ಬೆಂಗಳೂರು | ಹಲ್ಲೆಯ ಸುಳ್ಳು ಕತೆ ಕಟ್ಟಿದ್ದ ವಿಂಗ್‌ ಕಮಾಂಡರ್‌ ವಿರುದ್ಧ ಕೊಲೆ ಯತ್ನ ಪ್ರಕರಣ

Date:

ಸುಳ್ಳು ಕಥೆ ಕಟ್ಟಿದ ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲಾಗಿದೆ. ಹಲ್ಲೆಗೆ ಒಳಗಾದ ಟೆಕಿ ವಿಕಾಸ್‌ ನೀಡಿದ ದೂರಿನ ಆಧಾರದಲ್ಲಿ ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಾರಿನ ನಂಬರ್‌ ಆಧಾರದಲ್ಲಿ ಶಿಲಾದಿತ್ಯಾ ಬೋಸೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿದೆ.

ಬಿಎನ್‌ಎಸ್ 109(ಕೊಲೆಯತ್ನ), 115(2)(ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324 (ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶ ಪೂರಕವಾಗಿ ಹಾಳು ಮಾಡುವುದು), 352 (ಶಾಂತಿ ಭಂಗ)ಸೆಕ್ಷನ್‌ ಅಡಿ ಎಫ್‌ಐಆರ್‌ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಸಂವಿಧಾನವೇ ಸಾರ್ವಭೌಮ’ ಎನ್ನುವ ಸತ್ಯ ಮರೆತರೇ ಧನಕರ್?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಬೆಳಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿಯ ಬಳಿ ಬೈಕ್‌ಗೆ ಕಾರು ತಾಗಿದೆ. ಇದಕ್ಕೆ ಕಾರನ್ನು ಅಡ್ಡ ಹಾಕಿ ಗುದ್ದಿದ್ದು ಯಾಕೆ ಎಂದು ಕೇಳಿದೆ. ಪ್ರಶ್ನೆ ಮಾಡಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾನೆ.

ನಾನು ಆಕ್ಷೇಪ ವ್ಯಕ್ತಪಡಿಸಿದಾಗ ನಿರಂತರವಾಗಿ ಹಲ್ಲೆ ಮಾಡಿದ್ದಾನೆ. ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಎಸೆದಿದ್ದಾನೆ. ಜೊತೆಗೆ ಬೈಕ್‌ ಕೀ ಎಸೆಯುತ್ತಾನೆ. ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದ ಎಂದು ವಿಕಾಸ್‌ ದೂರು ನೀಡಿದ್ದಾರೆ. ಈ ಮೊದಲು ವಿಂಗ್‌ ಕಮಾಂಡರ್‌ ತನ್ನ ಮೇಲೆ ಹಲ್ಲೆಯಾಗಿರುವುದಾಗಿ ಸುಳ್ಳಿನ ಕತೆ ಕಟ್ಟಿದ್ದ. ದೂರಿನ ಆಧಾರದ ಮೇಲೆ ಟೆಕಿ ವಿಕಾಸ್‌ ಅವರನ್ನು ಕೂಡ ಬಂಧಿಸಲಾಗಿತ್ತು.

ವಿಂಗ್ ಕಮಾಂಡರ್ ಮೇಲೆ ಹಲ್ಲೆ ಪ್ರಕರಣ ಸಂಬಂಧ ವಿಂಗ್ ಕಮಾಂಡರ್ ಮಾಡಿದ್ದ ವಿಡಿಯೋದಲ್ಲಿ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. ಯುವಕ ವಿಕಾಸ್ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಈ ರೀತಿಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಬಿಂಬಿಸಿದ್ದರು. ಆದರೆ ಅಸಲಿ ಕಾರಣವೇ ಬೇರೆ ಇದೆ. ವಿಕಾಸ್‌ಗೆ ಡಿಚ್ಚಿ ಹೊಡೆಯಲು ಹೋಗಿ ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಬರಿಸಿಕೊಂಡಿದ್ದಾರೆ.

ಗಲಾಟೆ ನಡೆದ ಸಂದರ್ಭ ವಿಂಗ್‌ ಕಮಾಂಡರ್‌ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ ವಿಕಾಸ್‌ ಬೈಕ್‌ ಕೀಯನ್ನು ಬೈಕಿನಿಂದ ತೆಗೆದು ತಮ್ಮ ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್‌ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಹೋದ ಸಂದರ್ಭ ವಿಕಾಸ್ ಕೈಯಲ್ಲಿದ್ದ ಗಾಡಿ ಕೀ ವಿಂಗ್ ಕಮಾಂಡರ್ ಹಣೆಗೆ ತಗುಲಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವಿಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ ಎಂದು ಸುಳ್ಳು ಹೇಳಿದ್ದಾರೆ.

ಭಾಷೆಯ ವಿಚಾರ ಹಾಗೂ ಸ್ಥಳೀಯರು ಯಾರೂ ನನ್ನ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವೀಡಿಯೋ ಮಾಡಿ ಸಿಂಪತಿಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ವಿಂಗ್ ಕಮಾಂಡರ್ ಕಾರಿನ ಡ್ಯಾಶ್‌ಕ್ಯಾಮೆರಾ ವೀಡಿಯೋ ಬಿಡುಗಡೆ ಮಾಡದೇ ಹಲ್ಲೆಯ ವಿಡಿಯೋ ಅಷ್ಟೆ ಅಪ್ಲೋಡ್ ಮಾಡಿದ್ದರು. ಸಿಸಿಟಿವಿ ದೃಶ್ಯಗಳು ಬೆಳಕಿಗೆ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ.

ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ ವಿಕಾಸ್ ಪಕ್ಕೆಲುಬು ನೋವಿನಿಂದ ಬಳಲುತ್ತಿದ್ದಾರೆ. ಸದ್ಯ ಹಲ್ಲೆಗೊಳಗಾದ ವಿಕಾಸ್ ಪರ ಹಲವು ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು. ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಇದೀಗ ವಿಕಾಸ್ ನೀಡಿದ ದೂರನ್ನು ಸ್ವೀಕರಿಸಿದ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...