ಫೇಸ್‌ಬುಕ್ ಯುವತಿ ಬಲೆಗೆ ಬಿದ್ದು ₹37 ಲಕ್ಷ ಕಳೆದುಕೊಂಡ ಕಂಬಾಳು ಸ್ವಾಮೀಜಿ

Date:

  • ವಂಚನೆ ನಡೆದಿರುವ ಬಗ್ಗೆ ದೂರು ದಾಖಲಿಸಿದ ಸ್ವಾಮೀಜಿ
  • 2020ರಲ್ಲಿ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವತಿ

‘ಫೇಸ್‌ಬುಕ್‌’ನಲ್ಲಿ ಪರಿಚಯವಾದ ಯುವತಿಯ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ₹37 ಲಕ್ಷ ಕಳೆದುಕೊಂಡಿದ್ದು, ಈ ಬಗ್ಗೆ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಯುವತಿಯೂ 2020ರಿಂದ ಇಲ್ಲಿಯವರೆಗೆ ಯಾವ ಯಾವ ಖಾತೆಗಳಿಗೆ ಹಣ ಜಮೆ ಮಾಡಿಕೊಂಡಿದ್ದಾಳೆ. ಹಣ ವರ್ಗಾವಣೆ ಮಾಡಿರುವ ದಾಖಲೆ ಸಮೇತ ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ವಂಚನೆ ನಡೆದಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಸ್ವಾಮೀಜಿ ಅವರಿಗೆ ಮೋಸ ಮಾಡಿದ್ದಾಳೆ ಎನ್ನಲಾದ ಯುವತಿ ವರ್ಷಾ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸ್ವಾಮೀಜಿ ನೀಡಿದ ದೂರಿನಲ್ಲೇನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020ರಲ್ಲಿ ಫೇಸ್‌ಬುಕ್‌ನಲ್ಲಿ ವರ್ಷಾ ಎಂಬ ಖಾತೆಯಿಂದ ಫ್ರೆಂಡ್‌ ರಿಕ್ವೆಸ್ಟ್‌ ಬಂದಿತ್ತು. ಅದನ್ನು ಸ್ವೀಕರಿಸಿದ್ದೆ, ಫೇಸ್‌ಬುಕ್‌ನಲ್ಲಿ ಫ್ರೆಂಡ್ಸ್‌ ಆದ ಬಳಿಕ ಆ ಯುವತಿ ಚಾಟಿಂಗ್ ಮಾಡಲು ಪ್ರಾರಂಭಿಸಿದ್ದಳು.

ಬಳಿಕ ತನಗೆ ಆಧ್ಯಾತ್ಮಿಕವಾಗಿ ಆಸಕ್ತಿ ಇದೆ ಎಂದು ಹೇಳಿ ನನ್ನ ಮೊಬೈಲ್ ನಂಬರ್ ಪಡೆದುಕೊಂಡಳು. ಬಳಿಕ ವಾಟ್ಸ್‌ಆಪ್‌ನಲ್ಲಿ ಚಾಟಿಂಗ್‌ ಮಾಡಲು ಆರಂಭಿಸಿದ್ದಳು. ನಂತರದ ದಿನಗಳಲ್ಲಿ ಹಲವು ಬಾರಿ ವಿಡಿಯೋ ಕರೆ ಕೂಡಾ ಮಾಡಿದ್ದಳು ಎಂದು ಸ್ವಾಮೀಜಿ ದೂರು ನೀಡಿರುವುದಾಗಿ ಮೂಲಗಳು ತಿಳಿಸಿವೆ.  

ವಿಡಿಯೋ ಕರೆ ಮಾಡಿದ್ದಾಗ ಯುವತಿ ಇಲ್ಲಿಯವರೆಗೂ ತನ್ನ ಮುಖವನ್ನೂ ತೋರಿಸಿಲ್ಲ. ಕೈ-ಕಾಲು ಮಾತ್ರ ತೋರಿಸಿ ಮಾತನಾಡುತ್ತಿದ್ದಳು. ಅವಳು ಅನಾಥೆ ಎಂದು ಹೇಳಿಕೊಂಡಿದ್ದಳು. ಹೋಟೆಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಮಾಡುತ್ತಿರುವುದಾಗಿ ಈ ಯುವತಿ ಹೇಳಿದ್ದು, ₹2 ಲಕ್ಷ ಪಡೆದಿದ್ದಳು. ನಂತರ ತನ್ನ ಹೆಸರಿನಲ್ಲಿ ಜಮೀನು ಇರುವುದಾಗಿ ಅದನ್ನು ಮಠದ ಹೆಸರಿಗೆ ಬರೆಯುವುದಾಗಿ ಯುವತಿ ಹೇಳಿ ಹಂತ ಹಂತವಾಗಿ ಸ್ವಾಮೀಜಿ ಬಳಿಯಿಂದ ಯುವತಿ ಬರೋಬ್ಬರಿ ₹35 ಲಕ್ಷ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಳು ಎಂದು ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

ವರ್ಷಾ ಎನ್ನಲಾದ ಯುವತಿ ತನ್ನ ಜಮೀನು ದಾಖಲೆ ತರುವ ವೇಳೆ ತನ್ನ ಮೇಲೆ ಹಲ್ಲೆಯಾಗಿದ್ದು, ಪ್ರಸ್ತುತವಾಗಿ ಎಂ.ಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದೇನೆ ಎಂದು ಹೇಳಿದ್ದಾಳೆ. ಬಳಿಕ ಆಸ್ಪತ್ರೆಯ ಬಿಲ್ ಪಾವತಿಸಲು ಹಣ ಕೇಳಿದ್ದಳು. ಇದರಿಂದ ಆಕೆಯ ಮೇಲೆ ಅನುಮಾನಗೊಂಡು ನನಗೆ ಪರಿಚಯಸ್ಥರೊಬ್ಬರನ್ನು ಆಸ್ಪತ್ರೆಗೆ ವಿಚಾರಿಸಲು ಕಳುಹಿಸಿದೆ. ಅವರು ಆಸ್ಪತ್ರೆಯಲ್ಲಿ ಕೇಳಿದಾಗ ವರ್ಷಾ ಎಂಬುವವರು ಯಾರು ದಾಖಲಾಗಿಲ್ಲ ಎಂದು ತಿಳಿದುಬಂದಿತು.

ಬಳಿಕ ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾ ಅವಳಿಗೆ ಕರೆ ಮಾಡಿದ್ದೆ, ಆ ಸಮಯದಲ್ಲಿ ಅವರು ವರ್ಷಾಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಕರೆದುಕೊಂಡು ಬರುವೆ, ಆಸ್ಪತ್ರೆಗೆ ನೀಡಿರುವ ಹಣವನ್ನು ವಾಪಸ್ ನೀಡಬೇಕು. ಇಲ್ಲದಿದ್ದರೆ, ವರ್ಷಾ ಜತೆಗೆ ಇದ್ದ ಸಲುಗೆಯ ಬಗ್ಗೆ ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

“ಮೇ 23ರಂದು ಮಂಜುಳಾ ಮತ್ತು ಇತರರು ಮಠಕ್ಕೆ ಹೋಗಿ ಹಣ ನೀಡಬೇಕೆಂದು ಗಲಾಟೆ ಮಾಡಿದ್ದಾರೆ. ಸ್ವಾಮೀಜಿಗೆ ₹55 ಹಣ ಕೊಡುವಂತೆ ಕೇಳಿದ್ದಾರೆ. ಈ ಘಟನೆ ಬಳಿಕ ಸ್ವಾಮೀಜಿ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾನೂನು ಉಲ್ಲಂಘಿಸಿದ ಇಬ್ಬರು ಇನ್ಸ್‌ಪೆಕ್ಟರ್‌ ಅಮಾನತು

“2020ರಲ್ಲಿ ಸ್ವಾಮೀಜಿಯನ್ನು ಯುವತಿ ಪರಿಚಯ ಮಾಡಿಕೊಂಡಿದ್ದಳು. ಸ್ವಾಮೀಜಿ ಬಳಿ ನಾನಾ ಕಾರಣ ಹೇಳಿ ಹಣ ಪಡೆದುಕೊಂಡಿದ್ದಾಳೆ. ಸ್ವಾಮೀಜಿ ಬಳಿ ಹಣ ವರ್ಗಾವಣೆ ಮಾಡಿದ ಎಲ್ಲ ದಾಖಲೆಗಳು ಇವೆ. ಯಾವ ಯಾವ ಖಾತೆಗೆ ಹಣ ಜಮೆ ಮಾಡಲಾಗಿದೆ ಎಂದು ಪರಿಶೀಲಿಸಲಾಗುತ್ತಿದೆ. ಸ್ವಾಮೀಜಿ ₹50 ಲಕ್ಷದವರೆಗೂ ಹಣ ಕಳೆದುಕೊಂಡಿರುವ ಅನುಮಾನವಿದೆ. ಮಂಜುಳಾ ಹಾಗೂ ಇತರರಿಗೂ ವರ್ಷಾ ಎಂಬ ಯುವತಿಗೂ ಏನು ಸಂಬಂಧ ಎಂಬುದು ತನಿಖೆಯಿಂದ ತಿಳಿಯಬೇಕಿದೆ” ಎಂದಿದ್ದಾರೆ.

“ಸ್ವಾಮೀಜಿಗೆ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿ ಕಡೆಯವನು ಎನ್ನಲಾದ ಒಬ್ಬನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...