ಜಯದೇವ ಆಸ್ಪತ್ರೆ ನಿರ್ದೇಶಕ ಅವಧಿ ಅಂತ್ಯ: ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದ ಡಾ.ಮಂಜುನಾಥ್

Date:

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಮಂಜುನಾಥ್ ಅವರನ್ನು ಮುಂದುವರೆಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದ್ದು, ಜನವರಿ 31ಕ್ಕೆ ಮಂಜುನಾಥ್ ಅವರ ಅವಧಿ ಮುಕ್ತಾಯವಾಗಲಿದೆ.

ಈ ಬಗ್ಗೆ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜಯದೇವ ಆಸ್ಪತ್ರೆ ನಿರ್ದೇಶಕ ಮಂಜುನಾಥ್ ಅವರು, “16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈ ತಿಂಗಳು ನನ್ನ ಅವಧಿ ಮುಕ್ತಾಯವಾಗಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವುದು ನನ್ನ ಮೊದಲ ಆಯ್ಕೆ, ರಾಜಕೀಯದಲ್ಲಿ ಆಸಕ್ತಿಯಿಲ್ಲ ಹಾಗೂ ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ” ಎಂದು ಹೇಳಿದ್ದಾರೆ.

“ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ನನ್ನ ಮುಂದುವರೆಸುವ ಅಂತಿಮ ತೀರ್ಮಾನ ಸರ್ಕಾರ ಕೈಗೊಳ್ಳಲಿದೆ. ನನ್ನನ್ನು ಮುಂದುವರೆಸುವ ಬಗ್ಗೆ ನನ್ನ ಅಭಿಪ್ರಾಯ ಪಡೆದಿಲ್ಲ. ನನ್ನ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಶೇ.500 ರಷ್ಟು ಅಭಿವೃದ್ಧಿ ಕೆಲಸಗಳು ಆಗಿದೆ. 300 ಹಾಸಿಗೆ ಇದ್ದ ಆಸ್ಪತ್ರೆ ಇದೀಗ 2,000ಕ್ಕೆ ಏರಿಕೆ ಆಗಿದೆ. ಅಲ್ಲದೇ, ವಿಶ್ವಭೂಪಟದಲ್ಲಿ ಜಯದೇವ ಆಸ್ಪತ್ರೆಗೆ ಮಾನ್ಯತೆ ಸಿಕ್ಕಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು 400ಮೀಟರ್ ದೂರಕ್ಕೆ ಎಳೆದೊಯ್ದ ಕಾರು ಚಾಲಕ

“ನನ್ನ ಆಸ್ಪತ್ರೆಯ ಸಿಬ್ಬಂದಿ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಜನ ಸಾಮಾನ್ಯರು ಗೌರವಯುತವಾಗಿ ನಿವೃತ್ತಿ ಕೊಡುತ್ತಿದ್ದಾರೆ. ನನ್ನ ಅವಧಿಯ ಬಳಿಕ ಇನ್ನೊಂದು ವಾರದಲ್ಲಿ ಹೊಸ ನಿರ್ದೇಶಕರು ಬರುತ್ತಾರೆ. ಅವರು ಯಾರೆಂದು ನನಗೆ ತಿಳಿದಿಲ್ಲ. ಸರ್ಕಾರ ಈಗಾಗಲೇ ಹೊಸ ನಿರ್ದೇಶಕರನ್ನು ನಿರ್ಧಾರ ಮಾಡಿದೆ. ನಿರ್ದೇಶಕರನ್ನು ಆಯ್ಕೆ ಮಾಡುವ ಕಮಿಟಿಯಲ್ಲಿ ನಾನು ಇರಲಿಲ್ಲ. ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಆಸ್ಪತ್ರೆಗಾಗಿ ನಾನು ತುಂಬಾ ಕೆಲಸ ಮಾಡಿದ್ದೇನೆ. ಅದರ ಉದ್ಘಾಟನೆಗೆ ನಾನು ಇರಬೇಕಿತ್ತು ಎಂಬ ಆಸೆ ಇತ್ತು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...