ಹೋಟೆಲಿನ ಕಾಫಿ-ಟೀ, ತಿಂಡಿ-ತಿನಿಸುಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯ: ಪಿ ಸಿ ರಾವ್

Date:

  • ವಿದ್ಯುತ್ ದರ ಏರಿಕೆಯಿಂದ ಎಲ್ಲ ಉದ್ಯಮಿಗಳಿಗೂ ಶಾಕ್
  • ಹಾಲು ಮತ್ತು ಅಕ್ಕಿಯ ಬೆಲೆ ದುಬಾರಿಯಾಗುವ ಸಂಭವ

ವಿದ್ಯುತ್ ದರ ಏರಿಕೆಯಿಂದ ಉದ್ಯಮಗಳಿಗೆ ತೊಂದರೆಯಾಗಿದ್ದು, ಹೋಟೆಲ್ ನಡೆಸುವುದು ತುಂಬಾ ಕಷ್ಟಕರವಾಗಿದೆ. ಮುಂದಿನ ದಿನಗಳಲ್ಲಿ ದೈನಂದಿನ ಬಳಕೆಯ ವಸ್ತುಗಳ ಬೆಲೆಗಳನ್ನು ಹತೋಟಿಗೆ ತರದಿದ್ದರೆ ಹೋಟೆಲಿನ ಕಾಫಿ, ತಿಂಡಿ-ತಿನಿಸುಗಳ ಬೆಲೆಗಳನ್ನು ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷ ಪಿ ಸಿ ರಾವ್ ಹೇಳಿದ್ದಾರೆ.

“ವಿದ್ಯುತ್ ದರ ಏರಿಕೆಯಿಂದ ಎಲ್ಲ ಉದ್ಯಮಿಗಳಿಗೂ ಹಾಗೂ ಜನಸಾಮಾನ್ಯರಿಗೂ ಬಹುದೊಡ್ಡ ಶಾಕ್ ಕೊಟ್ಟಿದೆ. ಇತ್ತೀಚೆಗೆ ಹೋಟೆಲ್ ಉದ್ಯಮಕ್ಕೆ ಅಗತ್ಯವಾಗಿರುವ ಕಾಫಿಪುಡಿ, ಬೇಳೆಕಾಳು, ಮೆಣಸಿನಕಾಯಿ, ತರಕಾರಿ ಬೆಲೆ ಗಗನಕ್ಕೇರಿದೆ. ಜತೆಗೆ ಹಾಲು ಮತ್ತು ಅಕ್ಕಿಯ ಬೆಲೆ ದುಬಾರಿಯಾಗುವ ಸಂಭವವಿದೆ” ಎಂದರು.

“ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಕ್ಷಣ ಸ್ಪಂದಿಸಿ ಸಮಂಜಸವಾದ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಒಂದು ವಾರದಿಂದ ನಗರದ ಕೆಲವು ಹೋಟೆಲ್‌ಗಳಲ್ಲಿ ತಿಂಡಿ ಮತ್ತು ಕಾಫೀ, ಟೀ ದರ ಏರಿಕೆಯಾಗಿದೆ. ಈ ಹಿಂದೆ ಇದ್ದ ₹50 ಇದ್ದ ಮಸಾಲೆ ದೋಸೆ ದರ ಇದೀಗ ₹60 ರಿಂದ 70 ಆಗಿದೆ. ಟೀ, ಕಾಫಿ, ಲೆಮನ್ ಟೀ ಮೊದಲಿಗೆ ₹10 ರಿಂದ ₹12 ಇತ್ತು. ಈಗ ₹15 ರಿಂದ ₹20 ಏರಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬಸ್ ನಿಲುಗಡೆಗಾಗಿ ನಿರ್ವಾಹಕ ಮತ್ತು ಚಾಲಕರ ಮೇಲೆ ಮಹಿಳೆಯಿಂದ ಹಲ್ಲೆ, ದೂರು ದಾಖಲು

ನೂತನ ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ್​ ಅವರು ಹಾಲಿನ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ಸಮ್ಮತಿ ನೀಡಿದರೆ, ಹಾಲಿನ ಉತ್ಪನ್ನಗಳ ಜತೆಗೆ ಹೋಟೆಲ್ ತಿಂಡಿ ದರ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...