ ಜೂನ್ ನಲ್ಲಿ ಅರಣ್ಯ ಎಂದು ಘೋಷಿಸಿದ್ದರು. ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ಈ ಆದೇಶ ಪ್ರಶ್ನಿಸಲಾಗಿತ್ತು, ನ್ಯಾಯಾಲಯ ಅರಣ್ಯ ಎಂದು ಘೋಷಿಸಲಾಗಿದ್ದ ಜಿಲ್ಲಾಧಿಕಾರಿಯವರ ಆದೇಶ ಎತ್ತಿ ಹಿಡಿದಿತ್ತು. ಆದರೆ, ಇದಾದ 17 ವರ್ಷಗಳ ತರುವಾಯ 2023ರ ಜನವರಿಯಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ ಅರಣ್ಯ ಪ್ರದೇಶ ಎಂದು ಇಂಡೀಕರಣ ಆಗಿದ್ದ ಭೂಮಿಯನ್ನು ‘ಸರ್ಕಾರಿ ಭೂಮಿ’ ಎಂದು ಬದಲಾಯಿಸಿ. ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದರು” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...