ಕರ್ನಾಟಕಕ್ಕೆ ಲಗ್ಗೆಯಿಟ್ಟ ಜೆಎನ್‌ 1 : ಎಂಟು ಜನರಲ್ಲಿ ಪಾಸಿಟಿವ್

Date:

ಮಾರಿ ಕೊರೋನಾ ವೈರಸ್​ನ ರೂಪಾಂತರಿ ಜೆಎನ್‌ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ ಜೆಎನ್‌ 1 ಪ್ರಕರಣಗಳ ಸಂಖ್ಯೆ 63ಕ್ಕೆ ಏರಿದೆ. ಗೋವಾ ಮಹಾರಾಷ್ಟ್ರದ ಬಳಿಕ ಇದೀಗ ಕರ್ನಾಟಕದ ಎಂಟು ಜನರಲ್ಲಿ ಜೆಎನ್‌ 1 ಪ್ರಕರಣ ಪಾಸಿಟಿವ್ ಬಂದಿದೆ.

ಜೆಎನ್‌ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿತ್ತು. ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಗೋವಾ ಮಹಾರಾಷ್ಟ್ರದ ಬಳಿಕ ಇದೀಗ ಕರ್ನಾಟಕದಲ್ಲಿಯೂ ಎಂಟು ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಈವರೆಗೂ 63 ಜೆಎನ್‌ 1 ಪ್ರಕರಣಗಳು ಪತ್ತೆಯಾಗಿವೆ. ದೇಶದ ಒಟ್ಟು 6 ರಾಜ್ಯಗಳಲ್ಲಿ (ಗೋವಾ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ) ರೂಪಾಂತರಿ ವೈರಸ್ ಜೆಎನ್‌ 1 ಪತ್ತೆಯಾಗಿದ್ದು, ಗೋವಾದಲ್ಲಿ 34, ಕೇರಳ 6, ಮಹಾರಾಷ್ಟ್ರ 4, ತಮಿಳುನಾಡು 4 ಹಾಗೂ ತೆಲಂಗಾಣ 2 ಪತ್ತೆಯಾಗಿವೆ. ಈ ಪೈಕಿ ಗೋವಾದಲ್ಲಿಯೇ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಎನ್‌ 1 ಸೋಂಕಿನ ಲಕ್ಷಣಗಳು

ಜ್ವರ, ಕೆಮ್ಮು, ಚಳಿ, ನೆಗಡಿ, ಗಂಟಲು ನೋವು, ಉಸಿರಾಟದ ಸಮಸ್ಯೆ, ವಾಂತಿ, ನಾಲಿಗೆ ರುಚಿ ಕಳೆದುಕೊಳ್ಳುವುದು, ಅತಿಸಾರ, ತಲೆನೋವು, ಮೂಗು ಸೋರುವಿಕೆ, ಸುಸ್ತು ಇವು ಜೆಎನ್‌ 1 ಸೋಂಕಿನ ಲಕ್ಷಣಗಳಾಗಿವೆ.

ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 628 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 4,054ಕ್ಕೆ ಏರಿದೆ. ಕೇರಳದಿಂದ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಮಾಹಿತಿ ನೀಡಿವೆ.

ಈ ಸುದ್ದಿ ಓದಿದ್ದೀರಾ? ಟಿಕೆಟ್‌ ಸಮಸ್ಯೆ ಪರಿಹರಿಸಿಕೊಳ್ಳಲು ತೆರಳಿದ ಪ್ರಯಾಣಿಕನ ಮೇಲೆ ಹಲ್ಲೆ: ಎಫ್‌ಐಆರ್‌ ದಾಖಲು

ಕೋವಿಡ್-19 ಸೋಂಕು ಆರಂಭವಾದಾಗಿನಿಂದ ಈವರೆಗೆ ಒಟ್ಟು 4.50 ಕೋಟಿ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ. ಈವರೆಗೆ 5.33 ಲಕ್ಷ ಮಂದಿ ಮೃತಪಟ್ಟಿದ್ದು, 4.44 ಕೋಟಿ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿತರ ಗುಣಮುಖ ಪ್ರಮಾಣ ಶೇ 98.81 ಇದೆ. ಮೃತರ ಪ್ರಮಾಣ ಶೇ 1.19ರಷ್ಟಿದೆ. ಈವರೆಗೂ ದೇಶದಲ್ಲಿ 220.67 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...