‘ಎಲ್ಲರ ಬೆಂಗಳೂರು’ ಆಗಲು ಸವಾಲು, ಸಾಧ್ಯತೆಗಳೇನು? ಆ.2ರಂದು ಜಾಗೃತ ಕರ್ನಾಟಕದಿಂದ ಕಾನ್‌ಕ್ಲೇವ್‌

Date:

ಬೆಂಗಳೂರು ನಗರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ನಗರದಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಒಟ್ಟಿಗೆ ಬದುಕು ಕಟ್ಟಿಕೊಳ್ಳುತ್ತಿವೆ. ಆದರೆ, ನಗರದಲ್ಲಿರುವ ಎಲ್ಲರಿಗೂ ಬೆಂಗಳೂರು ನಮ್ಮದು ಅನ್ನಿಸಬಹುದೇ? ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳೇನು- ಅವುಗಳ ಪರಿಹಾರಕ್ಕೆ ಇರುವ ಸಾಧ್ಯತೆಗಳು ಯಾವುದು ಎಂಬುದನ್ನು ಚರ್ಚಿಸಲು ‘ಜಾಗೃತ ಕರ್ನಾಟಕ’ ಸಂಘಟನೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಜಾಗೃತ ಕರ್ನಾಟಕದ ಮುಖಂಡ ರಾಜಶೇಖರ್ ಅಕ್ಕಿ, “‘ಎಲ್ಲರಿಗೂ ಇದು ನಮ್ಮ ಬೆಂಗಳೂರು ಆಗಲು ಇರುವ ಸವಾಲುಗಳು ಮತ್ತು ಸಾಧ್ಯತೆಗಳು’ ಎಂಬ ವಿಷಯ ಕುರಿತ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ಆಗಸ್ಟ್‌ 2ರ ಶನಿವಾರ ಮಧ್ಯಾಹ್ನ 2.30ರಿಂದ 6.30ವರೆಗೆ, ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆ, Institute of Agricultural Technologies (IAT)ಯಲ್ಲಿ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ಬೆಂಗಳೂರಿನಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಎದುರಿಸುತ್ತಿರುವ ನಿಜವಾದ ಸಮಸ್ಯೆಗಳೇನು? ಇಲ್ಲಿ ಬದುಕು ಕಟ್ಟಿಕೊಳ್ಳಲು ಯಾರಿಗೆ ಎಷ್ಟು ಸಾಧ್ಯವಾಗುತ್ತಿದೆ? ಬೆಂಗಳೂರು ಒಂದು ಸಮುದಾಯವಾಗಿದೆಯೇ? ಈ ನಗರಕ್ಕೊಂದು ವ್ಯಕ್ತಿತ್ವವಿದೆಯೇ? ಇಲ್ಲಿ ಖಿನ್ನತೆ, ಅನಾಥಭಾವ, ಅನ್ಯ ಭಾವಗಳು ಹೆಚ್ಚಾಗುತ್ತಿವೆಯೇ, ಕಡಿಮೆಯಾಗುತ್ತಿವೆಯೇ? ಮುಂತಾದ ಮೂಲಭೂತ ಸಮಸ್ಯೆಗಳು. ಸವಾಲುಗಳು ಹಾಗೂ ಸಂಭಾವ್ಯ ಉತ್ತರಗಳ ಬಗ್ಗೆ ಗಹನವಾದ ಚರ್ಚೆಯನ್ನು ನಡೆಸಲಿದ್ದೇವೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೆಂಗಳೂರು121

“ಕಾರ್ಯಕ್ರಮದಲ್ಲಿ ಮೂರು ಗೋಷ್ಠಿಗಳು ನಡೆಯಲಿದ್ದು, ಮೊದಲ ಗೋಷ್ಠಿಯಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ವಿವಿಧ ಸಮುದಾಯಗಳ ಕುರಿತ ಚರ್ಚೆ ನಡೆಯಲಿದೆ. ಗೋಷ್ಠಿಯಲ್ಲಿ ವಕೀಲ ವಿನಯ್ ಶ್ರೀನಿವಾಸ್, ಸ್ಲಂ ಜನಾಂದೋಲನ ಕರ್ನಾಟಕದ ನರಸಿಂಹಮೂರ್ತಿ, ಒಳಮೀಸಲಾತಿ ಹೋರಾಟಗಾರ ಬಸವರಾಜ ಕೌತಾಳ, ವಿಷನ್ ಟ್ರಸ್ಟ್‌ನ ಶಾನ್ ಅಹದ್ ವಿಷಯ ಮಂಡನೆ ಮಾಡಲಿದ್ದಾರೆ” ಎಂದು ಅಕ್ಕಿ ತಿಳಿಸಿದ್ದಾರೆ.

“2ನೇ ಗೋಷ್ಠಿಯಲ್ಲಿ ‘ಬೆಂಗಳೂರಿನ ಮಾನಸಿಕ ಆರೋಗ್ಯ, ಸವಾಲುಗಳು ಮತ್ತು ಸಾಧ್ಯತೆಗಳು’ ವಿಷಯದ ಮೇಲೆ ಮಾನಸಿಕ ಆರೋಗ್ಯ ತಜ್ಞರಾದ ಪಾದಸ್ ಶರ್ಮ ವಿಚಾರ ಮಂಡನೆ ಮಾಡಲಿದ್ದಾರೆ. ‘ನಗರ ಯೋಜನೆ ಮತ್ತು ಆಡಳಿತದ ತಜ್ಞರು ನಗರ ಯೋಜನೆ ಹೇಗಿರಬಹುದು’ ಎಂಬುದನ್ನು ಚಂಪಕ ರಾಜಗೋಪಾಲ್ ಮಂಡಿಸಲಿದ್ದಾರೆ. ‘ಎಲ್ಲರಿಗೂ ಆಗುವ ಅಭಿವೃದ್ಧಿ’ ವಿಷಯದ ಮೇಲೆ ನಗರ ನೀತಿ ತಜ್ಞರು ಮತ್ತು ಸಂಶೋಧಕರಾದ ಮ್ಯಾಥ್ ಇಡಿಕುಲ ಮಾತನಾಡಲಿದ್ದಾರೆ” ಎಂದು ವಿವರಿಸಿದ್ದಾರೆ.

“ಮೂರನೇ ಗೋಷ್ಠಿಯಲ್ಲಿ ‘ರಾಜಕೀಯ ಮತ್ತು ಸಾಮಾಜಿಕ ಸಂಘಟಿಸುವಿಕೆ’ ಕುರಿತ ಚರ್ಚೆಗಳು ನಡೆಯಲಿವೆ. ಈ ಸಂವಾದದಲ್ಲಿ ಜಯನಗರ ಮಾಜಿ ಶಾಸಕಿ ಸೌಮ್ಯ ರೆಡ್ಡಿ, ರಾಜರಾಜೇಶ್ವರಿ ನಗರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕುಸುಮ ಹನುಮಂತರಾಯಪ್ಪ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...